ಹೊನ್ನಾವರ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಅನಿಲಗೋಡ ಶಾಲೆಯ‌ ಸಮೀಪ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಅನಿಲಗೋಡದ ನಿವಾಸಿ ಮಂಜುನಾಥ ಗಣಪ ಅಂಬಿಗ (53) ಎಂಬವರು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸಕ್ಕೆಂದು ಬೇರಂಕಿಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಅನಿಲಗೋಡ ಜನತಾ ವಿದ್ಯಾಲಯದ ಹಿಂಭಾಗದಲ್ಲಿ … Continued

ಧಾರವಾಡದಿಂದ ಕಿಡ್ನ್ಯಾಪ್‌ ಆಗಿದ್ದ ಮಕ್ಕಳು ದಾಂಡೇಲಿ ಬಳಿ ಪತ್ತೆ ; ಸಿಕ್ಕಿಬಿದ್ದ ವ್ಯಕ್ತಿ…

ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ … Continued

ಅಂಕೋಲಾ : ಬ್ಯಾಂಕ್‌ ದರೋಡೆಗೆ ಯತ್ನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಲಾಗಿದೆ. ಬ್ಯಾಂಕಿನ ಹಿಂಬದಿಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗುವ ಪ್ರಯತ್ನ ಮಾಡಲಾಗಿದೆ. ಬ್ಯಾಂಕಿನ ಸ್ಟ್ರಾಂಗ್ ರೂಮ್ ಗೋಡೆಯನ್ನು ಸಹ ಒಡೆಯುವ ಪ್ರಯತ್ನ ನಡೆದಿದೆ. ಬ್ಯಾಂಕ್ ಆಫ್ ಬರೋಡಾದ ಸುಂಕಸಾಳ ಶಾಖೆ ರಾಷ್ಟ್ರೀಯ ಹೆದ್ದಾರಿ 63 … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹರಿಯುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕವಾಗಿದೆ. ಪಶ್ಚಿಮ ಘಟ್ಟಕ್ಕೆ ಹಾಗೂ ಇಲ್ಲಿನ ಜನಜೀವನಕ್ಕೆ ಶಾಶ್ವತ ಹಾನಿ ಮಾಡುವ ಇಂತಹ ಯೋಜನೆಗಳನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಯೋಜನೆ ಸಂಪೂರ್ಣವಿನಾಶಕಾರಿಯಾಗಿದ್ದರಿಂದ ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು ಎಂದು ಸೋಂದಾ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ : ಶಿರಸಿ ಸಮಾವೇಶದ 10 ನಿರ್ಣಯಗಳು…

ಶಿರಸಿ: ಪಶ್ಚಿಮ ಘಟ್ಟದ ಜೀವನಾಡಿಗಳಾದ ಬೇಡ್ತಿ, ಅಘನಾಶಿನಿ ಮತ್ತು ಶರಾವತಿ ಕಣಿವೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿಹತ್ತು ಪ್ರಮುಖ ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಿದೆ. * ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಹಾಗೂ ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಬೃಹತ್ ಜಲವಿದ್ಯುತ್ ಯೋಜನೆಗಳನ್ನು ಜಾರಿಗೊಳಿಸಬಾರದು. ಈ ಸಂದರ್ಭದಲ್ಲಿ ಎತ್ತಿನಹೊಳೆ ನದಿ ತಿರುವು ಯೋಜನೆಯ ವಿಫಲತೆಯನ್ನು … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಜನರು ಚುನಾವಣೆ ಬಹಿಷ್ಕರಿಸುವ ಕಾಲವೂ ಬರಬಹುದು- ಸರ್ಕಾರಕ್ಕೆ ಸ್ವರ್ಣವಲ್ಲೀ ಶ್ರೀಗಳ ಎಚ್ಚರಿಕೆ

ಶಿರಸಿ: ನದಿಗಳ ರಕ್ಷಣೆಯ ಈ ಹೋರಾಟದಲ್ಲಿ ಉತ್ತರ ಜಿಲ್ಲೆಯ ಜನರಲ್ಲಿ ಒಗ್ಗಟ್ಟು ಅನಿವಾರ್ಯ. ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದಿದ್ದರೆ, ಅವೈಜ್ಞಾನಿಕವಾಗಿ ಜಾರಿಗೆ ತರಲು ಉದ್ದೇಶಿಸಿರುವ ಅಘನಾಶಿನಿ ಮತ್ತು ಬೇಡ್ತಿ ನದಿ ತಿರುವು ಯೋಜನೆಯನ್ನು ಕೈಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ಒಂದು ವೇಳೆ ರಾಜಕಾರಣಿಗಳು ಪಕ್ಷಾತೀತವಾಗಿ ಸಂಘಟಿತರಾಗದಿದ್ದರೆ, ಮುಂಬರುವ ದಿನಗಳಲ್ಲಿ ಸಾಮೂಹಿಕವಾಗಿ ಚುನಾವಣೆಗಳನ್ನು ಬಹಿಷ್ಕರಿಸುವ ಕಾಲ ಬರಬಹುದು ಎಂದು … Continued

ಬೇಡ್ತಿ, ಅಘನಾಶಿನಿ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಭಾನುವಾರ (ಜ.11) ಬೃಹತ್‌ ಸಮಾವೇಶ

ಶಿರಸಿ : ಪಶ್ಚಿಮಘಟ್ಟ ಪ್ರದೇಶದ ಪ್ರಮುಖ ನದಿಗಳಾದ ಬೇಡ್ತಿ, ಅಘನಾಶಿನಿ ನದಿಗಳ ಜೋಡಣೆ ಹಾಗೂ ಶರವಾತಿ ಭೂಗತ ಜಲವಿದ್ಯುತ್‌ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಎಂಇಎಸ್ ಕಾಲೇಜು ಮೈದಾನದಲ್ಲಿ ಭಾನುವಾರ (ಜನವರಿ11) ಮಧ್ಯಾಹ್ನ 2 ಗಂಟೆಯಿಂದ ನಡೆಯುವ ಬೃಹತ್ ಜನಸಮಾವೇಶಕ್ಕೆ … Continued

ನದಿಗಳು ನಮ್ಮ ಜೀವ ವಿಮೆ : ನದಿ ಜೋಡಣೆ ಹೆಸರಿನಲ್ಲಿ ಇವನ್ನು ಒತ್ತೆ ಇಡಲು ಬಿಡೆವು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಥಳೀಯ ಜನರ ವಿರುದ್ಧ ನಡೆಯಲು ಸಂವಿಧಾನದಲ್ಲಿ ಅವಕಾಶವಿಲ್ಲದಿದ್ದರೂ ಶತಾಯಗತಾಯ ಬೇಡ್ತಿ–ವರದಾ ನದಿಜೋಡಣೆ ಹಾಗೂ ಅಘನಾಶಿನೀ–ವೇದಾವತೀ ನದಿ ಜೋಡಣೆಗೆ ಕಂಕಣ ತೊಟ್ಟವರಂತೆಯೇ ಮುನ್ನುಗ್ಗುತ್ತಿರುವುದನ್ನು ತಡೆಯುವ ಹೋರಾಟಕ್ಕೆ ಸರ್ವ ಪ್ರಯತ್ನವನ್ನೂ ಮಾಡುವುದು ಅತ್ಯವಶ್ಯಕವಾದ ಕಾರ್ಯವಾಗಬೇಕಾಗಿದೆ. ಅದರ ತೀರ್ಮಾನ ಜನವರಿ 11ರಂದು ನಡೆಯಲಿರುವ ಬೃಹತ್ ಸಮಾವೇಶ.   ನದಿಯ ಹರಿವು ಮೇಲ್ನೋಟಕ್ಕೆ ಕಾಣುವುದೆಷ್ಟೋ ಅದರ … Continued

ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆಗೆ ವಿರೋಧ ; ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಹೋರಾಟಕ್ಕೆ ಸಂಪೂರ್ಣ ಬೆಂಬಲ ; ಶಾಸಕ ಭೀಮಣ್ಣ ನಾಯ್ಕ

ಶಿರಸಿ : ಬೇಡ್ತಿ ಹಾಗೂ ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ಸಾರ್ವಜನಿಕರೊಂದಿಗೆ ನಾವು ಒಕ್ಕೊರಲಿನಿಂದ ವಿರೋಧಿಸುತ್ತಿದ್ದೇವೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿನ‌ ಸಮಾವೇಶವನ್ನು ನಾವು ಬೆಂಬಲಿಸುತ್ತೇನೆ. ಸರ್ಕಾರ ಈ ಯೋಜನೆ ಕೈಬಿಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಒತ್ತಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಮಾತನಾಡಿದ ಅವರು, ಬೇಡ್ತಿ – ವರದಾ ಹಾಗೂ ಅಘನಾಶಿನಿ – … Continued

ಕೂಜಳ್ಳಿ : ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಖ್ಯಾತ ಹಿಂದುಸ್ತಾನಿ ಬಾನ್ಸುರಿ (ಕೊಳಲು)ವಾದಕ, ಮುಂಬೈನ ನಿತ್ಯಾನಂದ ಹಳದೀಪುರ ಅವರಿಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನೀಡುವ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅವರು, ಪಂ. ಷಡಕ್ಷರಿ … Continued