ಯಲ್ಲಾಪುರ : ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಯಲ್ಲಾಪುರ: ವಿವಾಹಿತ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ  ಪಟ್ಟಣದ ಕಾಳಮ್ಮ ನಗರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ಮಹಿಳೆಯನ್ನು ರಂಜಿತಾ ಮಲ್ಲಪ್ಪ ಬನ್ಸೋಡೆ (30) ಎಂದು ಗುರುತಿಸಲಾಗಿದ್ದು, ಆರೋಪಿ ರಫಿಕ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ … Continued

ಕುಮಟಾ : ಜನವರಿ 4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಶಿರಸಿ-ಕುಮಟಾ ರಸ್ತೆಯಲ್ಲಿ ಡಿಸೆಂಬರ್‌ 30 ರಿಂದ ಬಸ್ ಸಂಚಾರ ; ಜಿಲ್ಲಾಧಿಕಾರಿ

ಕಾರವಾರ : ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ಡಿಸೆಂಬರ್‌ 30ರಿಂದ ಪುನಃ ಬಸ್ ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ವರದಿ ಆಧಾರದ ಮೇಲೆ ಸದರಿ ರಸ್ತೆಯಲ್ಲಿ ಡಿಸೆಂಬರ್‌ 30 … Continued

ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಕೆರೆಗದ್ದೆ ಆಯ್ಕೆ

ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ 3 ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ವಿಜಯ ಕರ್ನಾಟಕ ವರದಿಗಾರ ಕೃಷ್ಣಮೂರ್ತಿ ಕೆರೆಗದ್ದೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶನಿವಾರ ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಚುನಾವಣೆಯಲ್ಲಿ ಕೃಷ್ಣಮೂರ್ತಿ ಕೆರೆಗದ್ದೆ 23 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ವಿಶ್ವವಾಣಿ ಜಿಲ್ಲಾ ವರದಿಗಾರ್ತಿ ವಿನುತಾ ಹೆಗಡೆ 6 ಮತಗಳನ್ನು ಪಡೆದರು. … Continued

ಕರ್ನಾಟಕದ 4 ಪಟ್ಟಣ ಪಂಚಾಯತಗಳ ಚುನಾವಣೆ ಫಲಿತಾಂಶ | ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ; ಬಿಜೆಪಿಗೆ ಭರ್ಜರಿ ಜಯ

ಬೆಂಗಳೂರು :  ರಾಜ್ಯದ ನಾಲ್ಕು ಪಟ್ಟಣ ಪಂಚಾಯತಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ಎಲ್ಲ ನಾಲ್ಕೂ ಪಟ್ಟಣ ಪಂಚಾಯತಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬಜಪೆ ಹಾಗೂ ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ, ಬೆಂಗಳೂರು … Continued

ಹೊನ್ನಾವರ : ಮಂಕಿ ಪಟ್ಟಣ ಪಂಚಾಯತದ ಮೊದಲ ಚುನಾವಣೆ : ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್ಸಿಗೆ ಹಿನ್ನಡೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪಟ್ಟಣ ಪಂಚಾಯತ ಆಗಿ ಘೋಷಣೆಯಾದ ನಂತರ ಮಂಕಿಯಲ್ಲಿ ನಡೆದ ಮೊದಲ ಮಹತ್ವದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಭೂತಪೂರ್ವ ಗೆಲುವು ಸಾಧಿಸಿದ್ದು, ಆಡಳಿತದ ಚುಕ್ಕಾಣಿ ಹಿಡಿದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. ಸಚಿವ ಮಂಕಾಳ ವೈದ್ಯರಿಗೆ ಸ್ವಕ್ಷೇತ್ರದಲ್ಲಿ  ಹಿನ್ನಡೆಯಾದರೆ,ಮಾಜಿ ಸಚಿವ … Continued

ಜ.4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಹೊನ್ನಾವರ : ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರ ಸಾವು

ಹೊನ್ನಾವರ : ಅರಬ್ಬೀ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿದ್ಯಾರ್ಥಿಗಳಾದ ಮದನ್ ನಾರಾಯಣ ಖಾರ್ವಿ (17) ಮತ್ತು ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ 6:30ರ ಸುಮಾರಿಗೆ ತಮ್ಮ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ … Continued

ಉತ್ತರ ಕನ್ನಡ ಜಿಲ್ಲೆ ಮೂಲದ ವಿಜ್ಞಾನಿ ಉದ್ಯಮಿ ಡಾ. ಶ್ರೀಹರಿ ಚಂದ್ರಘಾಟಗಿಗೆ ಜಪಾನಿನ ಉನ್ನತ ಪ್ರಶಸ್ತಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ  ಮೂಲದ ಖ್ಯಾತ ವಿಜ್ಞಾನಿ ಮತ್ತು ಉದ್ಯಮಿಯಾಗಿರುವ ಡಾ. ಶ್ರೀಹರಿ ಚಂದ್ರಘಾಟಗಿ ಅವರು ಜಪಾನಿನ ಉದ್ಯಮ ತಂತ್ರಜ್ಞಾನದ ಅತ್ಯುನ್ನತ ಪ್ರಶಸ್ತಿಯಾದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮಾಡಿದ ಉನ್ನತ ಸಾಧನೆಗಾಗಿ ಶ್ರೀಹರಿಯವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ, ಅಷ್ಟೇ ಅಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿ … Continued

ಶಿರಸಿ ; ಡ್ರೀಮ್‌ ಪಾರ್ಕ್‌ ದ್ವಿತೀಯ ವಾರ್ಷಿಕೋತ್ಸವ

 ಶಿರಸಿ: ಹುಬ್ಬಳ್ಳಿ ರಸ್ತೆಗೆ ಹೊಂದಿಕೊಂಡು, ನಗರದ ಹೊರವಲಯದಲ್ಲಿ,  ಫೆಂಟಾಸಿಯಾ, ಗೋಕುಲ್, ಮಾರಿಗೋಲ್ಡ್, ಮತ್ತು ಮ್ಯಾಗ್ನೋಲಿಯಾ ಬಹುಮಹಡಿ ಕಟ್ಟಡ ಸಮುಚ್ಚಯಗಳು, ಹಿರಿಯ ನಾಗರಿಕರಿಗಾಗಿನ ವಾತ್ಸಲ್ಯಮನೆ, ನಿಸರ್ಗ ಚಿಕಿತ್ಸಾಲಯ ಮತ್ತು ಅನೇಕ ಖಾಸಗಿ ಮನೆ ಮತ್ತು ನಿವೇಶನಗಳನ್ನು ಹೊಂದಿರುವ ಡ್ರೀಮ್ ಪಾರ್ಕಿನ ನಿವಾಸಿಗಳ ಸಂಘದವರು ನ. 29ರಂದು ಏರ್ಪಡಿಸಿದ್ದ ದ್ವಿತೀಯ ವಾರ್ಷಿಕೋತ್ಸವವು ಅತ್ಯಂತ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ … Continued