ಪೊಲೀಸರ ಮೇಲೆ ಹಲ್ಲೆ ಪ್ರಕರಣ : ಯಲ್ಲಾಪುರ ಮಾಜಿ ಶಾಸಕರ ಪುತ್ರನ ಬಂಧನ

ಕಾರವಾರ : ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ ಅವರ ಪುತ್ರ ಬಾಪು ಗೌಡ ಪಾಟೀಲನನ್ನು ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ 2011 ರಲ್ಲಿ ಮುಂಡಗೋಡ ಮುಂಡಗೋಡ … Continued

ಶಿರಸಿ : ನರೆಬೈಲ್ ಸೋಮೇಶ್ವರ ದೇವಾಲಯದ ಶಿವಲಿಂಗದ ಮೇಲೆ ಗೀಚಿ ಕಿಡಿಗೇಡಿಗಳಿಂದ ವಿಕೃತಿ

ಶಿರಸಿ: ದೇವಸ್ಥಾನದ ಒಳ ಪ್ರವೇಶಿಸಿದ ಕಿಡಿಗೇಡಿಗಳು ದೇವರ ಮೂರ್ತಿಯ ಮೇಲೆ ಸುಣ್ಣದ ಪೀಸ್‌ನಿಂದ ಬರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೆಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಶಿವಲಿಂಗದ ಮೇಲೆ ಜೆಸಿಸಿ 1026 ಎಂದು   ಕಿಡಿಗೇಡಿಗಳು ಇಂಗ್ಲಿಷ್‌ನಲ್ಲಿ ಬರೆದಂತೆ ತೋರುತ್ತದೆ.. ದೇವಾಲಯದಲ್ಲಿ … Continued

ಫೆಬ್ರವರಿ 22ರಂದು ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಮಾರಂಭ : ಫೆ. 18 ರಿಂದ ವಿವಿಧ ಕಾರ್ಯಕ್ರಮಗಳು

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಶಿಷ್ಯ ಸ್ವೀಕಾರ ಮಹೋತ್ಸವ ಸ್ವರ್ಣವಲ್ಲೀ ಮಠದಲ್ಲಿ ಫೆ. ೨೨ರಂದು ನಡೆಯಲಿದ್ದು, ಈ ನಿಮಿತ್ತ ಫೆ.೧೮ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಗಳನ್ನು ಆಯೋಜಿಸಲಾಗಿದೆ ಎಂದು ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಹೇಳಿದರು. ಇಲ್ಲಿನ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ … Continued

ಕರ್ನಾಟಕದ ಮತ್ತೊಬ್ಬ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲು ಸ್ಪರ್ಧೆಯಲ್ಲಿದ್ದ ಮೂರನೇ ರಾಮಲಲ್ಲಾ (Ram Lalla) ವಿಗ್ರಹದ ಫೋಟೋ ಕೂಡ ಬಿಡುಗಡೆಯಾಗಿದೆ. ಶಿಲ್ಪಿ ಗಣೇಶ್ ಭಟ್ (Ganesh Bhatt) ಅವರು ಕಪ್ಪು ಕಲ್ಲಿನಿಂದ ಈ ವಿಗ್ರಹ ಕೆತ್ತಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಈಗ ಒಂದು ರಾಮಲಲ್ಲಾ ವಿಗ್ರಹವು ಪ್ರತಿಷ್ಠಾಪನೆಯಾಗಿದ್ದರೆ, ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿಯ ಗಣೇಶ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 24ರಂದು ಪಂ.ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪಂ.ವಿಶ್ವನಾಥ ಕಾನ್ಹರೆಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ : ಪಂಡಿತ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ಸಂಗೀತೋತ್ಸವ ನಡೆಯಲಿದೆ. ಈ ವರ್ಷದ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮುಂಬೈನ … Continued

ಶಿರಸಿ: ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರು ಪಾಲು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಸ್ನಾನಕ್ಕೆ ತೆರಳಿದ್ದ ಶಿರಸಿ ನಗರದ ಒಂದೇ ಕುಟುಂಬದ ಐವರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ನೀರು ಪಾಲಾದವರನ್ನು ಶಿರಸಿ ನಗರದ ರಾಮನಬೈಲಿನ ಮಹಮದ್ ಸಲೀಂ (44), ಉಮರ್ ಸಿದ್ದೀಕ್ (14), ನಾಬಿಲ್ (22), ನಾದಿಯಾ ಶೇಖ್ … Continued

ಶಿರಸಿ: ಕಾಡುಬೆಕ್ಕು ಹಿಡಿಯಲು ವಿದ್ಯುತ್ ಕಂಬ ಏರಿದ ಚಿರತೆ, ವಿದ್ಯುತ್ ತಗುಲಿ ಎರಡೂ ಸಾವು

ಶಿರಸಿ: ಕಾಡು ಬೆಕ್ಕು ಹಿಡಿಯಲು ವಿದ್ಯುತ್‌ ಕಂಬ ಏರಿದ ಚಿರತೆಯೊಂದು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಸಮೀಪದ ಬೆಳಗಲ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಚಿರತೆ ಬೇಟೆಗೆಂದು ಅಟ್ಟಿಸಿಕೊಂಡು ಬಂದಾಗ ಜೀವ ಉಳಿಸಿಕೊಳ್ಳಲು ಕಾಡು ಬೆಕ್ಕು ವಿದ್ಯುತ್‌ ಕಂಬ ಏರಿ ಕುಳಿತಿತ್ತು. ತನ್ನ ಬೇಟೆ ಹಿಡಿಯುವ … Continued

ಕುಮಟಾ: ಮಹಿಳೆ ಸಮುದ್ರಕ್ಕೆ ಹಾರಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಹಿಳೆ ಪತ್ತೆ ಹಚ್ಚಿದ ಪೊಲೀಸರು, ಸಾವಿನ ನಾಟಕವಾಡಿದ್ದು ಬಯಲಾಯ್ತು…!

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಾಂತಗಲ್ ಗ್ರಾಮದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕುಮಟಾದ ಹೆಡ್‌ಬಂದರಿನಲ್ಲಿ ಸಮುದ್ರಕ್ಕೆ ಹಾರಿದ್ದಳು ಎಂಬ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ತನ್ನ ಎರಡು ಮಕ್ಕಳನ್ನ ನಡು ರಸ್ತೆಯಲ್ಲಿ ಬಿಟ್ಟು ಸಮುದ್ರದಲ್ಲಿ ಮುಳುಗಿದ ನಾಟಕವಾಡಿದ್ದ ಸಾಂತಗಲ್ ಗ್ರಾಮದ ನಿವೇದಿತಾ ಭಂಡಾರಿ ಹೊನ್ನಾವರದ ಬಾಡಿಗೆ ಮನೆಯಲ್ಲಿರುವಾಗ ಪೊಲೀಸರ ಕೈಗೆ ಸಿಕ್ಕಿ … Continued

ಯಲ್ಲಾಪುರ ಬಳಿ ಬಸ್‌ ಪಲ್ಟಿ; ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63ರ ಹುಬ್ಬಳ್ಳಿ ರಸ್ತೆ ಮಿಲನ್ ಹೋಟೆಲ್ ಬಳಿ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ಉರುಳಿದ ಪರಿಣಾಮ ಚಾಲಕ ಸಾವಿಗೀಡಾಗಿ, 25 ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್ … Continued

ಕಾರವಾರ : ಬೈತ್‌ಕೋಲದಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು | ವೀಡಿಯೊ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆ ಪರಿಣಾಮ ಕಾರವಾರದ ಬೈತ್‌ಕೋಲದಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆ (Rain) ನೀರು ನುಗ್ಗಿದೆ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೌಕಾಪಡೆ ರಸ್ತೆ ನಿರ್ಮಿಸುತ್ತಿದ್ದುದರಿಂದ ಹೀಗಾಗಿದೆ ಎನ್ನಲಾಗಿದೆ. ಗುಡ್ಡ ಕುಸಿದು ಮಣ್ಣುಗಳು ರಸ್ತೆಮೇಲೆ ಬಿದ್ದಿದೆ. … Continued