ಕಾರವಾರ: ಹೊಟೇಲ್‌ ಬಾಲ್ಕನಿಯಿಂದ ಬಿದ್ದು ರಷ್ಯಾದ ವ್ಯಕ್ತಿಗೆ ಗಂಭೀರ ಗಾಯ

ಕಾರವಾರ : ಹೊಟೇಲ್‌ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು ರಷ್ಯಾದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಿದ್ದು ಗಾಯಗೊಂಡ ವ್ಯಕ್ತಿಯನ್ನು ರಷ್ಯಾದ ಪ್ರಜೆ ಇವಾನ್‌ ಡೆನೆವಾ (೪೦) ಎಂದು ಗುರುತಿಸಲಾಗಿದ್ದು, ರಾತ್ರಿ ವೇಳೆ ಹೊಟೇಲಿನ ಬಾಲ್ಕನಿ ಮೇಲೆ ನಿಂತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. … Continued

ಯಾವುದೇ ವಸ್ತು- ಸಂಗತಿ ವರ್ತಮಾನಕ್ಕೆ ಅನ್ವಯವಾದರೆ ಅದು ಪ್ರಸ್ತುತವಾಗುತ್ತದೆ ; ʼಪುರುಷ ಸೂಕ್ತ ಕೃತಿʼ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾರಾಯಣ ಯಾಜಿ

ಶಿರಸಿ : ಯಾವುದೇ ಕೃತಿಗಳು, ವಸ್ತು- ಸಂಗತಿಗಳು ವರ್ತಮಾನಕ್ಕೆ ಅನ್ವಯವಾಗುವಂತಿದ್ದರೆ ಅದು ಎಲ್ಲ ಕಾಲಕ್ಕೂ ಪ್ರಸ್ತುತವಾಗುತ್ತವೆ. ರಘುಪತಿ ಹೆಗಡೆ ಬೆಳ್ಳಿಕೇರಿಯವರ ಕೃತಿಯಾದ “ಪುರುಷ ಸೂಕ್ತ” ಕೃತಿ ಪ್ರಸ್ತುತ ಕಾಲದಲ್ಲಿ ಅಗತ್ಯವಾಗಿ ತಿಳಿದುಕೊಳ್ಳಲೇ ಬೇಕಾದ ವೈಜ್ಞಾನಿಕ ವಿಷಯಗಳನ್ನು ಒಳಗೊಂಡ ಒಂದು ಕೃತಿಯಾಗಿದೆ. ಇದಕ್ಕೆ ಕಾರಣ ಅವರು ಆರಿಸಿಕೊಂಡಿರುವ ವಸ್ತು ಎಂದು ಲೇಖಕ, ಖ್ಯಾತ ತಾಳಮದ್ದಲೆ ಅರ್ಥಧಾರಿ ನಾರಾಯಣ … Continued

ವೀಡಿಯೊ..| ಶಿರಸಿ ; ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಕೊಪ್ಪದಲ್ಲಿ ತಡರಾತ್ರಿ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ದೀರ್ಘ ಕಾರ್ಯಾಚರಣೆಯ ನಂತರ ರಕ್ಷಿಸಿದ್ದಾರೆ. ಸ್ಥಳೀಯ ಸುರೇಶ ಹೆಗಡೆ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆ ಕಂಡ ಮನೆಯವರು ಒಂದು ಕ್ಷಣ ಗಾಬರಿಗೊಂಡಿದ್ದರು. ನಂತರ ಈ ವಿಷಯವನ್ನು ಅರಣ್ಯ ಇಲಾಖೆಯವರ ಗಮನಕ್ಕೆ … Continued

ಹೊನ್ನಾವರ : ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

ಹೊನ್ನಾವರ: ಖ್ಯಾತ ಜಾನಪದ ತಜ್ಞ, ನಾಟಕಕಾರ, ಕವಿ, ಸಾಹಿತಿ ಡಾ. ಎನ್.ಆರ್. ನಾಯಕ (90) (Dr. N.R. Nayak) ಅವರು ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ತತೆಯಿಂದ ಮೂರ್ನಾಲ್ಕು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬರು ಮಗಳು ಇದ್ದಾರೆ. … Continued

ಕಾರವಾರ : ಕೈಗಾ-ಬಾರೆ ರಸ್ತೆಯಲ್ಲಿ ಆರಾಮವಾಗಿ ನಡೆದುಕೊಂಡು ಹೋದ ಹುಲಿ; ವೀಡಿಯೊ ವೈರಲ್‌

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ-ಬಾರೆ ರಸ್ತೆಯಲ್ಲಿ ಹುಲಿಯೊಂದು ಆರಾಮವಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರವಾರ ತಾಲೂಕಿನ ಕೈಗಾ-ಬಾರೆ ರಸ್ತೆಯಲ್ಲಿ ಶನಿವಾರ ಬೆಳಗ್ಗೆ 11ರ ಸುಮಾರು ಹುಲಿ ಶಾಂತವಾಗಿ ನಡೆದುಕೊಂಡು ಹೋಗಿರುವ ವೀಡಿಯೊ ವೈರಲ್‌ ಆಗಿದೆ. ಇದೇ ರಸ್ತೆಯ ಮೂಲಕ ಸಂಚಾರ ಮಾಡುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಮೂಲಕ … Continued

ಹೊನ್ನಾವರ | ಹಸು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಸುವೊಂದನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮತ್ತು ಉಡುಪಿ ಜಿಲ್ಲೆಗಳ ನಿವಾಸಿಗಳಾದ ಮೊಹಮ್ಮದ್ ಜಾಫರ್ ಜಕ್ವಾನ್ ಮತ್ತು ಸಬೀಲ್ ಬೆಟ್ಟಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಸೆ. 4ರಂದು ಮಧ್ಯರಾತ್ರಿ ಅವಧಿಯಲ್ಲಿ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ಮಲಗಿದ್ದ … Continued

ಭಟ್ಕಳ : ನೂರಾರು ಜಾನುವಾರುಗಳ ಮೂಳೆಗಳ ರಾಶಿ ಪತ್ತೆ..!

ಭಟ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿ ಮುಗ್ದೂಂ ಕಾಲೋನಿಯ ಗುಡ್ಡದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೂರಾರು ಜಾನುವಾರುಗಳ ಮೂಳೆಗಳು ಮತ್ತು ಅಸ್ಥಿಪಂಜರಗಳು ರಾಶಿ ಬಿದ್ದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ. ಪುರಸಭೆ ವ್ಯಾಪ್ತಿಯ ಮುಗ್ದೂಮ್ ಕಾಲೋನಿಯ ಗುಡ್ಡ ಪ್ರದೇಶದಲ್ಲಿ ನೂರಾರು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಹಾಗೂ … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued

ಶಿರಸಿ : ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿರಸಿ: ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯ ಮೃತ ದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued