ವೀಡಿಯೊ…| ಕಾರವಾರ: ಮನೆಯಲ್ಲಿ ಹಚ್ಚಿದ್ದ ದೀಪದಿಂದ ಧಗಧಗನೆ ಹೊತ್ತಿ ಉರಿದ ಮನೆ

ಕಾರವಾರ: ಮನೆಯೊಂದಕ್ಕೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಹೊತ್ತಿ ಉರಿದು ಅಪಾರ ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದಗದ್ದಾದಲ್ಲಿ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ನಂದನಗದ್ದಾ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಇರುವ ಶಾಂತಾರಾಮ ದೇಸಾಯಿ ಎಂಬುವರ ಹಂಚಿನ ಮನೆಗೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ … Continued

ಯಲ್ಲಾಪುರ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ

ಕಾರವಾರ : ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಕಲಾವಿದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಸಿದ್ದಿ ಸಮುದಾಯಕ್ಕೆ ಸೇರಿದ ಚಂದ್ರಶೇಖರ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಾದ್ಯಂತ ಹೆಸರು ಮಾಡಿದ್ದರು. ನಿನಾಸಂನಲ್ಲಿ ನಾಟಕ … Continued

ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!

ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued

ಅಮೆರಿಕ ವೇದಿಕ್ ವೆಲ್ನೆಸ್ ವಿವಿ ವೈಬ್ರನ್ಸ್ 2025 ಟ್ಯಾಲೆಂಟ್‌ ಸ್ಪರ್ಧೆ : ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ

ಕುಮಟಾ : ಅಮೆರಿಕದ ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ (ವಿಡಬ್ಲ್ಯೂಯು) ಆಯೋಜಿಸಿದ್ದ ಭಾರತೀಯ ಕಲೆ, ಸಂಗೀತದ ಟ್ಯಾಲೆಂಟ್‌ ಶೋ‌ ಸ್ಪರ್ಧೆ ವೈಬ್ರನ್ಸ್ 2025 ಸ್ಪರ್ಧೆಯಲ್ಲಿ ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ ಆಯೋಜಿಸುವ ವೈಬ್ರನ್ಸ್ ಹೆಸರಿನ ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ … Continued

ವೀಡಿಯೊ..| ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭೂ ಕುಸಿತ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ  ಭಾನುವಾರ ಭೂ ಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗಿದೆ. ದೇವಿ ಮನೆಯ ಕ್ಷೇತ್ರ ಪಾಲೇಶ್ವರ ದೇವಸ್ಥಾನಕ್ಕೆ ಇಳಿಯುವ ಮೆಟ್ಟಿಲುಗಳಿಗೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ದೇವಸ್ಥಾನದ ಮೆಟ್ಟಿಲುಗಳಿಂದ ಸುಮಾರು 20-25 ಅಡಿಗಳಷ್ಟು ದೂರದಲ್ಲಿ ಭೂ … Continued

ವಿಪರೀತ ಮಳೆ ಮುನ್ಸೂಚನೆ ; ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 26ರಂದು ರಜೆ ಘೋಷಣೆ

ಕಾರವಾರ : ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು, ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡಜಿಲ್ಲೆಯ ಐದು ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಶನಿವಾರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ … Continued

ಕಾರವಾರ: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರವಾರ : ಗಾಳಿ ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಸನಿಹದ ಆಸ್ಪತ್ರೆಯ ಮುಂಭಾಗದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಮರದ ಕೆಳಗಿದ್ದ … Continued

ಶಿರಸಿ : ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿರಸಿ : ಜಾಗದ ವಿಷಯವೊಂದಕ್ಕೆ ಸಂಬಂಧಿಸಿದಂತೆ ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಶಿರಸಿ ನಗರಸಭೆಯ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ನಗರಸಭೆಯ ಕಂದಾಯ ಅಧಿಕಾರಿ ಆರ್. ಎಂ. ವರ್ಣೇಕರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಕಂದಾಯ ಅಧಿಕಾರಿ ಆರ್ ಎಂ.ವೆರ್ಣೇಕರ ಹಾಗೂ ಸದಸ್ಯ ಗಣಪತಿ ನಾಯ್ಕ ದೂರುದಾರರಾದ ರಮೇಶ … Continued

ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್‌ ಮಟ್ಟ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued