ಕಾರವಾರದಲ್ಲಿ ಕಡಲತೀರದಲ್ಲಿ ಕಡಲಾಮೆ ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡಜಿಲ್ಲೆಯ ಕಾರವಾರ ನಗರದ ಟಾಗೋರ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದ್ದು, ಮಾಹಿತಿ ತಿಳಿದ ಅರಣ್ಯ ಇಲಾಖೆ ಹಾಗೂ ಮರೈನ್ ಎಸ್‌ಪಿಎಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಕಡಲಾಮೆ ಕೆಲ ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆಯಿದ್ದು, … Continued

ಕುಮಟಾ : ತದಡಿ ಅಳಿವೆಯಲ್ಲಿ ಎರಡೇ ದಿನದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್‌ ಮುಳುಗಡೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಿದೆ ಎಂದು ವರದಿಯಾಗಿದೆ. ಅದರಲ್ಲಿದ್ದ ನಾಲ್ವರು ಮೀನುಗಾರರು ಪಾರಾಗಿದ್ದಾರೆ. ಎರಡ್ಮೂರು ದಿನಗಳ ಹಿಂದಷ್ಟೇ ಇದೇ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ಬೋಟ್‌ ಮುಳುಗಿತ್ತು. ‘ಲಕ್ಷ್ಮೀ ಕೃಪ’ ಹೆಸರಿನ ಮೀನುಗಾರಿಕಾ ಬೋಟ್‌ ತದಡಿ ಅಳಿವೆಯಲ್ಲಿ ಸಾಗುತ್ತಿದ್ದ ವೇಳೆ ಬಿರುಸಿನ ಅಲೆಗಳಿಗೆ … Continued

ಶಿರಸಿ : 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್‌ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continued

ಕುಮಟಾ : ತದಡಿ ಅಳಿವೆಯಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಶ್ರೀದೇವಿ’ ಹೆಸರಿನ ಈ ದೋಣಿ ಮುಳುಗುವ ವೇಳೆ ನಾಲ್ವರು ಮೀನುಗಾರರು ಅದರಲ್ಲಿದ್ದರು.ದೋಣಿ ಮುಳುಗುತ್ತಿರುವುದನ್ನು ಗಮನಿಸಿದ ಬಂದರಿನಲ್ಲಿದ್ದ ಇತರ ಮೀನುಗಾರರು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆಗೆ ಧಾವಿಸಿದರು. ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿದ್ದ ನಾಲ್ವರು … Continued

ಕಾರವಾರ : ಬೀದಿ ಗೂಳಿಗಳ ಕಾಳಗಕ್ಕೆ ಪಾದಾಚಾರಿ ಮಹಿಳೆ ಸಾವು

ಕಾರವಾರ: ಬೀದಿ ಗೂಳಿಗಳ ಕಾಳಗಕ್ಕೆ ಸಿಲುಕಿ ಅಮಾಯಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಲ್ಲಾಪುರ ಗ್ರಾಮದ ನಿವಾಸಿ ರಾಜೇಶ್ವರಿ (29) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಗ್ರಾಮದ ಸುಭದ್ರಾ ಹೋಟೆಲ್ ಸಮೀಪ ರಸ್ತೆಯಲ್ಲಿ ಕಾದಾಡುತ್ತಿದ್ದ ಎರಡು ಗೂಳಿಗಳು … Continued

ಮಗನ ಅಪಘಾತದಿಂದ ನೊಂದು ದಂಪತಿಯ ದುರಂತ ಅಂತ್ಯ ; ತಾಯಿ-ತಂದೆ ಕಳೆದುಕೊಂಡ 10 ವರ್ಷದ ಬಾಲಕ ಅನಾಥ

ಕಾರವಾರ: ಕುಟುಂಬದಲ್ಲಿ ಸಂಭವಿಸಿದ ಅಪಘಾತವೊಂದು ಇಡೀ ಕುಟುಂಬವನ್ನೇ ದುರಂತಕ್ಕೆ ದೂಡಿದ ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ನಡೆದಿದೆ. ಮಗನಿಗೆ ಸಂಭವಿಸಿದ ಅಪಘಾತದಿಂದ ಆತನ ಆರೋಗ್ಯದ ಬಗ್ಗೆ ಆತಂಕಗೊಂಡ ತಾಯಿ ಆತ್ಮಹತ್ಯೆಗೆ ಶರಣಾದರೆ, ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿಯೂ ಕಾಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ … Continued

ಶಿರಸಿ : ಮಳೆ ಅಬ್ಬರಕ್ಕೆ ಹಲವೆಡೆ ಹೊಳೆಯಂತಾದ ರಸ್ತೆಗಳು, ಬಡಾವಣೆಗಳು ಜಲಾವೃತ

ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಶಿರಸಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೆ ನೀರು ನಿಂತಿರುವುದರಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ನಿವಾಸಿಗಳು … Continued

ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ ನಿಧನ

ಹೊನ್ನಾವರ : ಬಡಗುತಿಟ್ಟಿನ ಯಕ್ಷಗಾನ ರಂಗಭೂಮಿ ಕಂಡ ಅಪರೂಪದ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ (52) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣಕ್ಕೆ ಮಣಿಪಾಲ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆಯೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲತಃ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಗ್ರಾಮದವರಾದ ಅವರು, ಪ್ರಸ್ತುತ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿಯಲ್ಲಿ … Continued

ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

ಕಾರವಾರ : ಪುರಾಣ ಪ್ರಸಿದ್ದ ಗೋಕರ್ಣ ಮಹಾಗಣಪತಿ ಮಂದಿರದ ಪ್ರಾಚೀನ ಶಿಲಾಮೂರ್ತಿ ಸವಕಳಿಯ ಹಿನ್ನೆಲೆಯಲ್ಲಿ ಭಕ್ತರಿಗೆ ಸ್ಪರ್ಶ ದರ್ಶನ, ಪೂಜಾ ಸೇವೆಗಳನ್ನ ಬಂದ್ ಮಾಡಿ ಹಿಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ. ಬುಧವಾರ ಸಂಜೆ ದೇವಾಲಯ ಆವಾರದಲ್ಲಿ ಕಾರವಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಳವಾರ ನೇತೃತ್ವದಲ್ಲಿ ನಡೆದ … Continued

ವಿಡಿಯೊ | ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ಕಾರವಾರ : ಮನರಂಜನೆ ಮತ್ತು ಸಾಹಸ ಅನುಭವಕ್ಕಾಗಿ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಜಿಪ್‌ಲೈನ್ ಸವಾರಿ ದುಸ್ವಪ್ನವಾಗಿ ಪರಿಣಮಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ರೆಸಾರ್ಟ್‌ ಒಂದರಲ್ಲಿ ನಡೆದಿದೆ. ಜಿಪ್‌ಲೈನ್ ಸವಾರಿಯ ವೇಳೆ ಸುರಕ್ಷತಾ ವ್ಯವಸ್ಥೆ (ಸೇಫ್ಟಿ ಲಾಕ್) ಕೈಕೊಟ್ಟ ಪರಿಣಾಮ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. … Continued