ಉತ್ತರ ಕನ್ನಡ ಜಿಲ್ಲೆ ; ಇಂದು (ಜುಲೈ 19)ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ 19) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, … Continued

ಶಿರೂರು ಗುಡ್ಡ ಕುಸಿತ ದುರಂತ : 10 ಮಂದಿ ಕಣ್ಮರೆ , ಅವರಲ್ಲಿ ಆರು ಮಂದಿ ಮೃತದೇಹ ಪತ್ತೆ : ಜಿಲ್ಲಾಧಿಕಾರಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿರುವ ಮಾಹಿತಿ ಸಿಕ್ಕಿದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಅಂಕೋಲಾ:  ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವೀಗಿಡಾದ ಮತ್ತೆರಡು ಮೃತ ದೇಹಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ ಆವಂತಿಕಾ (6) … Continued

ಶಿರೂರು ಗುಡ್ಡ ಕುಸಿತ ದುರಂತ | ಐ ಆರ್ ಬಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ; ಉಸ್ತುವಾರಿ ಸಚಿವರ ಸೂಚನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ … Continued

ವಿಪರೀತ ಮಳೆ : ನಾಳೆ (ಜುಲೈ 16) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ 16)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಡುಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಜಿಲ್ಲೆಯ ಹತ್ತು ತಾಲೂಕುಗಳು, ಅಂದರೆ ಕಾರವಾರ ಅಂಕೋಲಾ, ಹೊನ್ನಾವರ, … Continued

ಭಾರಿ ಮಳೆ: ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15ಕ್ಕೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ ಅಂಕೋಲ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ ಎರಡು ತಾಲೂಕಗಳಿಗೆ ಜುಲೈ 9ರಂದು ರಜೆ ಘೋಷಣೆ

ಭಾರಿ ಮಳೆಯ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅದರಲ್ಲಿಯೂ ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ವಿಪರೀತ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಎಲ್ಲ ಎಲ್ಲಾ ಸರ್ಕಾರಿ, ಅನುದಾನಿತ, … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕರಾವಳಿಯ ಐದು ತಾಲೂಕುಗಳಿಗೆ ಸೋಮವಾರ (ಜುಲೈ 8) ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು … Continued

ಭಾರಿ ಮಳೆ : ಜುಲೈ 6ರಂದು ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕಿನ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ … Continued

ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ : ಉತ್ತರ ಜಿಲ್ಲೆಯಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಭಾರಿ ಮಳೆಗೆ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್(Bangalore-Honnavar National Highway​​​ ಆಗಿದೆ. ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೆದ್ದಾರಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ. ಏಕಾಏಕಿ ಗುಡ್ಡ … Continued