ಪುಸ್ತಕ ಎಂಬುದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ

ಸಿದ್ದಾಪುರ : ಪುಸ್ತಕ ಎಂಬುದು ಕೇವಲ ಅಚ್ಚಾದ ವಸ್ತುವಲ್ಲ; ಅದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ ಎಂದು ಸಿದ್ದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅಭಿಪ್ರಾಯಪಟ್ಟರು. ಪೌರ್ಣಿಮಾ ಸಾಹಿತ್ಯ ವೇದಿಕೆ ಹಾಗೂ ಪ್ರಯೋಗ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಲಯನ್ಸ್‌ ಬಾಲಭವನದಲ್ಲಿ ಆಯೋಜಿಸಲಾದ ಪತ್ರಕರ್ತ, … Continued

ಭಟ್ಕಳ; ಇಬ್ಬರು ಸಮುದ್ರ ಪಾಲು

ಕಾರವಾರ : ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದ ಇಬ್ಬರು ಯುವಕರು ಆಕಸ್ಮಿಕವಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬುಧವಾರ ಅಪರಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಉತ್ತರ ಪ್ರದೇಶದ ಕಾನ್ಪುರ ಮೂಲದ ಅಫ್ರೋಜ್ (34) ಮತ್ತು ರಿಜ್ವಾನ್ (28) ಎಂದು ಹೇಳಲಾಗಿದೆ. ಮೃತರು ಭಟ್ಕಳದ ಸ್ಥಳೀಯ ಗಾರ್ಮೆಂಟ್ಸ್‌ನಲ್ಲಿ … Continued

ಶಿರಸಿ : ಮೇ 8ರಂದು ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಘವೇಂದ್ರ ಮಠದಲ್ಲಿ ಮೇ 7 ಹಾಗೂ 8ರಂದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ 7ರಂದು ಗುರುವಾರ ರಾಘವೇಂದ್ರ ಮಠದ ಶ್ರೀ ಗುರುರಾಯರ ಸನ್ನಿಧಿಯಲ್ಲಿ ನೂತನ ನಾಗಪ್ರತಿಷ್ಠೆಯ ಅಂಗವಾಗಿ  ಧಾರ್ಮಿಕ ವಿಧಿವಿಧಾನಗಳು ಹಾಗೂ ಮೇ 8ರಂದು ಶುಕ್ರವಾರ ನಾಗಪ್ರತಿಷ್ಠೆ,  ಹೊಸದಾಗಿ ನಿರ್ಮಿಸಲಾದ ಬಾವಿಯಲ್ಲಿ … Continued

ಜೊಯಿಡಾ ; ವೃದ್ಧೆ ಮೇಲೆ ಚಿರತೆ ದಾಳಿ

ಕಾರವಾರ : ಮುಂಜಾನೆ ಶೌಚಕ್ಕೆಂದು ಹೊರಬಂದ ವೃದ್ಧೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಪಣಸೋಲಿ ವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. 70 ವರ್ಷದ ವೃದ್ಧೆ ಸುಶೀಲಾ ದೇಸಾಯಿ ಪ್ರತಿರೋಧ ತೋರಿ ಪಾರಾಗಿ ಬಂದಿದ್ದಾರೆ ಎಂದು ಹೇಳಲಾಗಿದೆ. ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದ ನಿವಾಸಿ ಸುಶೀಲಾ … Continued

ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ  ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್‌ ಸ್ಟಾರ್ಟ್‌ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued

ಮೇ 1ರಂದು ಗಂಗಾಧರ ಕೊಳಗಿಯವರ 2 ಕೃತಿಗಳ ಅವಲೋಕನ

ಸಿದ್ದಾಪುರ : ಸಾಹಿತಿ ಹಾಗೂ ಪತ್ರಕರ್ತ ಗಂಗಾಧರ ಕೊಳಗಿ ಅವರ ʼಕಾಡಂಚಿನ ಯಾನʼ ಹಾಗೂ ʼಮನಸು ಆಕಾಶದ ನೀಹಾರಿಕೆʼ ಎಂಬ ಎರಡು ಮರುಮುದ್ರಣ ಕೃತಿಗಳ ಅವಲೋಕನ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಲಯನ್ಸ್‌ ಬಾಲಭವನದಲ್ಲಿ ಮೇ 1ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಪೌರ್ಣಿಮಾ ಸಾಹಿತ್ಯ ವೇದಿಕೆ ಸಿದ್ದಾಪುರ ಹಾಗೂ ಪ್ರಯೋಗ ಸ್ವಸೇಸಂ ಸಿದ್ದಾಪುರ … Continued

ಮುಂಡಗೋಡ ; ಹೊಟೇಲ್‌ ಒಳಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಕಾರವಾರ: ಸ್ನೇಹಿತನೊಂದಿಗೆ ಊಟಕ್ಕಾಗಿ ಹೋಟೆಲ್‌ಗೆ ಬಂದಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹೋಟೆಲ್‌ ಒಂದರಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮುಂಡಗೋಡು ಬಸ್ ನಿಲ್ದಾಣದ ಎದುರಿಗಿರುವ ಹೋಟೆಲ್‌ನಲ್ಲಿ ಈ ಕೃತ್ಯ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಮೀರ್ ಅಹಮದ್ ದರ್ಗಾವಾಲೆ (39) … Continued

ಕುಮಟಾ: ಡಾ. ಬಾಳಿಗಾ ಪ್ರೌಢ ಶಾಲೆ ವಿದ್ಯಾರ್ಥಿಗೆ ರಾಜ್ಯಮಟ್ಟದಲ್ಲಿ 2ನೇ ರ‍್ಯಾಂಕ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ಪ್ರೌಢಶಾಲಾ ವಿದ್ಯಾರ್ಥಿಗಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರ‍್ಯಾಂಕ್  ಗಳಿಸಿದ್ದಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಅವರಲ್ಲಿ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ದಿಶಾಂತ ದಯಾನಂದ್ ನಾಯ್ಕ 625ಕ್ಕೆ 624 … Continued

ಕುಮಟಾ : ಏಪ್ರಿಲ್‌ 26ರಂದು ಸಾಧನಾ ಸೌರಭ ಕಾರ್ಯಕ್ರಮ

ಕುಮಟಾ: ಸೌರಭ ಸಂಸ್ಥೆ ವತಿಯಿಂದ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭʼ (Sadhana Sourabha)ವನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಭವನದಲ್ಲಿ ಏಪ್ರಿಲ್‌ 26ರಂದು ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿನವಿಡೀ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್‌ 26ರಂದು ಬೆಳಿಗ್ಗೆ 9:55ಕ್ಕೆ ವೇದಿಕೆ ಕಾರ್ಯಕ್ರಮವನ್ನು ಖ್ಯಾತ … Continued