ಕುಮಟಾ : ಲಾರಿ-ಬೈಕ್‌ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಕುಮಟಾ: ಬೈಕ್‌ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಸರ್ಕಲ್ ಬಳಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಬೈಕ್‌ ಸವಾರ ಸುಬ್ರಹ್ಮಣ್ಯ ಅಂಬಿಗ (35) ಎಂದು ಗುರುತಿಸಲಾಗಿದೆ. ಸಹ … Continued

ಭಟ್ಕಳ : ಗೋವು ಕಳ್ಳತನ ವಿಫಲಗೊಳಿಸಿದ ಸಾರ್ವಜನಿಕರು ; ಕಾರು ಬಿಟ್ಟು ಪರಾರಿಯಾದ ಕಳ್ಳರು..

ಕಾರವಾರ : ಗೋವುಗಳನ್ನ ಕದಿಯಲು ಬಂದ ಕಳ್ಳರನ್ನ ತಡೆದು ವಿಚಾರಿಸುವಾಗ ಗೋವಿನ ಸಮೇತ ಕಾರನ್ನು ಬಿಟ್ಟು ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಬಳಿಯ  ತಲಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೋವುಗಳನ್ನು ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಕದ್ದೊಯ್ಯಲು ಯತ್ನಿಸುತ್ತಿದ್ದಾಗ ಗೋವುಗಳು ಕೂಗಿದ್ದು ಕೇಳಿ ಸ್ಥಳೀಯರಿಗೆ ಅನುಮಾನ ಬಂದಿದೆ. ತಕ್ಷಣವೇ ಕಾರ್ಪ್ರವೃತ್ತರಾದ … Continued

ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ … Continued

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು

ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued

ಸಿದ್ದಾಪುರ : ನಕಲಿ ಬಂಗಾರದ ನಾಣ್ಯ ನೀಡಿ 10 ಲಕ್ಷ ರೂ. ವಂಚನೆ ; ಅಂತರ ಜಿಲ್ಲಾ ವಂಚಕನನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ: ಕಡಿಮೆ ಬೆಲೆಗೆ ಅಸಲಿ ಬಂಗಾರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ  ಹಣ ಲೂಟಿ ಮಾಡುತ್ತಿದ್ದ ಅಂತರ ಜಿಲ್ಲಾ ವಂಚಕನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಾಪುರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಈ ಆರೋಪಿಯು ಇದೇ ರೀತಿ ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರದ ನಾಣ್ಯವನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿದ್ದ … Continued

ಅಂಕೋಲಾ ; ಕಾಂಗ್ರೆಸ್‌ ಮುಖಂಡನ ಕೊಲೆಗೆ ಯತ್ನ

ಅಂಕೋಲಾ : ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಪಟ್ಟಣದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಕಾರವಾರ ರಸ್ತೆ ಕಣಕಣೇಶ್ವರ ದೇವಾಲಯದ ಪಕ್ಕದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ ಹೇರ್ ಕಟಿಂಗ್ ಸೆಲೂನ್ ನಿಂದ ಗೋಪಾಲಕೃಷ್ಣ ನಾಯಕ ಅವರು   ತಮ್ಮ ಕಾರಿನ ಕಡೆಗೆ … Continued

ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued

ಭಾರತದ ನೌಕಾಪಡೆಗೆ ಮತ್ತಷ್ಟು ಬಲ: ಕಾರವಾರದಲ್ಲಿ ‘ಕಲ್ವರಿ’ ಜಲಾಂತರ್ಗಾಮಿಗಳ ಅತ್ಯಾಧುನಿಕ ನಿರ್ವಹಣಾ ಘಟಕ ಉದ್ಘಾಟನೆ

ಕಾರವಾರ : ಕಲ್ವರಿ ದರ್ಜೆಯ (Kalvari-class) ಜಲಾಂತರ್ಗಾಮಿ ನೌಕೆಗಳಲ್ಲಿ ಅಳವಡಿಸಲಾಗಿರುವ ಅತ್ಯಂತ ನಿರ್ಣಾಯಕ ‘ನ್ಯೂಮ್ಯಾಟಿಕ್’ (Pneumatic) ವ್ಯವಸ್ಥೆಗಳ ಪರೀಕ್ಷೆ, ನಿರ್ವಹಣೆ ಮತ್ತು ದುರಸ್ತಿಗಾಗಿ ದೇಶದ ಮೊದಲ ವಿಶೇಷ ಘಟಕವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಉದ್ಘಾಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಕಾರವಾರದ ಕದಂಬ ನೌಕಾ ನೆಲಯ ತಾಂತ್ರಿಕ ವರ್ಕ್‌ಶಾಪ್‌ನಲ್ಲಿ ನಿಯೋಜಿಸಲಾಗಿದೆ … Continued

ವೀಡಿಯೊ | ಶಿರಸಿ : ಬಾವಿಗೆ ಬಿದ್ದ 2 ವರ್ಷದ ಮಗು; ಪಂಪ್‌ಸೆಟ್‌ ಪೈಪು ಹಿಡಿಕೊಂಡಿದ್ದ ಬಾಲೆ; ಕಾಪಾಡಿದ ಆಪದ್ಬಾಂಧವ

ಶಿರಸಿ: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮ ಪವಾಡಸದೃಶರೀತಿಯಲ್ಲಿ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರಬಾ ನಗರದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರು ತೋರಿದ ಸಮಯ ಪ್ರಜ್ಞೆಯಿಂದ ಮಗು ಅಪಾಯದಿಂದ ಪಾರಾಗಿದೆ. ಪ್ರಾಣದ ಹಂಗು ತೊರೆದು ಬಾವಿಗಿಳಿದ ಪಯ್ಯು ಚವಟಿ ಎಂಬವರು ಮಗುವನ್ನು ಮೇಲಕ್ಕೆತ್ತುವ ಮೂಲಕ ಮಗುವಿಗೆ ಮರುಜನ್ಮ … Continued

ಹೊನ್ನಾವರ : ಏರ್‌ಗನ್ ನಿಂದ ಸಿಡಿದ ಗುಂಡು ತಗುಲಿ ಯುವಕ ಸಾವು

ಹೊನ್ನಾವರ : ಕೈಯಲ್ಲಿದ್ದ ಏರ್‌ಗನ್ ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಹಾಡಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ (19) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಂಗಗಳನ್ನು ಓಡಿಸಲು ಕೈಯಲ್ಲಿ ಏರ್‌ಗನ್ ಹಿಡಿದು … Continued