ವೀಡಿಯೊ..| ಕುಮಟಾ: ಡಾಲ್ಫಿನ್ ಕಳೆಬರ ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೆಬರ ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಡಾಲ್ಫಿನ್ ಕೊಳೆತ ಸ್ಥಿತಿಯಲ್ಲಿ ತೀರಕ್ಕೆ ಬಂದು ಬಿದ್ದಿದೆ. ಸಾಮಾನ್ಯವಾಗಿ ಹತ್ತರಿಂದ 15 ನಾಟಿಕಲ್ ಮೈಲು ಒಳಗೆ ಇದು ವಾಸಿಸುತ್ತಿದ್ದು ಸಮುದ್ರದ ನೀರಿನ ಇಳಿತದ ಸಂದರ್ಭದಲ್ಲಿ ಆಳ ಸಮುದ್ರಕ್ಕೆ ಹೋದ ಸಂದರ್ಭದಲ್ಲಿ … Continued

ವೀಡಿಯೊಗಳು | ಕಾರವಾರ : ಶಾಲಾ ಕೊಠಡಿಯೊಳಗೆ ಬಂದ ಕಾಳಿಂಗ ಸರ್ಪ…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತರಗತಿಯಲ್ಲಿ ಬೃಹತ್‌ ಹಾವಿನ ಆರ್ಭಟಕ್ಕೆ  ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ … Continued

ವೀಡಿಯೊಗಳು..| ಕುಮಟಾ : ಹೊಲನಗದ್ದೆ-ಕಡ್ಲೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆ ಗುಡ್ಡದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೆಂಕಿ ವ್ಯಾಪಿಸಿದ್ದು  ಸಸ್ಯ ಸಂಕುಲಗಳು ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಶುಕ್ರವಾರ ಅಪರಾಹ್ನದ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ಕಡ್ಲೆ ಗುಡ್ಡದಲ್ಲಿ ವ್ಯಾಪಿಸಿರುವ ಬೆಂಕಿ ನಂದಿಸುವುದು ಸುಲಭವಲ್ಲ. ಅರಬ್ಬೀ ಸಮುದ್ರದ ಪಶ್ಚಿಮ … Continued

ಶಿರಸಿ: ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು … Continued

ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ದ ಬೃಹತ್ ಪ್ರತಿಭಟನಾ ಸಮಾವೇಶ

ಹೊನ್ನಾವರ  :  ನದಿ ತಾನು ಹರಿಯುವ ದಿಕ್ಕಿನ ವಿರುದ್ಧ ಹರಿದರೆ ಅದು ನಾಶಕ್ಕೆ ಮುನ್ನುಡಿ. ನದಿಯ ನೀರನ್ನು ಸುರಂಗ‌ ಕೊರೆದು ಹಿಂದಕ್ಕೆ ಒಯ್ಯುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡ. ಯೋಜನೆ ನಿಲ್ಲಿಸಲು ಎಲ್ಲರೂ ಒಂದಾಗಬೇಕು. ಎಲ್ಲರೂ ಸೇರಿ ಒಗ್ಗಟ್ಟಿನಲ್ಲಿ ಹೋರಾಟ ಮಾಡೋಣ ಎಂದು ನುಡಿದರು. ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ  … Continued

ಶಿರಸಿ ಬಚಪನ್ ಶಾಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಶಿರಸಿ: ಜಾಗೃತಿ ಫೌಂಡೇಶನ್ ಮೂಲಕ ಕಳೆದ ವರ್ಷವಷ್ಟೇ ಶಿರಸಿಯಲ್ಲಿ ಆರಂಭಗೊಂಡ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿ ಪ್ರಕಟಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಲಿಕಾ ವಿಧಾನ, ಗುಣಮಟ್ಟ ಮತ್ತು ತಾಂತ್ರಿಕ ಅಳವಡಿಕೆಯನ್ನಾಧರಿಸಿ ಕೇವಲ 3 ಶಾಲೆಗಳಿಗೆ ಕೊಡಮಾಡುವ “ವರ್ಷದ ಎಡ್ ಟೆಕ್ ಶಾಲೆ” ಪ್ರಶಸ್ತಿಯನ್ನು ಶಿರಸಿಯ “ಬಚಪನ್” ಪೂರ್ವ ಪ್ರಾಥಮಿಕ ಶಾಲೆಗೆ … Continued

ಹೊನ್ನಾವರ : ಖಾಸಗಿ ಬಸ್‌ ಪಲ್ಟಿ ; ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಉರುಳಿ ಬಿದ್ದು ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ (ಮಾರ್ಚ್ 8)ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಹೊನ್ನಾವರದಿಂದ ಸಾಗರ ಮಾರ್ಗವಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಬಸ್, ರ ರಾತ್ರಿ … Continued

ಶಿರಸಿ : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ

ಶಿರಸಿ: ಯುವಕನೋರ್ವ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರವೀಶ ನಾಯ್ಕ (22) ಎಂದು ಗುರುತಿಸಲಾಗಿದೆ.  ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು ಮದ್ಯ ವ್ಯಸನಿಯಾಗಿದ್ದರು ಎನ್ನಲಾಗಿದೆ. ಮಂಗಳವಾರ ತನ್ನ ಮನೆಯ ಪಕ್ಕದಲ್ಲಿರುವ … Continued

ಕಾರವಾರ : ಸಚಿವ-ಶಾಸಕರ ನಡುವೆ ವಾಗ್ವಾದ ; ಕೆಡಿಪಿ ಸಭೆಯಿಂದ ಹೊರನಡೆದ ಸತೀಶ ಸೈಲ್

ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಕಾಂಗ್ರೆಸ್‌ ಶಾಸಕ ಸತೀಶ ಸೈಲ್ ನಡುವೆ ನಡೆದ ವಾಗ್ವಾದ ನಡೆದು, ಸೈಲ್ ಸಭೆಯ ಮಧ್ಯದಲ್ಲೇ ಹೊರನಡೆದ ಘಟನೆ ನಡೆದಿದೆ. ಇಬ್ಬರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂಬುದು ಗಮನಿಸಬೇಕಾದ ಸಂಗತಿ. ಜಿಲ್ಲಾ ಉಸ್ತುವಾರಿ … Continued

ಅಂಕೋಲಾ : ಸುಂಕಸಾಳ ಬ್ಯಾಂಕ್‌ ದರೋಡೆ ಯತ್ನ ಪ್ರಕರಣ ; ಐವರ ಬಂಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ದರೋಡೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.  ಸುಂಕಸಾಳದ ರಾಷ್ಟ್ರೀಯ ಹೆದ್ದಾರಿ 52 ರ ಪಕ್ಕದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗಿ ದರೋಡೆಗೆ ಯತ್ನ ನಡೆಸಲಾಗಿತ್ತು. ಆರೋಪಿತರು … Continued