ಕೈಗಾ ಅಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ಕಾಮಗಾರಿಗೆ ಚಾಲನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ನಿರ್ಮಾಣದ ಪ್ರಮುಖ ಹಂತವಾದ ‘ಕಾಂಕ್ರೀಟಿಂಗ್’ ಕಾರ್ಯಕ್ಕೆ ಭಾರತೀಯ ಅಣುಶಕ್ತಿ ಆಯೋಗದ ಅಧ್ಯಕ್ಷ ಅಜಿತಕುಮಾರ ಮೊಹಾಂತಿ ಭಾನುವಾರ ಅಧಿಕೃತವಾಗಿ ಚಾಲನೆ ನೀಡಿದರು. ದೇಶೀಯ ತಂತ್ರಜ್ಞಾನದ PHW (Pressurised Heavy Water) ಮಾದರಿಯ ರಿಯಾಕ್ಟರ್‌ಗಳನ್ನು ಇಲ್ಲಿ ಬಳಸಲಾಗುತ್ತಿದೆ. ಈ ತಂತ್ರಜ್ಞಾನದ … Continued

ಯಲ್ಲಾಪುರ : ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಯೋಜಿಸಿದ್ದ ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ  ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ … Continued

ವೀಡಿಯೊ | ಕರ್ನಾಟಕದ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಆರಂಭ : ಗದ್ದುಗೆಯಲ್ಲಿ ದೇವಿ ವಿರಾಜಮಾನ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು. ರಥದಲ್ಲಿ ಆಗಮಿಸಿದ ಭಕ್ತರ ಆರಾಧ್ಯ ದೈವ ಮಾರಿಕಾಂಬಾ ದೇವಿಯು  ಜಾತ್ರಾ  ಗದ್ದುಗೆಗೆ ಆಗಮಿಸಿ ಬುಧವಾರ ಪ್ರತಿಷ್ಠಾಪನೆಗೊಂಡಿದ್ದಾಳೆ..  ಶ್ರೀ ಮಾರಿಕಾಂಬೆಯ ದರ್ಶನಕ್ಕಾಗಿ ಆಗಮಿಸಿದ ಲಕ್ಷಾಂತರ ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗುವ ಮೂಲಕ … Continued

ಕಾರವಾರ : ಒಂದೇ ಸ್ಥಳದಲ್ಲಿ 6 ಹೆಬ್ಬಾವುಗಳು ಪತ್ತೆ…!

ಕಾರವಾರ : ನಗರದ ಕಠಿಣಕೋಣ ಭಾಗದಲ್ಲಿ ಭಾನುವಾರ ಅಪರೂಪದ ಘಟನೆಯೊಂದು ನಡೆದಿದ್ದು, ಇಲ್ಲಿನ ನಿವಾಸಿಯೊಬ್ಬರ ಮನೆಯ ಆವರಣದಲ್ಲಿ ಒಟ್ಟಿಗೆ ಆರು ಹೆಬ್ಬಾವುಗಳು ಪತ್ತೆಯಾಗಿವೆ. ವಿಜಯ ತಳೇಕರ ಎಂಬವರ ಮನೆಯ ಆವರಣದಲ್ಲಿ ಕಾಂಕ್ರೀಟ್ ಕಮಾನು ನಿರ್ಮಾಣಕ್ಕಾಗಿ ಇರಿಸಲಾಗಿದ್ದ ಕಬ್ಬಿಣದ ಸಾಮಗ್ರಿಗಳ ಮಧ್ಯೆ ಈ ಬೃಹತ್ ಹಾವುಗಳು ಅಡಗಿಕೊಂಡಿದ್ದವು. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹೆಬ್ಬಾವುಗಳನ್ನು ಕಂಡ ಸ್ಥಳೀಯರು … Continued

ಕಾರವಾರ : ಸಮುದ್ರ ಸ್ನಾನ ಮಾಡುವಾಗ ಮುಳುಗಿ ಬಾಲಕ ಸಾವು

ಕಾರವಾರ: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಗಾಂವಗೇರಿಯ ಯಶ್ (17) ಎಂಬಾತ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬಾಲಕನಾಗಿದ್ದಾನೆ. ಶಿವರಾತ್ರಿ ಹಿನ್ನೆಲೆಯನ್ನು ಮಾಜಾಳಿ ಸಮುದ್ರಕ್ಕೆ ರಾಮನಾಥ ಪರಿವಾರ ದೇವರು ಸೇರುದಂತೆ ಸುತ್ತಮುತ್ತಲಿನ ದೇವರನ್ನು ಪಲ್ಲಕ್ಕಿಯಲ್ಲಿ ತಂದು … Continued

ಶಿರಸಿ: ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಶಿವರಾಮ ಹೆಬ್ಬಾರ ಅವಿರೋಧ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತವಾಗಿ ಎರಡನೇ ಬಾರಿಗೆ ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಶಿರಸಿ : ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ ಉದ್ಘಾಟನೆ

ಶಿರಸಿ: ಉದ್ಯಮಿಗಳಿಗಾಗಿ ವಿಶೇಷವಾಗಿ ಆಯೋಜಿಸಲಾದ ಐದು ದಿನಗಳ ಡಿಜಿಟಲ್ ಮಾರ್ಕೆಟಿಂಗ್ ಕುರಿತು ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ (MDP) ಫೆ.13 ರಂದು ಶಿರಸಿಯ ಕದಂಬ ಆರ್ಗಾನಿಕ್ ಪಾಯಿಂಟ್‌ನಲ್ಲಿ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಎಂಎಸ್‌ಎಂಇ (MSME) ಅಭಿವೃದ್ಧಿ ಮತ್ತು ಸೌಲಭ್ಯ ಕೇಂದ್ರವು ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಹಾಗೂ ನೆಲಸಿರಿ ರೈತ ಉತ್ಪಾದಕ ಕಂಪನಿಯ ಸಹಯೋಗದಲ್ಲಿ … Continued

ನದಿ ಜೋಡಣೆಗೆ ವಿರೋಧ ; ಮಾಜಿ ಸಚಿವ ದೇಶಪಾಂಡೆಗೆ ಮನವಿ ಸಲ್ಲಿಸಿದ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಿಯೋಗ

ಶಿರಸಿ: “ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕಾಳಿ, ಶರಾವತಿ, ಸೀಬರ್ಡ್ ಹಾಗೂ ಕೈಗಾದಂತಹ ಬೃಹತ್ ಯೋಜನೆಗಳ ಭಾರದಿಂದ ತನ್ನ ಧಾರಣ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮತ್ತೆ ಹೊಸ ನದಿ ತಿರುವು ಯೋಜನೆಗಳನ್ನು ಹೇರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ (ಫೆ. 14) ಶಿರಸಿಯಲ್ಲಿ ತಮ್ಮನ್ನು … Continued

ಕುಮಟಾ : ಪೆಟ್ರೋಲ್ ಬಂಕ್ ಕಳ್ಳತನ ; ಇಬ್ಬರನ್ನು ಬಂಧಿಸಿದ ಪೊಲೀಸರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ 1ರ ರಾತ್ರಿ ಪೆಟ್ರೋಲ್ ಬಂಕ್ ಕಚೇರಿಯ ಹಿಂಭಾಗದ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದ ಕಳ್ಳರು, ಲಾಕರ್ ಮೀಟಿ ತೆಗೆದು ಅದರಲ್ಲಿದ್ದ 25,000 ರೂ. ನಗದು ಹಣವನ್ನು … Continued

ಕುಮಟಾ : ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಕೂಜಳ್ಳಿಯ ಸಂಧ್ಯಾ ಹೆಗಡೆ ದ್ವಿತೀಯ

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ  ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಗೀತ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ ಕೇವಲ … Continued