ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಚಿನ್ಮಯ ಕೆರೆಗದ್ದೆ ಪ್ರಥಮ

ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. … Continued

ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued

ಶಿರಸಿ : ಬೆಣಗಿಯಲ್ಲಿ ಜೇನು ಹಬ್ಬ ; ಪ್ರಾತ್ಯಕ್ಷಿಕೆ-ಸಂಭ್ರಮಪಟ್ಟ ಮಕ್ಕಳು

ಶಿರಸಿ : ತಾಲೂಕಿನ ಬೆಣಗಿಯಲ್ಲಿ ಶನಿವಾರ ಜೇನು ಹಬ್ಬ ಕಾರ್ಯಕ್ರಮ ನಡೆಯಿತು. ಇದರಲ್ಲಿ ಶಾಲಾ ಮಕ್ಕಳು ಪಾಲ್ಗೊಂಡು ಅವರೇ ಜೇನು ಹಬ್ಬ ಉದ್ಘಾಟಿಸಿ ಅದರಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಪ್ರಕೃತಿ ಸಂಸ್ಥೆ, ಪೇವಾರ್ಡ್‌ ಸಂಸ್ಥೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡೇಬೈಲ್ ಶಾಲೆ, ವನಗಿರಿ ಇಕೋ ಕ್ಲಬ್‌, ರಾಷ್ಟ್ರೀಯ ಹಸಿರು ಪಡೆ ಸಹಯೋಗದಲ್ಲಿ ಬೆಣಗಿಯ ನಾಗರಾಜ ಹೆಗಡೆ … Continued

ರೋಟರಿ ಕ್ಲಬ್ ಕುಮಟಾಕ್ಕೆ 15 ಪ್ರತಿಷ್ಠಿತ ಪ್ರಶಸ್ತಿಗಳು

ಕುಮಟಾ: ಇತ್ತೀಚೆಗೆ ಕೊಲ್ಲಾಪುರದಲ್ಲಿ ನಡೆದ ರೋಟರಿ ಜಿಲ್ಲೆ 3170ದ 67ನೆಯ ರೋಟರಿ ಜಿಲ್ಲಾ ಸಮಾರಂಭ ‘ಋಣಾನುಬಂಧ’ದಲ್ಲಿ ರೋಟರಿ ಕ್ಲಬ್‌ನ ನಿರಂತರ ಸೇವಾ ಚಟುವಟಿಕೆಗಳು, ಸಮರ್ಪಣೆ ಹಾಗೂ ತಂಡಬದ್ಧ ಕಾರ್ಯಪಟುತನಕ್ಕೆ ರೋಟರಿ ಜಿಲ್ಲಾಡಳಿತದಿಂದ ಮಹತ್ವದ ಗೌರವ ಲಭಿಸಿದೆ. ರೋಟರಿ ಕ್ಲಬ್ ಕುಮಟಾ ಮೂಲಕ ಸಲ್ಲಿಸಲಾದ ಅತ್ಯುತ್ತಮ ಸೇವೆಯನ್ನು ಗುರುತಿಸಿ, ಅದಕ್ಕೆ ಒಟ್ಟು 15 ಪ್ರತಿಷ್ಠಿತ ಪ್ರಶಸ್ತಿಗಳು ಹಾಗೂ … Continued

ಶಿರಸಿ ರೋಟರಿಗೆ 8 ಉತ್ಕೃಷ್ಟ ಪ್ರಶಸ್ತಿಗಳು

ಶಿರಸಿ: 2025-26ನೇ ಸಾಲಿಗೆ ಶಿರಸಿ ರೋಟರಿಯ ಪ್ರಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಖ್ಯಾತ ಪೆಥಾಲಾಜಿಸ್ಟ್ ಮತ್ತು ರಕ್ತನಿಧಿ ಅಧಿಕಾರಿ ಡಾ. ಸುಮನ್ ಹೆಗಡೆಗೆ ಲಭಿಸಿದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ ಸೇರಿದಂತೆ ಒಟ್ಟೂ 8 ಉತ್ಕೃಷ್ಟ ಪ್ರಶಸ್ತಿಗಳನ್ನು ಶಿರಸಿ ರೋಟರಿ ಬಾಚಿಕೊಂಡಿದೆ. ಇದು ಶಿರಸಿ ರೋಟರಿಯ ಎಲ್ಲಾ ಸದಸ್ಯರ ಅಮೂಲ್ಯ ಸಹಕಾರ, ಮಾರ್ಗದರ್ಶನ ಮತ್ತು ಸೇವಾಭಾವನೆಯಿಂದ … Continued

ಸಿದ್ದಾಪುರ | ಕೌಟುಂಬಿಕ ಕಲಹ: ಒಬ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಸಮೀಪದ ಅವರಗುಪ್ಪದಲ್ಲಿ ಸೋಮವಾರ ರಾತ್ರಿ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ. ವಸಂತ ನಾಯ್ಕ( ೪೩) ಎಂಬವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಆತನ ತಮ್ಮ ಮಹೇಶ ನಾಯ್ಕ(೩೭) ಹಾಗೂ ಜಗಳ ಬಿಡಿಸಲು ಬಂದ ಕುಮಾರ ನಾಯ್ಕ(೩೫) ಅವರಿಗೂ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಶಿರಸಿ: “ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ಅಡ್ಡದಾರಿಯಲ್ಲಿ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ನಕಲಿ ಪತ್ರಕರ್ತರನ್ನು ಹೊರಹಾಕಿ, ಸಂಘವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗಿರುವುದು ಇಂದಿನ ಅಗತ್ಯ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ​ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಟಿಆರ್‌ಸಿ ಸಭಾಭವನದಲ್ಲಿ ಭಾನುವಾರ ನಡೆದ ಉತ್ತರ ಕನ್ನಡ ಜಿಲ್ಲಾ … Continued

ಫಾರ್ಮಾಸಿಸ್ಟ್ ಆತ್ಮಹತ್ಯೆ ಪ್ರಕರಣ: ವೀಡಿಯೊ ವೈರಲ್ ಮಾಡಿದ ಮೂವರ ಬಂಧನ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ನಡೆದ ಫಾರ್ಮಾಸಿಸ್ಟ್ ರಾಜೀವ ಪಿಕ್ಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆಎಂದು ವರದಿಯಾಗಿದೆ. ಕಾರವಾರ ತಾಲೂಕಿನ ವೈಲವಾಡ ಗ್ರಾಮದ ಸುಭಾಷ, ಹರಿಶ್ಚಂದ್ರ ಮತ್ತು ಅನಿಲ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಕಾರವಾರದ … Continued

ಶಿರಸಿಯಲ್ಲಿ ಜ.22ರಿಂದ ಐದು ದಿನಗಳ ರೋಟರಿ ಆಹಾರ ಮೇಳ-ಆಲೆಮನೆ ಉತ್ಸವ

ಶಿರಸಿ : ನಾಲ್ಕನೇ ವರ್ಷದ ರೋಟರಿ ಆಹಾರ ಮೇಳ ಹಾಗೂ ಆಲೆಮನೆ ಉತ್ಸವವು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ವಿಕಾಸಾಶ್ರಮ ಮೈದಾನದಲ್ಲಿ ಜ.೨೨ರಿಂದ ೨೬ರವರೆಗೆ ನಡೆಯಲಿದೆ. ರೋಟರಿ ಸೆಂಟರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀನಿವಾಸ ನಾಯ್ಕ ಹಾಗೂ ಸಂಚಾಲಕ ಡಾ.ದಿನೇಶ ಹೆಗಡೆ ಮತ್ತಿತರರು ಈ ಬಗ್ಗೆ ಮಾಹಿತಿ ನೀಡಿದರು. ಆಲೆಮನೆ ಉತ್ಸವವು … Continued

ಭಟ್ಕಳ : ವೆಂಕಟಾಪುರ ಬಳಿ ಭೀಕರ ಕಾರು ಅಪಘಾತ ; ಇಬ್ಬರು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ವೆಂಕಟಾಪುರ ಬಳಿ ಶನಿವಾರ ತಡ ರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಕಾರು ಶಿರಾಲಿಯಿಂದ ಭಟ್ಕಳದ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಜೋರಾಗಿ … Continued