ಭಾರೀ ಮಳೆ : ಜುಲೈ 7ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲೆ-ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಭಾರೀ ಮಳೆ ಬೀಳುವ ಕುರಿತು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರವಾಳಿ … Continued

ಭಾರೀ ಮಳೆ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆ ಐದು ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ಇಂದು, ಗುರುವಾರ (ಜುಲೈ 6)ಸಹ ರಜೆ ಮುಂದುವರಿಸಲಾಗಿದೆ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ 1 ರಿಂದ 12 ತರಗತಿವರೆಗೆ ಎಲ್ಲಾ ಶಾಲೆ … Continued

ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕರಾವಳಿ ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ ಜುಲೈ 5 ರಂದು ರಜೆ ಘೋಷಿಸಲಾಗಿದೆ. ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ  ಜುಲೈ 5 ರಂದು ಬೆಳಿಗ್ಗೆ 8:30 ಗಂಟೆ ವರೆಗೆ ಭಾರಿ ಮಳೆ ಬೀಳುವ ಮಾಹಿತಿ … Continued

ಮುರೂರು ರಾಮಲೀಲಾ ಮೈದಾನದಲ್ಲಿ ಐದು ದಿನಗಳ ರಾಮಕಥೆಗೆ ಅದ್ಧೂರಿ ಚಾಲನೆ-ರಾಮನ ಸೀತಾ ಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಕುಮಟಾ: ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ … Continued

ಸಿದ್ದಾಪುರ: ವಾಹನ ಬಡಿದು ಜಿಂಕೆ ಸಾವು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಿದ್ದಾಪುರ -ಶಿರಸಿ ರಸ್ತೆಯ ಹಲಗಡಿಕೊಪ್ಪದ ಹತ್ತಿರ ಮಂಗಳವಾರ ಯಾವುದೋ ವಾಹನ ಬಡಿದು ಜಿಂಕೆಯೊಂದು ಮೃತಪಟ್ಟಿದೆ. ಜಿಂಕೆ ಬಿದ್ದಿದ್ದನ್ನು ನೋಡಿ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ನಂತರ ಅವರು ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಜಿಂಕೆ ಸತ್ತಿತ್ತು. ನಂತರ ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ, ಸಹಾಯಕ ಅರಣ್ಯ … Continued

ಸಿದ್ದಾಪುರ: ಮಂಗನಕಾಯಿಲೆಗೆ ಮಹಿಳೆ ಸಾವು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿಯ ಜಾನಕಿ ವೀರಭದ್ರ ಹೆಗಡೆ(85)  ಮಂಗನ ಕಾಯಿಲೆಯಿಂದ  ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಮಂಗನಕಾಯಿಲೆ(KFD)ಗೆ ಬುಧವಾರ ಬೆಳಿಗ್ಗೆ ನಿಧನಳಾಗಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಮೊದಲ ಸಾವಾಗಿದೆ. ಒಂದು ವಾರದಲ್ಲಿ ಮಂಗನ ಕಾಯಿಲೆಯ ಆರು ಸೋಂಕಿತರು ಪತ್ತೆ‌ಯಾಗಿದ್ದಾರೆ. ‌ ಏಪ್ರಿಲ್‌ 12ರಂದು  … Continued

ಸಿದ್ದಾಪುರ: ಗಾಳಿ ರಭಸಕ್ಕೆ ಉರುಳಿದ ತೆಂಗಿನ ಮರ-ನಾಲ್ವರಿಗೆ ಗಾಯ

ಸಿದ್ದಾಪುರ: ಭಾರಿ ಗಾಳಿಯಿಂದಾಗಿ ಮನೆ ಮೇಲೆ ತೆಂಗಿನ ಮರ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಡಕೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮನೆಯ ಪಕ್ಕದಲ್ಲಿ ಅಡಿಕೆ ಸಸಿ ಬೆಳೆಸಲು ಪ್ಲಾಸ್ಟಿಕ್‌ ಕವರಿನಲ್ಲಿ ಮಣ್ಣು ತುಂಬುತ್ತಿರುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ತೆಂಗಿನ ಮರ ಬಿದ್ದಿದೆ. ಮರ ಬಿದ್ದ … Continued

ಭಟ್ಕಳ ಸಮೀಪ ಸಮುದ್ರ ತೀರದಲ್ಲಿ ಕಾಣಿಸಿಕೊಂಡ ಬೃಹತ್‌ ತಿಮಿಂಗಲ…! ವಿಡಿಯೊದಲ್ಲಿ ಸೆರೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ತಿಮಿಂಗಿಲವೊಂದು ಕಾಣಿಸಿಕೊಂಡು ಮೀನುಗಾರರು ಆತಂಕಕ್ಕೆ ಒಳಗಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಬ್ಬಿ ಸಮುದ್ರದ ಕಡಲ ತೀರದಲ್ಲಿ ನಡೆದಿದೆ. ಸಾಮಾನ್ಯವಾಗಿ ತಿಮಿಂಗಲುಗಳು ಆಳಸಮುದ್ರದಲ್ಲಿ ಇರುತ್ತವೆ. ಮತ್ತು ಕಾಣಿಸಿಕೊಳ್ಳುವುದು ಅಪರೂಪ. ಇಂದು (ಶನಿವಾರ) ಬೆಳಿಗ್ಗೆ ಸಮುದ್ರದಲ್ಲಿ ಅದು ಮೀನುಗಾರರಿಗೆ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ಮೀನುಗಾರರು … Continued

ಹಳದೀಪುರ: ಬೈಕ್‌-ಸಾರಿಗೆ ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು

ಹೊನ್ನಾವರ : ತಾಲೂಕಿನ ಹಳದೀಪುರದ ನವಿಲಗೋಣ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾರಿಗೆ ಬಸ್ -ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಸಾವಿಗೀಡಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದ ವರದಿಯಾಗಿದೆ. ಸಾರಿಗೆ ಇಲಾಖೆಯ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದು ಬೈಕ್‌ ನುಜ್ಜುಗುಜ್ಜಾಗಿದೆ. ಮೃತ ಬೈಕ್ ಸವಾರನನ್ನು ಸಂಕೊಳ್ಳಿಯ ಗಣಪತಿ ಅನಂತ … Continued

ತದಡಿ-ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯ ಕೊಲೆ:ಬೇರೆಯವರ ಮನೆ ಮೇಲೆ ಮಲಗಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸಮೀಪ ತದಡಿ ಬಂದರಿನ ಸಮೀಪ ವ್ಯಕ್ತಿಯೊಬ್ಬನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬನಿಗೆ ಬಲವಾದ ಕಬ್ಬಿಣದ ರಾಡಿನಿಂದ ಹೊಡೆದ ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು … Continued