ವಿಡಿಯೊ | ಮುರುಡೇಶ್ವರ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಪ್ರಯಾಣಿಕನೊಬ್ಬ ಕಾಲು ಜಾರಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಸಿಬ್ಬಂದಿ ಎಳೆದು ಪಾರುಮಾಡಿದ ವಿದ್ಯಮಾನ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕೊಚ್ಚಿವಲ್ಲಿಯಿಂದ ಗಂಗಾನಗರಕ್ಕೆ ಹೋಗುತ್ತಿದ್ದ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು.  ನಂತರ … Continued

ಜೂನ್‌ ಒಳಗೆ ಜಿಪಂ, ತಾಪಂ, ಗ್ರಾಪಂ ಚುನಾವಣೆ ; ಸಿಎಂ ಸಿದ್ದರಾಮಯ್ಯ

ಅಂಕೋಲಾ : ಜೂನ್‌ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ ಕಟ್ಟಲಾದ ಗಂಗಾವಳಿ-ಮಂಜುಗುಣಿ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಮೇಲ್ದರ್ಜಗೇರಿಸಿ ಪಟ್ಟಣ ಪಂಚಾಯತ ಒತ್ತಾಯ ಇದ್ದಾಗ್ಯೂ ಜೂನ್‌ ಒಳಗೆ … Continued

ಬೇಡ್ತಿ ಅಘನಾಶಿನಿ ನದಿ ತಿರುವು ಯೋಜನೆಗೆ ಉತ್ತರ ಕನ್ನಡ ಜಿಲ್ಲೆ ಜನಪ್ರತಿನಿಧಿಗಳ ಒಕ್ಕೊರಲ ವಿರೋಧ

 ಶಿರಸಿ: “ಉತ್ತರ ಕನ್ನಡ ಜಿಲ್ಲೆಗೆ ಬೇಡವಾದ ಹಾಗೂ ಪರಿಸರಕ್ಕೆ ಮಾರಕವಾಗುವ ಯಾವುದೇ ಯೋಜನೆಗೂ ನಮ್ಮ ಸಂಪೂರ್ಣ ವಿರೋಧವಿದೆ.ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯೋಜನೆಗಳನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು. ಈ ಯೋಜನೆಗಳನ್ನು ಕೈಬಿಡಬೇಕು ಎಂಬುದು ನಮ್ಮ ಆಗ್ರಹ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ನಗರದ ಎಂ.ಇ.ಎಸ್. ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ … Continued

ಯಾಣ ಬಳಿ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ : 10ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರವಾಸೀ ತಾಣ ಯಾಣ ಸಮೀಪ  ಹಸೆಮನೆ ತಿರುವಿನ ಬಳಿ ಮಂಗಳವಾರ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಯಾಣದತ್ತ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆಯ  ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಪ್ರವಾಸದ ಮತ್ತಿಘಟ್ಟಾ ದಾಟಿದ … Continued

ಕಾರವಾರದಲ್ಲಿ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ವಲಸೆ ಸೀಗಲ್ ಪತ್ತೆ…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕಾ ನೆಲೆ ಐಎನ್‌ಎಸ್ ಕದಂಬ ಬಳಿ ಇರುವ ಕಾರವಾರ ಕಡಲ ತೀರದಲ್ಲಿ ಜಿಪಿಎಸ್ ಟ್ರ್ಯಾಕರ್ ಅಳವಡಿಸಲಾದ ವಲಸೆ ಸೀಗಲ್ ಹಕ್ಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.   ಜಿಪಿಎಸ್​ ಟ್ರ್ಯಾಕರ್​​ (China GPS tracker) ಹೊಂದಿರುವ ಸೀಗಲ್​ ಪಕ್ಷಿ (ಕಡಲ ಹಕ್ಕಿ) ಕದಂಬ ಮಂಗಳವಾರ ಕಾಣಿಸಿಕೊಂಡಿರುವುದು ನೌಕಾನೆಲೆ ಪ್ರದೇಶದ ಬಳಿಯೇ ಇದೆ. … Continued

ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟ ; ರೆಂಜಾಳ ರಾಮಕೃಷ್ಣ ರಾವ್ ಸೇರಿ ಐವರಿಗೆ ಗೌರವ ಪುರಸ್ಕಾರ, ಅಶೋಕ ಹಾಸ್ಯಗಾರರ ಕೃತಿಗೆ ಪುಸ್ತಕ ಬಹುಮಾನ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 18 ಜನ ಹಿರಿಯ ಹಾಗೂ ಸಾಧಕ ಕಲಾವಿದರು ಈ ಸಾಲಿನ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ವೇಳೆ, 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳನ್ನೂ ಘೋಷಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿನ … Continued

ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ₹ 50 ಲಕ್ಷ, 32 ಚಿನ್ನದ ಬಳೆಗಳು ವಶಕ್ಕೆ

ಕಾರವಾರ : ಮುಂಬೈನಿಂದ ಮಂಗಳೂರಿಗೆ ಖಾಸಗಿ ಬಸ್ ಮೂಲಕ ನೀಲಿ ಸೂಟ್‌ಕೇಸ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಾಖಲೆರಹಿತ ನಗದು ಮತ್ತು ಚಿನ್ನವನ್ನು ಭಟ್ಕಳ ಪೊಲೀಸರು ಮಂಗಳವಾರ ಸಂಜೆ ಪತ್ತೆಹಚ್ಚಿದ್ದು, ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಿಖರ ಗುಪ್ತಚರ ಮಾಹಿತಿ ಆಧಾರದ ಮೇರೆಗೆ ಕಾರ್ಯನಿರ್ವಹಿಸಿದ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯ ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ (ಸಿಪಿಐ) … Continued

ಮುರುಡೇಶ್ವರ : ವ್ಯಕ್ತಿ ಮೇಲೆ ಹಲ್ಲೆ ನಡೆಸಿ ₹ 1 ಲಕ್ಷ ಮೌಲ್ಯದ ಚಿನ್ನದ ಸರ ದೋಚಿದ ತೃತೀಯಲಿಂಗಿಗಳು…

ಭಟ್ಕಳ : ಸ್ಕೂಟಿಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದ ಕಾಲೇಜು ಸಿಬ್ಬಂದಿಯೊಬ್ಬರನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರ ಗುಂಪೊಂದು ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾವಳ್ಳಿ ನಿವಾಸಿ, … Continued

ಕಾರವಾರ ಚೆಕ್‌ಪೋಸ್ಟ್‌ ನಲ್ಲಿ ದಾಖಲೆ ರಹಿತ ₹1 ಕೋಟಿ ನಗದು ವಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್ ಬಳಿ ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ದಾಖಲೆಯಿಲ್ಲದ ₹1 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಚಿತ್ತಾಕುಲ ಪೊಲೀಸರು ನಡೆಸಿದ ತಪಾಸಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಮವಾರ ತಡರಾತ್ರಿ ಕಾರ್ಯಾಚರಣೆಯಲ್ಲಿ, ಪೊಲೀಸರು ಖಾಸಗಿ ಬಸ್ ಪರಿಶೀಲನೆ ಮಾಡುವ ಒಂದು ಕೋಟಿ … Continued

ಕಾರವಾರ : ಮೀನು ಚುಚ್ಚಿ ಗಾಯಗೊಂಡು ಮೀನುಗಾರ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ದಂಡೇಭಾಗ ಪ್ರದೇಶದ ಬಳಿ ಮೀನುಗಾರಿಕೆಗೆ ತೆರಳಿದ್ದ ವೇಳೆ 24 ವರ್ಷದ ಮೀನುಗಾರ ಹಾರುವ ತೊಳೆ ಕಾಂಡೆ ಮೀನು (Flying fish) ಚುಚ್ಚಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 14, ಮಂಗಳವಾರ ಅಕ್ಷಯ ಮಾಜಾಳೀಕರ ಎಂಬವರು ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದರು. … Continued