ಯಲ್ಲಾಪುರ : ಕಾನೂರು ಜಲಪಾತದಲ್ಲಿ ವಿದ್ಯಾರ್ಥಿ ನಾಪತ್ತೆ

ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ … Continued

ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಬಾಲಕ ಸಮುದ್ರ ಪಾಲು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಕುಟುಂಬವೊಂದು ಸಮುದ್ರದಲ್ಲಿ ಇಳಿದಿದ್ದಾಗ ಬಾಲಕನೊಬ್ಬ ಕಡಲ ಅಲೆಗೆ ಸಿಲುಕಿ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಬಿದರಳ್ಳಿ ನಿವಾಸಿ ಕೃತಿಕ್ (8), ತಮ್ಮ ಕುಟುಂಬ ಸಮೇತ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ … Continued

ಕುಮಟಾ : ನಿವೃತ್ತ ಪ್ರಾಚಾರ್ಯ ಮಾದೇವ ಎಂ. ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯವರಾದ ನಿವೃತ್ತ ಪ್ರಾಚಾರ್ಯ ಮಾದೇವ ಎಂ ಹೆಗಡೆ (92)ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೀರ್ಘ ಕಾಲ ಶಿರಸಿಯ ಸರಕುಳಿಯ ಶಾಂತಿಕಾಂಭಾ ಪ್ರೌಢ ಶಾಲೆಯ ಮುಖ್ಯಾಧ್ಯಾಪಕರಾಗಿ ಸೇವೆಸಲ್ಲಿಸಿದ್ದರು. ಶಿರಸಿಯ ಲೈನ್ಸ್ ಕ್ಲಬ್ ಅಧ್ಯಕ್ಷರಾಗಿ, ಲಯನ್ಸ್‌ ಜೋನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಸುಮಾರು 30 ವರ್ಷಗಳ ಲಯನ್ಸ್‌ ಸಂಸ್ಥೆಯಲ್ಲಿ … Continued

ʼಪುರುಷ ಸೂಕ್ತʼ ಮಂತ್ರವು ವಿಜ್ಞಾನದ ʼಸೃಷ್ಟಿ ತತ್ವʼದ ಬಗ್ಗೆ ಹೇಳುತ್ತವೆ ; ಇದರ ಮಂತ್ರಗಳಲ್ಲಿದೆ ಖಗೋಳ ಭೌತ ವಿಜ್ಞಾನ : ನನ್ನ ಪುಸ್ತಕದಲ್ಲಿ ಇದರ ಬಗ್ಗೆ ಹೇಳಿದ್ದೇನೆ | ಆರ್‌.ಎಸ್‌.ಹೆಗಡೆ ಬೆಳ್ಳೆಕೇರಿ

ರಘುಪತಿ ಯಾಜಿ ಪುರುಷ ಸೂಕ್ತದ ಹಲವು ಮಂತ್ರಗಳು ವಿಶ್ವದ ಎಲ್ಲ ಭೌತಿಕ ಚೈತನ್ಯದ ಸೃಷ್ಟಿಗಳ ಕುರಿತಾಗಿ ವರ್ಣಿಸುತ್ತವೆ. ನಂತರ ಭೂಮಿಯ ಮೇಲಿನ ರಸೋತ್ಪತ್ತಿ -ಜೀವೋತ್ಪತ್ತಿಗಳ ವರ್ಣನೆ, ಉಪಾಸನೆ ಹಾಗೂ ಕರ್ಮಗಳ ಬಗ್ಗೆ ವಿವರಿಸುತ್ತವೆ. ಅಂತಿಮವಾಗಿ ‘ಮೋಕ್ಷ’ ಮಾರ್ಗದ ಬಗ್ಗೆ ಹೇಳುತ್ತದೆ. ಈ ಸೂಕ್ತದ ಮಂತ್ರಗಳಲ್ಲಿರುವ ವರ್ಣನೆಗಳು ಇಂದಿನ ಖಗೋಳ ಭೌತ ವಿಜ್ಞಾನ ಹಾಗೂ ಜೀವ ವಿಜ್ಞಾನ … Continued

ಶಿರಸಿ : ಸೆಪ್ಟೆಂಬರ್‌ ೧೪ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಮಟ್ಟದ ಸಮ್ಮೇಳನ

ಶಿರಸಿ : ರಾಜ್ಯ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹುಬ್ಬಳ್ಳಿಯ ವತಿಯಿಂದ ನಗರದ ನೆಮ್ಮದಿ ರಂಗಧಾಮದಲ್ಲಿ ಸೆಪ್ಟೆಂಬರ್‌ ೧೪ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಮಟ್ಟದ ಎಂಟನೇ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತಿ ಡಾ. ಜಿ. ಎ. ಹೆಗಡೆ ಸೋಂದಾ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ. ಎಂದು ಪರಿಷತ್ತಿನ ಶಿರಸಿ ಶೈಕ್ಷಣಿಕ ಜಿಲ್ಲೆ ಅಧ್ಯಕ್ಷ ಮನೋಹರ ಮಲ್ಮನೆ ಹೇಳಿದರು. … Continued

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಸಾಮಾಜಿಕ ಹೋರಾಟಗಾರ ಪಿ.ಎಸ್.ಭಟ್ಟ ಉಪ್ಪೋಣಿ ನಿಧನ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಎಸ್‌.ಭಟ್‌ ಉಪ್ಪೋಣಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೋಣಿಯವರಾಗಿದ್ದ ಅವರು ಬಿಎಸ್‌ಸಿ ಪದವೀಧರರಾಗಿದ್ದರು. ವಿದ್ಯಾರ್ಥಿ ದಿಸೆಯಿಂದಲೇ ನಾಕತ್ವಗುಣ ಇದ್ದ ಅವರು ಹೊನ್ನಾವರ ಎಸ್‌ಡಿಎಂ ಕಾಲೇಜ್‌ ಯೂನಿಯನ್‌ ಕಾರ್ಯದರ್ಶಿಯಾಗಿದ್ದರು. ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ … Continued

ಶಿರಸಿ : ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಓರ್ವ ನಾಪತ್ತೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಸಮೀಪದ ಬೆಣ್ಣೆಹೊಳೆ ಜಲಪಾತ ನೋಡಲು ಭಾನುವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ನಾಪತ್ತೆಯಾಗಿದ್ದಿನ್ನೋರ್ವ ವಿದ್ಯಾರ್ಥಿಯನ್ನು ಶೋಧ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ನಗರದ ಅರಣ್ಯ ಪದವಿ ಕಾಲೇಜಿನ ರಾಹುಲ್ ಎಂಬಾತ ನೀರಿನಲ್ಲಿ ಕಣ್ಮರೆಯಾದ ವಿದ್ಯಾರ್ಥಿ. ಎನ್ನಲಾಗಿದೆ. … Continued

ನ್ಯಾ. ಯಶವಂತ ವರ್ಮಾ ಹಗರಣದ ತನಿಖಾ ಸಮಿತಿಗೆ ಕಾರ್ಯದರ್ಶಿಯಾಗಿ ಉತ್ತರ ಕನ್ನಡ ಮೂಲದ ಗಣಪತಿ ಭಟ್ ನೇಮಕ

ಬೆಂಗಳೂರು : ಮಾಜಿ ಐಆರ್‌ಎಸ್ ಅಧಿಕಾರಿ ಗಣಪತಿ ಭಟ್ ಅವರನ್ನು, ದೋಷಾರೋಪಣೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ 1989 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಭಟ್ ಅವರನ್ನು ಸ್ಪೀಕರ್ ಓಂ ಬಿರ್ಲಾ … Continued

ಶಿರಸಿ : ಏರ್‌ ಗನ್‌ ನಿಂದ ಗುಂಡು ಹಾರಿ ಬಾಲಕ ಸಾವು

ಶಿರಸಿ: ಎರಡು ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಾತ್‌ ಆಗಿ ಏರ್ ಗನ್ ಗುಂಡು ಹಾರಿ ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ಸಮೀಪದ ಸೋಮನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸೋಮನಳ್ಳಿಯ ರಾಘವೇಂದ್ರ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡಲು ಬಸಪ್ಪ ಉಂಡಿಯರ್ ಕುಟುಂಬ … Continued

ಕುಮಟಾ | ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆಗೆ ವಿರೋಧ; ವ್ಯಕ್ತಿ ಮೇಲೆ ಹಲ್ಲೆ

ಕುಮಟಾ: ಪಟ್ಟಣದ ಹಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಬುಧವಾರ ಗಣೇಶ ವಿಸರ್ಜನೆ ವೇಳೆ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಲೆಕ್ಕಿಸದೇ ಡಿಜೆ ಬಳಕೆ ಮಾಡಿದ ಕಾರಣಕ್ಕೆ ಆಕ್ಷೇಪಿಸಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಬಳಕೆ … Continued