ಮಾಗೋಡು ಜಲಪಾತದ ರಸ್ತೆಯಲ್ಲಿ ಭೂ ಕುಸಿತ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೆಸರಾಂತ ಮಾಗೋಡಿನ ಜಲಪಾತಕ್ಕೆ ಹೋಗುವ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿ ಜಲಪಾತಕ್ಕೆ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಯಲ್ಲಾಪುರ ತಾಲೂಕಿನ ಮೊಟ್ಟೆ ಗೆದ್ದೆ ಸಮೀಪದ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿನ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು ಮಾಗೋಡ್ ಫಾಲ್ಸ್ ಗೆ ಹೋಗುವ ರಸ್ತೆ ಕಡಿತಗೊಂಡಿದೆ. ಹೀಗಾಗಿ ಮಾಗೋಡ … Continued

ಶಿರೂರು ಗುಡ್ಡ ಕುಸಿತ | ನಾಪತ್ತೆಯಾದವರ ಹುಡುಕಾಟ ಮತ್ತಷ್ಟು ತೀವ್ರ ; ಟ್ರಕ್‌ ಸ್ಥಳ ನಿರ್ಧರಿಸಲು ಅಡ್ವಾನ್ಸ್ಡ್‌ ಡ್ರೋನ್ ಬಳಕೆ : ಮುಳುಗು ತಜ್ಞರಿಗೆ ನದಿಯ ಪ್ರವಾಹವೇ ಸವಾಲು

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ತಂಡಗಳು ಲಾರಿ ಗಂಗಾವಳಿ ನದಿಯಲ್ಲಿ ಇರುವುದರ ಬಗ್ಗೆ ಮತ್ತಷ್ಟು ಖಚಿತತೆ ವ್ಯಕ್ತಪಡಿಸಿವೆ. ಹೈರೆಸಲ್ಯೂಶನ್‌ ದ್ರೋಣ್ ಮೂಲಕ ಗುರುವಾರ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕ್ವಿಕ್ ಪೇ ಪ್ರೈವೇಟ್ ಲಿಮಿಟೆಡ್ ಆಪರೇಶನಲ್ ಸಲಹೆಗಾರ, ನಿವೃತ್ತ ಮೇಜರ್ ಜನರಲ್ ಇಂದ್ರಬಾಲನ್ … Continued

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತೀರಿ ಏಕೆ : ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಸಂಗ್ರಹ ಮಾಡುತ್ತಿದ್ದೀರಿ. ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಈವರೆಗೂ ಮುಕ್ತಾಯಗೊಳಿಸದೆ, ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ತ್ವರಿತ ಕಾರ್ಯಾಚರಣೆಗೆ ಸೂಚನೆ ; ಕ್ಷಿಪ್ರಗತಿಯಲ್ಲಿ ಮಣ್ಣು ತೆರವು, ಶೋಧ ಕಾರ್ಯಾಚರಣೆಗೆ ಮಿಲಿಟರಿ-ನೌಕಾಪಡೆ ನೆರವು ; ಸಿಎಂ ಸಿದ್ದರಾಮಯ್ಯ

 ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಸಿಲುಕಿಕೊಂಡಿರಬಹುದಾದವರ ಶೋಧ ಕಾರ್ಯಾಚರಣೆಯಲ್ಲಿ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಇದಕ್ಕೆ 44 ಜನ ಮಿಲಿಟರಿ ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರ (ಜುಲೈ 21) ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಉತ್ತರ ಕನ್ನಡ ಜಿಲ್ಲೆ : ಗುಡ್ಡ ಕುಸಿದು ಬಂದ್‌ ಆಗಿದ್ದ ಕುಮಟಾ-ಸಿದ್ದಾಪುರ ಮಾರ್ಗ ಸಂಚಾರಕ್ಕೆ ಮುಕ್ತ

ಕುಮಟಾ : ಗುಡ್ಡ ಕುಸಿದು ಎರಡು ದಿನಗಳಿಂದ ಬಂದ್ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಸಿದ್ದಾಪುರ ಮಾರ್ಗ ಈಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕುಮಟಾ-ಸಿದ್ದಾಪುರ ರಸ್ತೆಯ ಉಳ್ಳೂರುಮಠ ಕ್ರಾಸ್‌ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯ ಮೇಲೆ ಬಂದು ಬಿದ್ದಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮರ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕುಮಟಾ-ಸಿದ್ದಾಪುರ ನಡುವಿನ … Continued

ಶಿರೂರು ಗುಡ್ಡ ಕುಸಿತ | ರಾಡಾರ್ ಮೂಲಕ ಸಿಲುಕಿರುವವರ ಶೋಧ ಕಾರ್ಯ ಆರಂಭಿಸಿದ ತಜ್ಞರ ತಂಡ : ಕೇರಳದಿಂದ ಬಂದ ರಕ್ಷಣಾ ಪರಿಣಿತರು

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿರುವವನ್ನು ಪತ್ತೆಹಚ್ಚಲು ಸುರತ್ಕಲ್ ನಿಂದ ರಾಡಾರ್ ಯಂತ್ರದೊಂದಿಗೆ ಆಗಮಿಸಿರುವ ತಜ್ಞರ ತಂಡ ಪತ್ತೆಕಾರ್ಯ ನಡೆಸುತ್ತಿದೆ. ಅಲ್ಲದೆ, ಕೇರಳದಿಂದ ಆಗಮಿಸಿರುವ ಪರಿಣಿತ ರಕ್ಷಣಾ ಕಾರ್ಯಕರ್ತರ ತಂಡ ಕೂಡಾ ಈ ಪ್ರದೇಶದಲ್ಲಿ ವ್ಯಾಪಕ ಪರಿಶೀಲನೆ ನಡೆಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು … Continued

ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ; ಇದು ರಾಜಕಾರಣದ ಸಮಯವಲ್ಲ, ಸರ್ಕಾರ ಜನರ ನೆರವಿಗೆ ನಿಲ್ಲಬೇಕು : ಕುಮಾರಸ್ವಾಮಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ದುರಂತದ ಸಂದರ್ಭದಲ್ಲಿಪುಡಿಗಾಸು ಪರಿಹಾರ ನೀಡುವುದರ ಬದಲು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ, ಬೆಳೆ ಹಾನಿ ಸಂಭವಿಸಿದ ರೈತರಿಗೆ … Continued

ನಾಳೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ  ದುರಂತ ಸ್ಥಳ ಪರಿಶೀಲಿಸಲು ನಾಳೆ (ಜುಲೈ 21) ಭಾನುವಾರ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಹಾಗೂ ಉತ್ತರ ಕನ್ನಡ ಜಿಲ್ಲೆಯ … Continued

ಉತ್ತರ ಕನ್ನಡ ಜಿಲ್ಲೆ: ಶಾಲೆ- ಕಾಲೇಜುಗಳಿಗೆ ಇಂದು (ಜುಲೈ 20) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 20) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, … Continued

ಸಿದ್ದಾಪುರ : ಸರ್ಕುಳಿ ಸೇತವೆ ಮೇಲೆ 3 ಅಡಿಗಳಷ್ಟು ನೀರು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅಘನಾಶಿನಿ ನದಿ ಪಾತ್ರದಲ್ಲಿ ವಿಪರೀತ ಮಳೆಯಾಗುತ್ತಿದೆ. ಸಿದ್ದಾಪುರ ತಾಲೂಕಿನ ನಿಲ್ಕುಂದ, ಹೆಗ್ಗರಣಿ, ತಟ್ಟಿಕೈ, ಬಾಳೇಸರ, ಹಾರ್ಸಿಕಟ್ಟಾ ಸುತ್ತಮುತ್ತ ವಿಪರೀತ ಮಳೆಯಾಗಿತ್ತಿದ್ದು, ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದೆ. ಶಿರಸಿ ಸಿದ್ದಾಪುರ ತಾಲೂಕಿನ ಗಡಿ ಸರ್ಕುಳಿಯಲ್ಲಿ ಸೇತುವೆ ಮೇಲೆ 3-4 ಅಡಿಗಳಷ್ಟು ನೀರು ಹರಿಯುತ್ತಿದೆ. ಅಲ್ಲಿಯ ಮಹಿಷಾಸುರ ಮರ್ಧಿನಿ … Continued