ದ್ವಿತೀಯ ಪಿಯು : ಕುಮಟಾ ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ಫಲಿತಾಂಶ ಶೇ.92, ಅನನ್ಯ ಕಾಮತ್‌ (ಶೇ.98) ಪ್ರಥಮ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.92 ಆಗಿದ್ದು ಪರೀಕ್ಷೆಗೆ ಕುಳಿತವರಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಅನನ್ಯ ಕಾಮತ್ ಶೇ.98 (588)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ‌ತಾರೀಬಾಗಿನಲ್ಲಿ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಕುಸಿದ ಸ್ಲ್ಯಾಬ್‌ ಅಡಿ ಸಿಲುಕಿ ಹಿಟಾಚಿ, ಕ್ರೇನ್ ಜಖಂಗೊಂಡಿದೆ. ಕಾರ್ಮಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ. ಕುಮಟಾದ ತಾರೀಬಾಗಿಲಿನಲ್ಲಿ ಅಘನಾಶಿನಿ ನದಿಗೆ ಅಡ್ಡಲಾಗಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಮಿರ್ಜಾನ್‌-ಹೆಗಡೆ … Continued

ಲೋಕಸಭೆ ಚುನಾವಣೆ : ಕೈತಪ್ಪಿದ ಬಿಜೆಪಿ ಟಿಕೆಟ್ ; ಭಾವನಾತ್ಮಕ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ

ಶಿರಸಿ : ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಬಿಜೆಪಿಯ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್‌ ತಪ್ಪಿದೆ. ಅವರ ಬದಲಿಗೆ ವಿಧಾನಸಭೆ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲೇ ಅನಂತಕುಮಾರ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆ … Continued

ವೀಡಿಯೊಗಳು…| ಅದ್ಧೂರಿಯಿಂದ ನಡೆದ ಶಿರಸಿ ಮಾರಿಕಾಂಬಾ ರಥೋತ್ಸವ ; ಭಕ್ತ ಸಾಗರದ ಮಧ್ಯೆ ಜಾತ್ರಾ ಗದ್ದುಗೆಗೆ ಆಗಮಿಸಿದ ಮಾರಿಕಾಂಬಾ ದೇವಿ

ಶಿರಸಿ: ರಾಜ್ಯದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ಜಾತ್ರೆಯ ಮಾರಿಕಾಂಬಾ ದೇವಿಯ ರಥೋತ್ಸವ ಜನಸ್ತೋಮದ ಮಧ್ಯೆ ಬುಧವಾರ ನಡೆಯಿತು. ಭಕ್ತಿ ಭಾವ ಹಾಗೂ ಭಕ್ತರ ಭಾವೋನ್ಮಾದ, ಜಯ ಘೋಷದ ಮಧ್ಯೆ ಬುಧವಾರ ಬೆಳಿಗ್ಗೆ ರಥೋತ್ಸವ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ನಸುಕಿನಲ್ಲಿ ರಥಾರೂಢಳಾದ ಸರ್ವಾಲಂಕಾರಭೂಷಿತೆ ಮಾರಿಕಾಂಬಾ ದೇವಿಯ ಶೋಭಾಯಾತ್ರೆ ಮೂಲಕ ಬಿಡಕಿಬೈಲಿನಲ್ಲಿ ಜಾತ್ರಾ ಗದ್ದುಗೆಗೆ ತೆರಳಿದಳು. … Continued

ಕುಮಟಾ: ಮಿರ್ಜಾನ-ಕೋಡ್ಕಣಿಯ ವೈದ್ಯ ಡಾ. ರತ್ನಾಕರ ಶಾನಭಾಗ ನಿಧನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ-ಕೋಡ್ಕಣಿಯ ಹೆಸರಾಂತ ವೈದ್ಯರಾಗಿದ್ದ ಡಾ. ರತ್ನಾಕರ ರಾಮ ಶಾನಭಾಗ (77) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ವಾರ ಮಿರ್ಜಾನ ಬಳಿ ನಡೆದ ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಪಾರ … Continued

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅನಂತ ಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ಮಾ. ೧೬ರಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ; ಶತಾವಧಾನಿ ಆರ್‌.ಗಣೇಶರಿಗೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ-ಎಂ.ಎಲ್.ಸಾಮಗರಿಗೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ

ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಕೆರೆಮನೆಯ ಆಶ್ರಯದಲ್ಲಿ ೧೪ನೇ ವರ್ಷದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಮಾರ್ಚ್ ೧೬ರಿಂದ ೨೦ರ ವರೆಗೆ ನಡೆಯಲಿದೆ ಎಂದು ಇಡಗುಂಜಿ ಮೇಳದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಐದು ದಿನಗಳ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ … Continued

ಸಿದ್ದಾಪುರ : ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ(ಕೆಎಫ್‌ಡಿ)ಗೆ ಒಂದೇ ದಿನ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಕಲ್ಲೂರು ಗ್ರಾಮದ 65 ವರ್ಷದ ವೃದ್ಧ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗನ ಕಾಯಿಲೆಯಿಂದ … Continued

ಭಟ್ಕಳ : ತೆರವು ಮಾಡಿದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿದ ಸಂಸದ ಅನಂತಕುಮಾರ ಹೆಗಡೆ-ಇತರರು…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಸ್ಥಳದಲ್ಲೇ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಸಮ್ಮುಖದಲ್ಲಿ ಮತ್ತೆ ಹನುಮ ಧ್ವಜವನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಕಾರ್ಯಕರ್ತರ ಸಭೆಗೆ ಸಂಸದ ಅನಂತಕುಮಾರ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಅವರ ನೇತೃತ್ವದಲ್ಲಿ ಹನುಮ … Continued