ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು … Continued

ಉತ್ತರಾಖಂಡ : ಅಕ್ರಮ ಮದರಸಾ ತೆರವು ವೇಳೆ ಹಿಂಸಾಚಾರದಲ್ಲಿ 4 ಸಾವು, 250 ಮಂದಿಗೆ ಗಾಯ ; ಕರ್ಫ್ಯೂ ಜಾರಿ, ಶಾಲೆಗಳು ಬಂದ್

ಡೆಹ್ರಾಡೂನ್‌ : ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ. ಹಾಗೂ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ “ಕಾನೂನುಬಾಹಿರವಾಗಿ ನಿರ್ಮಿಸಲಾದ” ಮದರಸಾ ಮತ್ತು ಪಕ್ಕದ ಮಸೀದಿಯನ್ನು ಕೆಡವಿದ ನಂತರ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಿದರು. ಆಸ್ಪತ್ರೆಗೆ … Continued

ದೇಶದಲ್ಲೇ ಮೊದಲು : ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ಧ್ವನಿ ಮತದ ಅಂಗೀಕಾರ

ಡೆಹ್ರಾಡೂನ್: ಮಹತ್ವದ ಕ್ರಮದಲ್ಲಿ ಉತ್ತರಾಖಂಡ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಬುಧವಾರ ಅಂಗೀಕರಿಸಿದೆ. ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ಮಂಗಳವಾರದಂದು, ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರದಲ್ಲಿ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಅಂಗೀಕರಿಸಿದ ಮೊದಲ ರಾಜ್ಯವಾಗಿದೆ. ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು … Continued

ಲಿವ್-ಇನ್ ಸಂಬಂಧಕ್ಕೂ ನೋಂದಣಿ, 21 ವರ್ಷದೊಳಗಿನವರಿಗೆ ಪೋಷಕರ ಅನುಮತಿ ಕಡ್ಡಾಯ, ಇಲ್ಲದಿದ್ರೆ ಜೈಲು ಶಿಕ್ಷೆ : ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ

ಡೆಹ್ರಾಡೂನ್:  ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನಾಗಿ ಜಾರಿಯಾದ ನಂತರ ಲಿವ್-ಇನ್ ಸಂಬಂಧದಲ್ಲಿರುವ ವ್ಯಕ್ತಿಗಳು ಜಿಲ್ಲಾ ಅಧಿಕಾರಿಗಳ ಬಳಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಒಟ್ಟಿಗೆ ವಾಸಿಸಲು ಬಯಸಿದರೆ ಅವರ ಪೋಷಕರ … Continued

ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

ಡೆಹ್ರಾಡೂನ್‌: ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಸರ್ಕಾರವು ನೇಮಿಸಿದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಯನ್ನು ಭಾನುವಾರ ಅಂಗೀಕರಿಸಿದೆ. ನಾಗರಿಕ ಕಾನೂನುಗಳಲ್ಲಿ ಏಕರೂಪತೆ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಈಗ ಫೆಬ್ರವರಿ 6 ರಂದು (ಮಂಗಳವಾರ) ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು … Continued

ಉತ್ತರಾಖಂಡ ಮದರಸಾಗಳಲ್ಲಿ ಶ್ರೀರಾಮನ ಕುರಿತು ಅಧ್ಯಯನಕ್ಕೆ ಅವಕಾಶ : ವಕ್ಫ್ ಬೋರ್ಡ್ ಅಧ್ಯಕ್ಷ

ಡೆಹ್ರಾಡೂನ್: ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ದೇಶಾದ್ಯಂತ ರಾಮನ ಕುರಿತ ವಿಚಾರಗಳು ವ್ಯಾಪಕ ಸುದ್ದಿಯಾಗುತ್ತಿದೆ. ಈ ಮಧ್ಯೆ ಉತ್ತರಾಖಂಡದಲ್ಲಿ ಮದರಸಾಗಳಲ್ಲಿ ಭಗವಾನ್‌ ರಾಮನ ಕುರಿತು ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಉತ್ತರಾಖಂಡದ ಮದರಸಾಗಳಲ್ಲಿ (Uttarakhand Madrasa) ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯ ಅಳವಡಿಸಿಕೊಳ್ಳಲಾಗುತ್ತಿದೆ. ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ … Continued

ಕಾಯಿಲೆ ಗುಣವಾಗುತ್ತದೆಂದು ಬಾಲಕನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ಪೋಷಕರು..: ಆದ್ರೆ ಬಾಲಕನ ಪ್ರಾಣವೇ ಹೋಯ್ತು…

ಡೆಹ್ರಾಡೂನ್: ಕುಟುಂಬದ ಮೂಢನಂಬಿಕೆ ಮತ್ತು ಪವಾಡದ ಮೇಲಿನ ಅಂಧಶ್ರದ್ಧೆಯು ಐದು ವರ್ಷದ ಬಾಲಕನ ಸಾವಿಗೆ ಕಾರಣವಾದ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಐದು ವರ್ಷದ ಬಾಲಕ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಗಂಗಾ ನದಿ ನೀರು ಗುಣಪಡಿಸುತ್ತದೆ ಎಂದು ಆತನ ಹೆತ್ತವರು ನಂಬಿದ್ದರು. ಗಂಗಾನದಿ ನೀರಿನಲ್ಲಿ ಮುಳುಗಿದರೆ ಆತನ ಕಾಯಿಲೆ ಕಡಿಮೆಯಾಗುತ್ತದೆ ಎಂಬ ಮೂಡನಂಬಿಕೆಯಲ್ಲಿ ಉತ್ತರ ಭಾರತದ … Continued

ಗೇಟ್‌ ಮುರಿದು ಹರಿದ್ವಾರ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಕಾಡಾನೆ | ವೀಕ್ಷಿಸಿ

ಬುಧವಾರ ಹರಿದ್ವಾರದಲ್ಲಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮತ್ತು ನ್ಯಾಯಾಲಯ ಸಂಕೀರ್ಣದ ಆವರಣಕ್ಕೆ ಕಾಡಾನೆಯೊಂದು ನುಗ್ಗಿದ ನಂತರ ಅವ್ಯವಸ್ಥೆ ಉಂಟಾಗಿಯಿತು ಹಾಗೂ ಸಿಬ್ಬಂದಿ ಹಾಗೂ ನೆರೆದಿದ್ದವರಲ್ಲಿ ಆತಂಕ ಮೂಡಿಸಿತು. ಬುಧವಾರ ಸಂಜೆ 4:45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಕೇವಲ 150 ಮೀಟರ್ ದೂರದಲ್ಲಿರುವ ಮುಖ್ಯ ದ್ವಾರವನ್ನು ಭೇದಿಸಿದ ಆನೆ … Continued

ರಕ್ಷಣಾ ಕಾರ್ಯಾಚರಣೆ ಯಶಸ್ವಿ : 17 ದಿನಗಳ ಅಗ್ನಿಪರೀಕ್ಷೆಯ ನಂತರ ಸಿಲ್ಕ್ಯಾರ ಸುರಂಗದಿಂದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ

ಉತ್ತರಕಾಶಿ: ಭೂ ಕುಸಿತದಿಂದಾಗಿ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು 17 ದಿನಗಳ ನಂತರ ಮಂಗಳವಾರ ರಾತ್ರಿ ರಕ್ಷಿಸಲಾಗಿದೆ. ಕಠಿಣ ಕಾರ್ಯಾಚರಣೆಯ ನಂತರ ಎಲ್ಲಾ ಕಾರ್ಮಿಕರನ್ನು ಸುರಂಗದಿಂದ ಸುರಕ್ಷಿತವಾಗಿ ಹೊರತರಲಾಗಿದೆ. ರಕ್ಷಣಾ ಕಾರ್ಯಾಚರಣೆಯ ನಂತರ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಗಳವಾರ ಸುರಂಗದ ಹೊರಗೆ ಭೇಟಿಯಾದರು. ಕೇಂದ್ರ … Continued

ಅಂತಿಮ ಹಂತದಲ್ಲಿ ಸುರಂಗ ಕೊರೆಯುವ ಕಾರ್ಯಾಚರಣೆ : “ನಿಮ್ಮ ಬ್ಯಾಗ್‌ಗಳನ್ನು ರೆಡಿ ಇಟ್ಟುಕೊಳ್ಳಿ” ಎಂದು ಒಳಗೆ ಸಿಲುಕಿರುವ ಕಾರ್ಮಿಕರ ಕುಟುಂಬಗಳಿಗೆ ಸೂಚನೆ

ಉತ್ತರಕಾಶಿ: ಭೂ ಕುಸಿತದಿಂದಾಗಿ ಎರಡು ವಾರಗಳಿಂದ ಸುರಂಗದೊಳಗೆ ಸಿಕ್ಕಿಬಿದ್ದಿರುವ 41 ಕಾರ್ಮಿಕರ ಸಂಬಂಧಿಕರಿಗೆ “ಸಿದ್ಧರಾಗಿರಿ” ಎಂದು ಸೂಚಿಸಲಾಗಿದೆ. ಏಕೆಂದರೆ ಅವರನ್ನು ತಲುಪಲು ಕೆಲವೇ ಮೂರು ಮೀಟರ್ ಕೊರೆಯವುದು ಮಾತ್ರ ಬಾಕಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. “ಅವರ ಬಟ್ಟೆ ಮತ್ತು ಬ್ಯಾಗ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಿ” ಎಂದು ಅಧಿಕಾರಿಗಳು ಕುಸಿದ ಸುರಂಗದ ಹೊರಗೆ ಇರುವ ಕುಟುಂಬಗಳ ಸದಸ್ಯರಿಗೆ ಹೇಳಿದ್ದಾರೆ. … Continued