3 ಮದುವೆಗಳು, ₹ 1.25 ಕೋಟಿ ಲೂಟಿ : ಶ್ರೀಮಂತರನ್ನೇ ಟಾರ್ಗೆಟ್‌ ಮಾಡಿ ಹಣ ಪೀಕುತ್ತಿದ್ದ ‘ಲೂಟಿ ವಧು’…!

ನವದೆಹಲಿ : ಲೂಟಿಕೋರ ವಧು ಎಂದು ಪೊಲೀಸರು ಬಣ್ಣಿಸಿರುವ ಮಹಿಳೆಯೊಬ್ಬಳು ದಶಕಕ್ಕೂ ಹೆಚ್ಚು ಕಾಲ ಅನೇಕರನ್ನು ಮದುವೆಯಾಗಿ ಸೆಟಲ್ ಮೆಂಟ್ ಹೆಸರಿನಲ್ಲಿ ಒಟ್ಟು ₹ 1.25 ಕೋಟಿ ವಸೂಲಿ ಮಾಡಿದ್ದು, ಈಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ. ಉತ್ತರಾಖಂಡ ನಿವಾಸಿಯಾಗಿರುವ ಸೀಮಾ ಉರುಫ್‌ ನಿಕ್ಕಿ ಎಂಬಾಕೆ 2013ರಲ್ಲಿ ಮೊದಲು ಆಗ್ರಾದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದಳು. ಕೆಲ ಸಮಯದ ಬಳಿಕ … Continued

ಉತ್ತರಾಖಂಡದಲ್ಲಿ 2025ರ ಜನವರಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ

ಡೆಹ್ರಾಡೂನ್‌ : 2025ರ ಜನವರಿಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಪ್ರಕಟಿಸಿದ್ದಾರೆ. ವರದಿಗಳ ಪ್ರಕಾರ, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಮತ್ತು ಸ್ವಾತಂತ್ರ್ಯದ ನಂತರ ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆ(UCC)ಯನ್ನು ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ. ಬುಧವಾರ (ಡಿಸೆಂಬರ್ 18) ಸೆಕ್ರೆಟರಿಯೇಟ್‌ನಲ್ಲಿ ನಡೆದ ಉತ್ತರಾಖಂಡ ಹೂಡಿಕೆ ಮತ್ತು … Continued

ಬಸ್ಸು ಕಮರಿಗೆ ಬಿದ್ದು 22 ಮಂದಿ ಸಾವು

ಅಲ್ಮೋರಾ : ಸೋಮವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದು ಕನಿಷ್ಠ 22 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಬಸ್‌ನಲ್ಲಿ ಓವರ್‌ಲೋಡ್‌ ಇತ್ತು ಮತ್ತು ಮೃತಪಟ್ಟವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ ಗರ್ವಾಲ್‌ನಿಂದ ಕುಮಾನ್‌ಗೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕಕುಮಾರ ಪಾಂಡೆ … Continued

ವೀಡಿಯೊ..| ಮತ್ತೊಂದು ಹೆಲಿಕಾಪ್ಟರ್‌ ಮೂಲಕ ಏರ್‌ ಲಿಫ್ಟ್‌ ಮಾಡುತ್ತಿದ್ದಾಗ ನದಿಗೆ ಬಿದ್ದ ಹೆಲಿಕಾಪ್ಟರ್‌

ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್ ಶನಿವಾರ ಮಂದಾಕಿನಿ ನದಿಯ ಬಳಿ ಪತನಗೊಂಡಿತ್ತು. ರಿಪೇರಿಗಾಗಿ ಮತ್ತೊಂದು ಹೆಲಿಕಾಪ್ಟರ್ ಮೂಲಕ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್‌ ಲಿಫ್ಟ್‌ ಮಾಡುವಾಗ ಹೆಲಿಕಾಪ್ಟರ್ ಥಾರು ಕ್ಯಾಂಪ್ ಬಳಿ ಬಿದ್ದಿದೆ. ಯಾರಿಗೂ ಯಾವುದೇ ಗಾಯಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇದಾರನಾಥ … Continued

ವೀಡಿಯೊ…| ಭಾರಿ ಭೂಕುಸಿತ-ಕುಸಿದ ಬೃಹತ್ ಪರ್ವತದ ಒಂದು ಭಾಗ : ಆಗಸದೆತ್ತರಕ್ಕೆ ಧೂಳಿನ ಮೋಡ ; ಬದರಿನಾಥ ಹೆದ್ದಾರಿ ಬಂದ್

ಡೆಹ್ರಾಡೂನ್‌: ಈ ವರ್ಷ ಮುಂಗಾರು ಮಳೆ ಉತ್ತರ ಭಾರತಕ್ಕೆ ಕಾಲಿಡುತ್ತಿದ್ದಂತೆ ಹಿಮಾಲಯದ ಉತ್ತರಾಖಂಡ ರಾಜ್ಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯ ಪಾತಾಳಗಂಗಾ ಲಾಂಗ್ಸಿ ಸುರಂಗದ ಬಳಿ ಭಾರಿ ಭೂಕುಸಿತ ಉಂಟಾಗಿದ್ದು, ಬುಧವಾರ ರಸ್ತೆಯನ್ನು ನಿರ್ಬಂಧಿಸಲಾಗಿದೆ. ಭೂಕುಸಿತದಿಂದ ಭಾರಿ ಪ್ರಮಾಣದ ಧೂಳು ಆವರಿಸಿದ್ದರಿಂದ ಗೋಚರತೆಗೆ ಕೆಲಕಾಲ ಅಡ್ಡಿ … Continued

ಉತ್ತರಾಖಂಡದಲ್ಲಿ ಕೆಟ್ಟ ಹವಾಮಾನದಿಂದಾಗಿ ಕರ್ನಾಟಕದವರು ಸೇರಿ 9 ಚಾರಣಿಗರು ಸಾವು

ಕರ್ನಾಟಕದ 18 ಚಾರಣಿಗರು ಸೇರಿದಂತೆ 22 ಸದಸ್ಯರ ಚಾರಣಿಗರ ತಂಡದಲ್ಲಿದ್ದ ಒಂಬತ್ತು ಚಾರಣಿಗರು ನಿನ್ನೆ ಉತ್ತರಾಖಂಡದ ಉತ್ತರಕಾಶಿಯ ಸಹಸ್ರ ತಾಲ್ (ಸರೋವರ) ಕ್ಕೆ ತೆರಳುತ್ತಿದ್ದಾಗ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿ ಸಿಕ್ಕಿಬಿದ್ದು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಕರ್ನಾಟಕದ ಐವರು ಇದ್ದಾರೆ ಎಂದು ಹೇಳಲಾಗಿದೆ. ವಾಯು-ನೆಲದ ಜಂಟಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಇದುವರೆಗೆ ಹದಿಮೂರು … Continued

ಬಾಬಾ ರಾಮದೇವ ಕಂಪನಿ ತಯಾರಿಸಿದ 14 ಔಷಧಗಳ ತಯಾರಿಕಾ ಪರವಾನಗಿ ಅಮಾನತು ಮಾಡಿದ ಉತ್ತರಾಖಂಡ ಸರ್ಕಾರ

ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಬಾಬಾ ರಾಮದೇವ ಅವರ ಪತಂಜಲಿಯ ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ಅಮಾನತುಗೊಳಿಸಿದೆ. ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿಯ ದಿವ್ಯ ಫಾರ್ಮಸಿ ತಯಾರಿಸಿದ 14 ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿರುವುದಾಗಿ ಪರವಾನಗಿ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ. ಉತ್ತರಾಖಂಡ ಸರ್ಕಾರವು … Continued

ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು … Continued

ಉತ್ತರಾಖಂಡ : ಅಕ್ರಮ ಮದರಸಾ ತೆರವು ವೇಳೆ ಹಿಂಸಾಚಾರದಲ್ಲಿ 4 ಸಾವು, 250 ಮಂದಿಗೆ ಗಾಯ ; ಕರ್ಫ್ಯೂ ಜಾರಿ, ಶಾಲೆಗಳು ಬಂದ್

ಡೆಹ್ರಾಡೂನ್‌ : ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ. ಹಾಗೂ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ “ಕಾನೂನುಬಾಹಿರವಾಗಿ ನಿರ್ಮಿಸಲಾದ” ಮದರಸಾ ಮತ್ತು ಪಕ್ಕದ ಮಸೀದಿಯನ್ನು ಕೆಡವಿದ ನಂತರ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಿದರು. ಆಸ್ಪತ್ರೆಗೆ … Continued

ದೇಶದಲ್ಲೇ ಮೊದಲು : ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ಧ್ವನಿ ಮತದ ಅಂಗೀಕಾರ

ಡೆಹ್ರಾಡೂನ್: ಮಹತ್ವದ ಕ್ರಮದಲ್ಲಿ ಉತ್ತರಾಖಂಡ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಬುಧವಾರ ಅಂಗೀಕರಿಸಿದೆ. ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ಮಂಗಳವಾರದಂದು, ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರದಲ್ಲಿ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಅಂಗೀಕರಿಸಿದ ಮೊದಲ ರಾಜ್ಯವಾಗಿದೆ. ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು … Continued