ಗಂಗೋತ್ರಿ ಧಾಮಕ್ಕೆ ಹಿಂದೂಯೇತರರಿಗೆ ಪ್ರವೇಶ ಬೇಡ ; ಸಮಿತಿಯ ನಿರ್ಧಾರ

ಉತ್ತರಾಖಂಡದ ಪವಿತ್ರ ಯಾತ್ರಾಸ್ಥಳವಾದ ಗಂಗೋತ್ರಿ ಧಾಮಕ್ಕೆ ಇನ್ನು ಮುಂದೆ ಹಿಂದೂಯೇತರರಿಗೆ ಪ್ರವೇಷ ನಿಷೇಧಿಸಬೇಕು ಎಂದು  ಶ್ರೀ ಗಂಗೋತ್ರಿ ದೇವಾಲಯ ಸಮಿತಿಯು ಭಾನುವಾರ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಂಡಿದೆ. ಈ ನಿರ್ಬಂಧವು ಕೇವಲ ಗಂಗೋತ್ರಿ ಧಾಮಕ್ಕೆ ಮಾತ್ರ ಸೀಮಿತವಾಗಿರದೆ, ಗಂಗಾ ಮಾತೆಯ ಚಳಿಗಾಲದ ಆವಾಸ ಸ್ಥಾನವೆಂದು ಕರೆಯಲ್ಪಡುವ ಮುಖ್ಬಾ ಗ್ರಾಮಕ್ಕೂ ಅನ್ವಯಿಸಲಿದೆ ಎಂದು ಸಮಿತಿ ತಿಳಿಸಿದೆ. … Continued

ಉತ್ತರಾಖಂಡದ ಶಾಲೆಯ ಬಳಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಗ್ರಾಮವೊಂದರ ಶಾಲೆಯ ಸಮೀಪ ಬೃಹತ್‌ ಪ್ರಮಾಣದಲ್ಲಿ ಹೆಚ್ಚಿನ ಸ್ಫೋಟಕ ಸಾಮರ್ಥ್ಯದ ಜಿಲೆಟಿನ್ ಕಡ್ಡಿಗಳು (gelatin sticks) ಪತ್ತೆಯಾಗಿದೆ. ಪೊಲೀಸರು ಸುಲ್ತ್ ಪ್ರದೇಶದ ಪೊದೆಯೊಂದರಲ್ಲಿ 20 ಕೆ.ಜಿ.ಗೂ ಹೆಚ್ಚು ತೂಕದ 161 ಜಿಲೆಟಿನ್ ಕಡ್ಡಿಗಳನ್ನು ಪತ್ತೆ ಮಾಡಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಹರಿಯಾಣದಲ್ಲಿ ಸುಮಾರು … Continued

ತರಗತಿಯಲ್ಲಿ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕ ; ಊಟದ ಡಬ್ಬಿಯಲ್ಲಿ ಪಿಸ್ತೂಲ್‌ ತಂದು ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ…!!

ಡೆಹ್ರಾಡೂನ್: ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಗಂಗನ್‌ದೀಪ್ ಸಿಂಗ್ ಕೊಹ್ಲಿ ಎಂಬ ಶಿಕ್ಷಕರು ಭೌತಶಾಸ್ತ್ರ ಬೋಧಿಸುತ್ತಿದ್ದಾಗ ತಮ್ಮ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದರು. ಬುಧವಾರ, ಅದೇ ವಿದ್ಯಾರ್ಥಿ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಬಂದೂಕನ್ನು ತಂದು ಕೊಹ್ಲಿಯ ಬೆನ್ನಿಗೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುನಾನಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನ … Continued

ವೀಡಿಯೊ..: ಪ್ರವಾಹದಲ್ಲಿ ಕೊಚ್ಚಿ ಹೋದ ಜನರಿದ್ದ ಕಾರು

ಮಂಗಳವಾರ ಉತ್ತರಾಖಂಡದಲ್ಲಿ ಪ್ರಬಲವಾದ ಕ್ಲೌಡ್‌ ಬರ್ಸ್ಟ್‌ನಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಲ್ಲಿ ಜನರು ಸಿಲುಕಿಕೊಂಡಿದ್ದ ಕಾರು ನೀರಿನಲ್ಲಿ ಕೊಚ್ಚಿಹೋಗಿರುವ ವೀಡಿಯೊವೊಂದು ವೈರಲ್‌ ಆಗಿದೆ. ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಬಳಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಆ ಪ್ರದೇಶದಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಕಾರು ನೀರಿನಲ್ಲಿ ತೇಲಿ ಹೋಗುತ್ತಿರುವ ಬಗ್ಗೆ “ಕಾರ್‌ ಪುರಾ ಭರಾ … Continued

ಪ್ರವಾಹದ ಭೀಕರತೆ ವೀಡಿಯೊ..| ಮೇಘಸ್ಫೋಟಕ್ಕೆ ಗಂಗೋತ್ರಿ ಬಳಿ ಮನೆಗಳನ್ನೇ ಆಪೋಶನ ಮಾಡಿದ ಕೆರಳಿದ ನೀರು…! 5 ಸಾವು, ಅನೇಕ ಜನ ಕಾಣೆ

ಮಂಗಳವಾರ ಮಧ್ಯಾಹ್ನ ಉತ್ತರಾಖಂಡದ ಒಂದು ಹಳ್ಳಿಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿ ದಿಢೀರ್ ಪ್ರವಾಹ ಉಂಟಾಗಿ ಮನೆಗಳು ಸೇರಿದಂತೆ ಎಲ್ಲವೂ ನೆಲಸಮವಾಗಿದೆ ಎಂದು ವರದಿಯಾಗಿದೆ. ಪ್ರವಾಹದ ಭಯಾನಕತೆಯನ್ನು ಸೆರೆಹಿಡಿದ ಆತಂಕಕಾರಿ ವೀಡಿಯೊ ಹೊರಹೊಮ್ಮಿದೆ. ದಿಢೀರ್ ಪ್ರವಾಹವು ಜನರು ಸುರಕ್ಷಿತ ಸ್ಥಳಕ್ಕೆ ಓಡಿಹೋಗುತ್ತಿರುವ   ದೃಶ್ಯಗಳು ತೋರಿಸಿವೆ, ರಸ್ತೆಯಲ್ಲಿದ್ದ ಮನೆಗಳು ಸೇರಿದಂತೆ ಎಲ್ಲವನ್ನೂ ಕೊಚ್ಚಿ ಹೋಗಿವೆ. ಉತ್ತರಾಖಂಡದ ಗಂಗೋತ್ರಿಗೆ ಹೋಗುವ … Continued

ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡಲು ತನ್ನ ಪ್ರಿಯಕರ-ಸಹಾಯಕನಿಗೆ ಕುಮ್ಮಕ್ಕು ನೀಡಿದ ಬಿಜೆಪಿ ಮಾಜಿ ನಾಯಕಿ..! ಮೂವರ ಬಂಧನ

ಹರಿದ್ವಾರ: ಉತ್ತರಾಖಂಡದ ಮಾಜಿ ಬಿಜೆಪಿ ನಾಯಕಿಯ ಗೆಳೆಯ ಮತ್ತು ಆತನ ಸಹಾಯಕ ಅವಳ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಇದಕ್ಕೆ ಮಹಿಳೆಯೇ ಅವಕಾಶ ನೀಡಿದ್ದಾಳೆ ಎಂಬ ಆರೋಪ ಹೊರಿಸಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಜನವರಿಯಿಂದ ಮಾರ್ಚ್ ವರೆಗೆ 13 ವರ್ಷದ ಬಾಲಕಿಯ ಮೇಲೆ ಹಲವು … Continued

ರೆಸಾರ್ಟ್‌ ರಿಸೆಪ್ಶನಿಸ್ಟ್‌ ಅಂಕಿತಾ ಭಂಡಾರಿ ಕೊಲೆ ಪ್ರಕರಣ : ಬಿಜೆಪಿಯ ನಾಯಕನ ಪುತ್ರ, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ

ಡೆಹ್ರಾಡೂನ್: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಉತ್ತರಾಖಂಡದ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋಟ್ವಾರ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಪುಲ್ಕಿತ್ ಆರ್ಯ, ಸೌರಭ ಭಾಸ್ಕರ ಮತ್ತು ಅಂಕಿತ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವುದು), 120 ಬಿ (ಕ್ರಿಮಿನಲ್ … Continued

ಬೆಚ್ಚಿಬೀಳಿಸುವ ವೀಡಿಯೊ…| ಮಲಗಿದ್ದ ವ್ಯಕ್ತಿಯ ಮೈಮೇಲೆ ಹರಿದಹೋದ ಬೃಹತ್‌ ಕಾಳಿಂಗ ಸರ್ಪ; ಆದ್ರೂ ಆತ ಶಾಂತವಾಗಿ ಮಲಗಿದ್ದ…!

ಡೆಹ್ರಡೂನ್‍: ಹಾವೆಂದರೆ ಸಾಕು ಎಲ್ಲರೂ ಬೆಚ್ಚಿಬೀಳುತ್ತಾರೆ. ಅಂಥದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ತನ್ನ ಮೇಲೆ ಬೃಹತ್‌ ಕಾಳಿಂಗ ಸರ್ಪ ಹರಿದು ಹೋದರೂ ತಲೆಕೆಡಿಸಿಕೊಳ್ಳದೆ ಶಾಂತವಾಗಿ ಮಲಗಿರುವ ವೀಡಿಯೊವೊಂದು ವೈರಲ್‌ ಆಗಿದೆ. ಹಾಸಿಗೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಎಚ್ಚರದಲ್ಲಿದ್ದಾಗಲೇ ಆತನ ಮೈಮೇಲೆ ಕಾಳಿಂಗ ಸರ್ಪ (King Cobra) ತೆವಳಿಕೊಂಡು ಹೋಗಿದೆ. ಮೈ ಮೇಲೆ ಹಾವು ಹರಿಯುತ್ತಿರುವುದು ಆತನಿಗೆ ಗೊತ್ತಿದ್ದರೂ … Continued

ಭಾರಿ ಹಿಮಪಾತ: ಬಿಆರ್‌ಒ 47 ಕಾರ್ಮಿಕರು ಸಿಲುಕಿರುವ ಶಂಕೆ

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ)ಯ ಕನಿಷ್ಠ 47 ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮಾನಾದ ಗಡಿ ಪ್ರದೇಶದ … Continued

ಪರಸ್ಪರರ ಕಚೇರಿ ಮೇಲೆ ಗುಂಡಿನ ದಾಳಿ, ಕಲ್ಲು ಎಸೆತ : ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ನಾಯಕ-ಶಾಸಕರ ನಡುವಿನ ರಾಜಕೀಯ ವೈಷಮ್ಯ; ಬಂಧನ

ಉತ್ತರಾಖಂಡದ ರೂರ್ಕಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ ಸಿಂಗ್ ಚಾಂಪಿಯನ್ ಮತ್ತು ಪಕ್ಷೇತರ ಶಾಸಕ ಉಮೇಶಕುಮಾರ ನಡುವಿನ ವೈಷಮ್ಯ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರರ ಕಚೇರಿಗೆ ಗುಂಡು ಹಾರಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋದಲ್ಲಿ ಚಾಂಪಿಯನ್ ತನ್ನ ಬೆಂಬಲಿಗರೊಂದಿಗೆ ಉಮೇಶಕುಮಾರ ಅವರ ಕಚೇರಿಯ ಮೇಲೆ ಹಲವಾರು ಗುಂಡುಗಳನ್ನು ಹಾರಿಸುವುದನ್ನು ತೋರಿಸುತ್ತದೆ. … Continued