ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ಗೋಕರ್ಣ : ಸಮುದ್ರ ಪಾಲಾದ ಇಬ್ಬರು ಪ್ರವಾಸಿಗರು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಐವರು ಸ್ನೇಹಿತರ ಪೈಕಿ ಇಬ್ಬರು ಯುವಕರು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಲಬುರಗಿ ಮೂಲದ ಆಕಾಶ ಮತ್ತು ಅಭಿಷೇಕ ಎಂಬವರು ಮೃತರು ಎಂದು ಗುರುತಿಸಲಾಗಿದೆ. ಹತ್ತಿರದ ರೆಸಾರ್ಟಿಲ್ಲಿ ತಂಗಿದ್ದ ಐದು ಜನ ಪ್ರವಾಸಿಗರ ಪೈಕಿ ಮೂವರು ಭಾನುವಾರ ಸಂಜೆಯ ಸಮಯದಲ್ಲಿ ಈಜಲು … Continued

ದಾಂಡೇಲಿ: ನದಿ ಪಕ್ಕ ನಡೆದುಕೊಂಡು ಹೋಗುತ್ತಿದ್ದವನ ಎಳೆದೊಯ್ದ ಮೊಸಳೆ

ಕಾರವಾರ : ನದಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮೊಸಳೆ ನೀರಿಗೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ವಿನಾಯಕ ನಗರದ ಅಲೈಡ್ ಪ್ರದೇಶದ ಹತ್ತಿರ ಶನಿವಾರ ಸಂಜೆ ನಡೆದಿದೆ. ಮೊಸಳೆ ಹೊತ್ತೊಯ್ದ ವ್ಯಕ್ತಿಯನ್ನು ಸುರೇಶ್ ವಸಂತ ತೇಲಿ (44) ಎಂದು ಗುರುತಿಸಲಾಗಿದೆ. ದೋಣಿ ಮತ್ತು ಡ್ರೋನ್ ಕ್ಯಾಮೆರಾ ಬಳಸಿ ಅವರ ಶೋಧ ಕಾರ್ಯ … Continued

ಕುಮಟಾ: ಬೀಚಿನಲ್ಲಿ ಪದ್ಮಾಸನದಲ್ಲಿ ಕುಳಿತ ಶಿರಸಿ ವ್ಯಕ್ತಿ ಸಮುದ್ರ ಪಾಲು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳಿಯ ಅರಬ್ಬಿ ಸಮುದ್ರ ತೀರದಲ್ಲಿ ಶಿರಸಿಯ ವ್ಯಕ್ತಿಯೊಬ್ಬರು ಸಮುದ್ರ ಪಾಲಾಗಿದ್ದಾರೆ. ಶಿರಸಿಯ ವಕೀಲ ವೃತ್ತಿಯ  ಸುಬ್ರಹ್ಮಣ್ಯ ಗೌಡ (39) ಎಂಬವರು ವನ್ನಳ್ಳಿಯ ಸಮುದ್ರ ತೀರದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಬಲವಾದ ತೆರೆಯೊಂದು ಬಡಿದು ಸಮುದ್ರ ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪ್ರವಾಸಕ್ಕಾಗಿ ಕುಮಟಾದ ಬೀಚಿಗೆ ಬಂದಿದ್ದರು. ಇವರು ತಪಸ್ಸಿಗೆ … Continued

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉತ್ತರ ಕನ್ನಡ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ

ಶಿರಸಿ/ಕಾರವಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರಿಗೆ ಹಾಗೂ ಕಾರವಾರ ಜಿಲ್ಲೆಯ ಓರ್ವ ವಿದ್ಯಾರ್ಥಿನಿ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಸಿದ್ದಾಪುರ ತಾಲ್ಲೂಕಿನ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಕಾನಸೂರಿನ ಕಾಳಿಕಾ ಭವಾನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರೇಷ್ಮಾ ಗಣೇಶ … Continued