ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ…ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು…!

ಮೀರತ್‌: ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯ ಹಸ್ತಿನಾಪುರದಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣವೊಂದರಲ್ಲಿ, ಪತಿಯನ್ನು ವಿಷಕಾರಿ ಹಾವಿನಿಂದ ಕಚ್ಚಿಸಿ ಕೊಲೆ ಮಾಡಿಸಿದ ಆರೋಪದ ಮೇಲೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯ ಸಾವನ್ನು ಹಾವು ಕಚ್ಚಿದ ಘಟನೆ ಎಂಬಂತೆ ಬಿಂಬಿಸಿ, ₹20 ಲಕ್ಷ ವಿಮೆ ಹಣ ಪಡೆದುಕೊಳ್ಳುವುದು ಹಾಗೂ ತಮ್ಮ ಪ್ರೇಮ … Continued

ಮಹಿಳೆ ಮದುವೆಯಾಗಲು ಅಡ್ಡಿಯಾಗಿದ್ದ ಆಕೆಯ 1.5 ವರ್ಷದ ಮಗುವನ್ನು ನೆಲಕ್ಕೆ ಬಡಿದು ಕೊಂದ ಆರೋಪಿಗೆ ಮರಣದಂಡನೆ ಶಿಕ್ಷೆ

ಫಿರೋಜಾಬಾದ್ : ಮಹಿಳೆಯನ್ನು ಮದುವೆಯಾಗುವ ಉದ್ದೇಶದಿಂದ ಆಕೆಯ ಒಂದೂವರೆ ವರ್ಷದ ಮಗನನ್ನು ಪದೇಪದೇ ನೆಲಕ್ಕೆ ಅಪ್ಪಳಿಸಿ ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಆರೋಪಿಗೆ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಜಿಲ್ಲಾ ಸರ್ಕಾರಿ ಅಭಿಯೋಜಕ ರಾಜೀವ ಉಪಾಧ್ಯಾಯ ನೀಡಿದ ಮಾಹಿತಿಯ ಪ್ರಕಾರ, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಡಾ. ಬಬ್ಬು ಸಾರಂಗ್ ಅವರು ಗುರುವಾರ ಜಿತೇಂದ್ರ ಪಾಠಕ್ … Continued

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

ಫಿರೋಜಾಬಾದ್ (ಉತ್ತರ ಪ್ರದೇಶ): ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್ ಅವರು ಪ್ರಯಾಣಿಸುತ್ತಿದ್ದ ದೆಹಲಿ ಮುಖಿ ‘ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್’ ರೈಲಿನ ಮೇಲೆ ಗುರುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಚಲಿಸುತ್ತಿದ್ದ ರೈಲಿನ ಕೋಚ್ ಒಂದರ ಕಿಟಕಿ ಗಾಜು ಜಖಂಗೊಂಡಿದೆ. ಆದರೆ, ಘಟನೆಯಲ್ಲಿ ಮೋಹನ ಭಾಗವತ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಉತ್ತರ … Continued

ಅತ್ಯಾಚಾರ ಆರೋಪಿಗೆ ಭವ್ಯ ಸ್ವಾಗತ: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ರಸ್ತೆಯಲ್ಲಿ ಮೆರವಣಿಗೆ

ಘಾಜಿಯಾಬಾದ್ : ಕಾನೂನು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರದ ಆರೋಪದಡಿ ಜೈಲು ಪಾಲಾಗಿದ್ದ ಸುಶೀಲ ಪ್ರಜಾಪತಿ ಎಂಬಾತ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಂತೆ ಆತನಿಗೆ ಹೂವಿನ ಹಾರ ಹಾಕಿ, ವೀರನಂತೆ ಭವ್ಯ ಸ್ವಾಗತ ಕೋರಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ … Continued

ರಸ್ತೆಗಳಲ್ಲಿ ನಮಾಜ್‌ ಮಾಡ್ಬೇಡಿ, ಜಾಗದ ಕೊರತೆಯಿದ್ರೆ ಪಾಳಿಯಲ್ಲಿ ನಮಾಜ್‌ ಮಾಡಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ರಸ್ತೆಗಳ ಮೇಲೆ ನಮಾಜ್ ಮಾಡುವ ಪದ್ಧತಿಯ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸಂಚಾರವನ್ನು ನಿರ್ಬಂಧಿಸುವುದಕ್ಕೆ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಆಡಳಿತವು ಮೊದಲಿಗೆ ಮನವೊಲಿಕೆಯ ಮೂಲಕ ನಿಯಮ … Continued

ಸುವೇಂದು ಅಧಿಕಾರಿ ಪಿಎ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ನನ್ನು ಬಂಧಿಸಿದ ಸಿಬಿಐ

ಮುಜಾಫರ್‌ನಗರ/ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮುಖ್ಯ ಶೂಟರನನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದೊಂದಿಗೆ ಸಿಬಿಐ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ … Continued

ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದಾದ್ಯಂತ ಬುಧವಾರ ಸಂಭವಿಸಿದ ಭೀಕರ ಗುಡುಗು ಸಹಿತ ಮಳೆ ಮತ್ತು ಚಂಡಮಾರುತಕ್ಕೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾಜ್ಯದ ಹಲವೆಡೆ ಮನೆಗಳು ಧರಾಶಾಯಿಯಾಗಿದ್ದು, ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ ಪ್ರಯಾಗರಾಜ್ ಜಿಲ್ಲೆ ಅತಿ ಹೆಚ್ಚು … Continued

ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಭೀಕರ ಗಾಳಿ ರಭಸಕ್ಕೆ ತಗಡಿನ ಶೀಟ್‌ ಜೊತೆ 50 ಅಡಿ ಎತ್ತರಕ್ಕೆ ಹಾರಿಹೋಗಿ ಬಿದ್ದ ವ್ಯಕ್ತಿ

ಬರೇಲಿ/ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಬುಧವಾರ ಅಪ್ಪಳಿಸಿದ ಪ್ರಬಲ ಚಂಡಮಾರುತ ಮತ್ತು ಮಳೆಗೆ ರಾಜ್ಯವೇ ತತ್ತರಿಸಿ ಹೋಗಿದೆ. ಬರೇಲಿ ಜಿಲ್ಲೆಯ ಬಮಿಯಾನಾ ಗ್ರಾಮದಲ್ಲಿ ಸಂಭವಿಸಿದ ಒಂದು ಘಟನೆ ಚಂಡಮಾರುತದ ತೀವ್ರತೆಗೆ ಸಾಕ್ಷಿಯಾಗಿದೆ. ಬಲವಾದ ಗಾಳಿಯ ವೇಗಕ್ಕೆ ವ್ಯಕ್ತಿಯೊಬ್ಬ ತಗಡಿನ ಶೀಟ್‌ನೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಹಾರಿ ಹೋಗಿರುವ ಆಘಾತಕಾರಿ ದೃಶ್ಯಗಳು ಮುನ್ನೆಲೆಗೆ ಬಂದಿವೆ. … Continued

ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued

ಮಥುರಾ: ಯಮುನಾ ನದಿಯಲ್ಲಿ ಪ್ರವಾಸಿಗರ ದೋಣಿ ಮುಳುಗಿ 10 ಸಾವು

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಭೀಕರ ದೋಣಿ ದುರಂತವೊಂದು ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಯಮುನಾ ನದಿಯಲ್ಲಿ ಪ್ರವಾಸಿಗರಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಹತ್ತು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಪಂಜಾಬ್‌ ಲುಧಿಯಾನ ಮೂಲದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಏಳು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಪಂಜಾಬ್‌ನಿಂದ ವೃಂದಾವನದ ದರ್ಶನಕ್ಕೆಂದು ಬಂದಿದ್ದ ಸುಮಾರು 30 ಪ್ರವಾಸಿಗರ … Continued