ಮೈ ಜುಂ ಎನ್ನುವ ವೀಡಿಯೊ | ರೈತನಿಗೆ ದಾರಿಯಲ್ಲಿ ಎದುರಾದ ದೈತ್ಯ ಹುಲಿ; ಮುಂದಾಗಿದ್ದು….?

ಉತ್ತರ ಪ್ರದೇಶದ ಪಿಲಿಭಿತ್‌ನ ಹೊಲವೊಂದರಲ್ಲಿ ರೈತನೊಬ್ಬನಿಗೆ ಹುಲಿ ಎದುರಾಗಿದ್ದು, ಆತ ಕ್ಷಣಕಾಲ ಸ್ತಂಭಿಭೂತನಾಗಿದ್ದಾನೆ. ಈ ವಿಸ್ಮಯಕಾರಿಯಾಗಿ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನು ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊ ಕ್ಲಿಪ್‌ನಲ್ಲಿ ರೈತ ತನ್ನ ಬೈಕ್‌ನಲ್ಲಿ ಬರುತ್ತಿದ್ದಾಗ ಹುಲಿ ಎದುರಾಗಿರುವುದನ್ನು ನೋಡಬಹುದು. ರೈತ ಬೈಕ್‌ನಲ್ಲಿ ಕುಳಿತಿದ್ದಾರೆಹಾಗೂ ಇನ್ನೊಬ್ಬ ವ್ಯಕ್ತಿ ಅವರ ಪಕ್ಕದಲ್ಲಿ ನಿಂತಿದ್ದಾರೆ. … Continued

ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಕಾಂಗ್ರೆಸ್‌ ಸಂಸದರನ್ನು ಬಂಧಿಸಿದ ಪೊಲೀಸರು…

ಲಕ್ನೋ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ. ಉತ್ತರ ಪ್ರದೇಶದ ಸೀತಾಪುರದ ಲೋಕಸಭಾ ಸಂಸದ ರಾಥೋಡ್ ಅವರನ್ನು ಅವರ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಬಂಧಿಸಲಾಯಿತು. ಸಂಸದ ರಾಥೋಡ್ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದು, ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಕೊತ್ವಾಲಿ ನಗರ ಪೊಲೀಸರು ರಾಥೋಡ್ ಅವರನ್ನು … Continued

ಮಹಾಕುಂಭ ಕಾಲ್ತುಳಿತದಲ್ಲಿ 30 ಸಾವು, 60 ಮಂದಿಗೆ ಗಾಯ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟಿದ್ದಾರೆ ಎಂದು ಮಹಾಕುಂಭದ ಉಪ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಅವರು, 25 ಶವಗಳನ್ನು ಗುರುತಿಸಲಾಗಿದೆ, ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು … Continued

ಮಹಾಕುಂಭ ಮೇಳ ; ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆ ಎಂಬವರು ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ ಇದ್ದ ಬಾಲಕಿಯರಾದ ಮೇಘಾ, ಜ್ಯೋತಿ ಅವರಿಗೂ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ … Continued

ವೀಡಿಯೊ…| ಮದುವೆಯ ಮೆರವಣಿಗೆಗೆ ತಂದಿದ್ದ ಕುದುರೆಯ ಒದೆತಕ್ಕೆ ಸ್ಥಳದಲ್ಲೇ ಮೃತಪಟ್ಟ ಮಗು…!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಮದುವೆಯ ಸಂಭ್ರಮಾಚರಣೆ ವೇಳೆ ಅಪ್ರಾಪ್ತ ಮಗುವೊಂದು ಕುದುರೆ ಒದೆತದಿಂದ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಟವಾಡುತ್ತ ಕುದುರೆಯ ಹಿಂಬದಿಗೆ ಬಂದ ಮಗುವಿಗೆ ಕುದುರೆ ಬಲವಾಗಿ ಒದ್ದಿದೆ, ಒದ್ದ ರಭಸಕ್ಕೆ ಸ್ಥಳದಲ್ಲೇ ಮಗುವಿನ ಪ್ರಾಣ … Continued

ಮಹಾ ಕುಂಭದಲ್ಲಿ ಬೆಂಕಿ ಅನಾಹುತ : ಸುಮಾರು 100 ಟೆಂಟ್‌ಗಳು ಸುಟ್ಟು ಕರಕಲು

ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಮಹಾಕುಂಭ ಸ್ಥಳದಲ್ಲಿ ಟೆಂಟ್‌ನಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 100ಕ್ಕೂ ಹೆಚ್ಚು ಡೇರೆಗಳಿಗೆ ಬೆಂಕಿ ವ್ಯಾಪಿಸಿ ಸುಟ್ಟು ಕರಕಲಾಗಿದೆ ಎಂದು ವರದಿ ತಿಳಿಸಿದೆ. ಅದೃಷ್ವಶಾತ್‌ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೃಹತ್ ಮಹಾಕುಂಭದಲ್ಲಿ ಸುರಕ್ಷತಾ ವ್ಯವಸ್ಥೆಯ … Continued

‘ಭಿಕ್ಷುಕನ ಜೊತೆ ಓಡಿಹೋದ ಮಹಿಳೆ’ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್ ; ಆಕೆ ಭಿಕ್ಷುಕನೊಂದಿಗೆ ಓಡಿಹೋಗಿಲ್ಲ : ಮಹಿಳೆ ಮನೆ ಬಿಟ್ಟ ಕಾರಣ….

ಹರ್ದೋಯಿ : ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬಳು ಭಿಕ್ಷುಕನ ಜೊತೆ ಓಡಿಹೋಗಿದ್ದಾಳೆ ಎಂಬ ವ್ಯಾಪಕವಾಗಿ ಪ್ರಸಾರವಾದ ಸುದ್ದಿಗೆ ಈಗ ಟ್ವಿಸ್ಟ್ ಹೊರಹೊಮ್ಮಿದೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಭಿಕ್ಷುಕನ ಜೊತೆ ಓಡಿಹೋಗಿದ್ದಾಳೆ ಎಂದು ಪತಿ ಆರೋಪಿಸಿರುವ ಮಹಿಳೆ, ತನ್ನ ಪತಿ ಪದೇ ಪದೇ ನಿಂದಿಸುತ್ತಿದ್ದುದರಿಂದ ಮತ್ತು ಥಳಿಸುತ್ತಿದ್ದುದರಿಂದ ಸಂಬಂಧಿಕರ ಮನೆಗೆ ತೆರಳಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ತಾನು … Continued

ತಂದೆ ನಮ್ಮ ತಾಯಿಗೆ ಹೊಡೆಯುತ್ತಾರೆ…ನಮಗೆ ಸಹಾಯ ಮಾಡಿ..: ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ 3 ಮತ್ತು 5 ವರ್ಷದ ಪುಟಾಣಿಗಳು…!

ನವದೆಹಲಿ: ಮೂರು ವರ್ಷದ ಬಾಲಕ ಮತ್ತು ಆತನ 5 ವರ್ಷದ ಸಹೋದರ ಪೊಲೀಸರಿಗೆ ದೂರು ನೀಡಲು ಠಾಣೆಗೆ ಬಂದಿದ್ದು, ದುಃಖದ ನಡುವೆ ತಮ್ಮ ತಾಯಿಯನ್ನು ಥಳಿಸುತ್ತಾರೆ ಎಂದು ತಂದೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಪಿಲೋಖಾರಿ ಔಟ್‌ಪೋಸ್ಟ್ ಇನ್‌ಚಾರ್ಜ್ ರಾಹುಲ್ ಯಾದವ್ ಮಾತನಾಡಿ, ಪೊಲೀಸರು ಮಕ್ಕಳಿಗೆ ಟಾಫಿ … Continued

ಒಬ್ಬನೇ ಹುಡುಗನಿಗಾಗಿ ನಡುರಸ್ತೆಯಲ್ಲೇ ಬಡಿದಾಡಿಕೊಂಡ ಇಬ್ಬರು ಹುಡುಗಿಯರು…!

ಲಕ್ನೋ: ತಮ್ಮ ಶಾಲೆಯಲ್ಲಿ ಓದುತ್ತಿರುವ ಒಂದೇ ಹುಡುಗನನ್ನು ತಾವಿಬ್ಬರೂ ಇಷ್ಟಪಡುತ್ತಿದ್ದೇವೆ ಎಂದು ತಿಳಿದ ನಂತರ ಇಬ್ಬರು ಹದಿಹರೆಯದ ಹುಡುಗಿಯರು ಜನನಿಬಿಡ ರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಿಂಘ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೀನಗರ್ ಸರಾಯ್ ಟೌನ್‌ನಲ್ಲಿ ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಈ … Continued

ವೀಡಿಯೊ…| ಆಘಾತಕಾರಿ ; ಬೊಬ್ಬೆ ಹೊಡೆದ್ರೂ ಕೇಳಿಸಿಕೊಳ್ಳದೆ ಟ್ರಕ್‌ ಕೆಳಗೆ ಸಿಲುಕಿಕೊಂಡಿದ್ದ ಇಬ್ಬರನ್ನು ದೂರದ ವರೆಗೆ ಎಳೆದೊಯ್ದ ಚಾಲಕ…!

ಆಗ್ರಾದಲ್ಲಿ ಟ್ರಕ್ ಚಾಲಕನೊಬ್ಬ ತನ್ನ ವಾಹನದ ಕೆಳಗೆ ಸಿಲುಕಿದ್ದ ಇಬ್ಬರನ್ನು ಸುಮಾರು 300 ಮೀಟರ್ ವರೆಗೆ ಎಳೆದೊಯ್ದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೆಲ ಸ್ಥಳೀಯರು ಟ್ರಕ್‌ ಅನ್ನು ಅಡ್ಡಹಾಕಿ ಚಾಲಕ ಬಲವಂತವಾಗಿ ಟ್ರಕ್ ನಿಲ್ಲಿಸುವಂತೆ ಮಾಡಿದ ನಂತರ ವಾಹನದ ಕೆಳಗಿದ್ದವರನ್ನು ಹೊರತೆಗೆಯಲಾಗಿದೆ. ಪೊಲೀಸರು ಚಾಲಕನನ್ನು ಬಂಧಿಸಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಆಗ್ರಾದ ನುನ್ಹೈ ನಿವಾಸಿಗಳಾಗಿರುವ ಇಬ್ಬರು … Continued