ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ

ನವದೆಹಲಿ : ವಂದೇ ಮಾತರಂಗೆ ಸಂಬಂಧಿಸಿದಂತೆ 1937ರಲ್ಲಿ ಅಂದಿನ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಅಂಗೀಕರಿಸಿದ್ದ ನಿರ್ಣಯಕ್ಕೆ ಬದ್ಧವಾಗಿರಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಬುಧವಾರ ತೀರ್ಮಾನಿಸಿದೆ. ಇದರಂತೆ, ಇನ್ನು ಮುಂದೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ನಾಯಕರು … Continued

ಮಂಗಳೂರು : ವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರು

ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದ ವಿವಾದ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಂದೇ ಮಾತರಂಗೆ (Vande Mataram Row) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಈ ದೂರು ನೀಡಲಾಗಿದೆ. ರಾಷ್ಟ್ರೀಯ … Continued

‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಜೈಲು: ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನವದೆಹಲಿ : ‘ವಂದೇ ಮಾತರಂ’ಗೆ ಅವಮಾನಿಸುವ ಕೃತ್ಯಕ್ಕೆ ಶಿಕ್ಷೆ ವಿಧಿಸಲು ಅವಕಾಶ ನೀಡುವ ಮಸೂದೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿತು. ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆಯ ಮೂಲಕ 1971ರ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ … Continued

ʼವಂದೇ ಮಾತರಂ’ಗೆ ಅವಮಾನಿಸಿದರೆ ಜೈಲು ಶಿಕ್ಷೆ: ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಸೋಮವಾರದ ಕಲಾಪದಲ್ಲಿ ‘ಪ್ರಿವೆನ್ಷನ್ ಆಫ್ ಇನ್ಸಲ್ಟ್ಸ್ ಟು ನ್ಯಾಷನಲ್ ಹಾನರ್ (ತಿದ್ದುಪಡಿ) ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮಸೂದೆಯ ಕಾನೂನು ಮತ್ತು ನ್ಯಾಯಾಂಗ ರಕ್ಷಣೆಗಳನ್ನು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ನೀಡುವ ಉದ್ದೇಶ ಹೊಂದಿದೆ. ಕೇಂದ್ರ … Continued

ವಿಡಿಯೋ | ಕೇಂದ್ರದ ಮಾರ್ಗಸೂಚಿಗೆ ವಿಜಯ ಸಹಮತ : ಸಿಎಂ ಪ್ರಮಾಣವಚನ ಸಮಾರಂಭದಲ್ಲಿ ಮೊಳಗಿದ ಸಂಪೂರ್ಣ ‘ವಂದೇ ಮಾತರಂ’

ಚೆನ್ನೈ : ಕೇಂದ್ರ ಸರ್ಕಾರವು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಆರೂ ಚರಣಗಳನ್ನು ಹಾಡಬೇಕು ಎಂದು ಹೊರಡಿಸಿದ್ದ ಹೊಸ ಮಾರ್ಗಸೂಚಿಯ ಬೆನ್ನಲ್ಲೇ, ತಮಿಳುನಾಡಿನಲ್ಲಿ ಭಾನುವಾರ ನಡೆದ ವಿಜಯ ಅವರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಈ ನಿಯಮವನ್ನು ಪಾಲಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ, ರಾಷ್ಟ್ರಗೀತೆಗಿಂತ ಮೊದಲು ಸಂಪೂರ್ಣ ಆರು ಚರಣಗಳ ವಂದೇ ಮಾತರಂ ಗೀತೆಯನ್ನು … Continued

ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಹಾಡುವುದು ಕಡ್ಡಾಯ : ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ‘ವಂದೇ ಮಾತರಂ’ ಅನ್ನು ಇನ್ಮುಂದೆ ಅದರ ಮೂಲ 6 ಚರಣಗಳೊಂದಿಗೆ ಹಾಡಬೇಕು ಎಂದು ಗೃಹ ಸಚಿವಾಲಯವು ತಿಳಿಸಿದೆ. ರಾಷ್ಟ್ರೀಯ ಗೌರವ ಮತ್ತು … Continued

ನ.7ರಂದು ದೇಶದೆಲ್ಲೆಡೆ ʼವಂದೇ ಮಾತರಂʼ ಗೀತೆಯ ಸಾಮೂಹಿಕ ಗಾಯನ

ಬೆಂಗಳೂರು : ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ (Vande Mataram Song) ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ ಅವಿನಾಶ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ವೀಡಿಯೊ..| ‘ವಂದೇ ಮಾತರಂ’ ಸಮೂಹ ಗಾಯನದ ಮೂಲಕ ವಿಯೆನ್ನಾದಲ್ಲಿ ಪ್ರಧಾನಿ ಮೋದಿಗೆ ವಿಶೇಷ ಸ್ವಾಗತ ನೀಡಿದ ಆಸ್ಟ್ರಿಯಾ

ವಿಯೆನ್ನಾ: ಅತ್ಯಂತ ಯಶಸ್ವಿ ರಷ್ಯಾ ಭೇಟಿ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಯುರೋಪ್‌ನ ಆಸ್ಟ್ರಿಯಾ ದೇಶಕ್ಕೆ ಮಂಗಳವಾರದಿಂದ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ವಿಯೆನ್ನಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಸ್ಟ್ರಿಯಾದ ಕಲಾವಿದರು ವಿಶೇಷವಾದ ‘ವಂದೇ ಮಾತರಂ’ ವಂದೇ ಮಾತರಂ ಸಮೂಹ ಗಾಯನದ ಮೂಲಕ ಸ್ವಾಗತಿಸಿದ್ದು ಹೆಚ್ಚು ವಿಶೇಷವಾಗಿದೆ. ವಿಯೆನ್ನಾದ ರಿಟ್ಜ್-ಕಾರ್ಲ್ಟನ್ ಹೋಟೆಲ್‌ಗೆ … Continued