ಸಿಎಂ ಬೊಮ್ಮಾಯಿ ಸಂಧಾನ ಯಶಸ್ವಿ: ನಾಳೆ ಕರ್ನಾಟಕ ಬಂದ್ ಇಲ್ಲ
ಬೆಂಗಳೂರು: ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ಕರೆಕೊಟ್ಟಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಈಗ ಬಂದ್ ಕರೆಯನ್ನು ಹಿಂಪಡೆದಿದ್ದಾರೆ. ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡುವಂತೆ ಒತ್ತಾಯಿಸಿ ನಾಳೆ, ಡಿಸೆಂಬರ್ 31ರಂದು ಅವರು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದರು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮೇರೆಗೆ ವಾಟಾಳ್ ನಾಗರಾಜ್ ಬಂದ್ ವಾಪಸ್ ಪಡೆದುಕೊಂಡಿದ್ದಾರೆ. … Continued