ವೀಡಿಯೊ…| “ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು”: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

ನವದೆಹಲಿ: ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯಲ್ಲಿ ಪರಮಾಣು ಸಿಡಿತಲೆ ಇರಬಹುದೇ ಎಂದು ನಿರ್ಧರಿಸಲು ತಮ್ಮ ದೇಶದ ಸೇನೆಗೆ ಕೇವಲ 30 ರಿಂದ 45 ಸೆಕೆಂಡುಗಳ ಸಮಯ ಮಾತ್ರ ಇತ್ತು ಎಂದು ಪಾಕಿಸ್ತಾನದ ಉನ್ನತ ರಾಜಕಾರಣಿಯೊಬ್ಬರು ಒಪ್ಪಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ ಹೊಂದಿರುವ ಭಯೋತ್ಪಾದಕರು … Continued

ವೀಡಿಯೊ…| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕಾರವಾರ (Karwar) ತಾಲೂಕಿನ ಕದ್ರಾ ಬಳಿಯ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಬಾಳೆಮನಿ, ಸುಳಗೇರಿ ಮಾರ್ಗವಾಗಿ ಕೂಡಸಳ್ಳಿ ಅಣೆಕಟ್ಟಿಗೆ ಹಾದುಹೋಗುವ ರಸ್ತೆಯ ಮೇಲೆಯೇ ಭಾರಿ ಪ್ರಮಾನದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ … Continued

ವೀಡಿಯೊ..| ಭಾಷಣ ಮಾಡುತ್ತಿದ್ದಾಗ ಪೋಡಿಯಂಗೆ ಅಪ್ಪಳಿಸಿದ ಡ್ರೋನ್ ; ಸ್ವಲ್ಪದರಲ್ಲೇ ಪಾರಾದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

ಪಾಟ್ನಾ : ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ರ್ಯಾಲಿಯ ಸಂದರ್ಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವೇದಿಕೆಯ ಮೇಲೆ ಡ್ರೋನ್ ಅಪ್ಪಳಿಸಿದ ಪರಿಣಾಮ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ‘ವಕ್ಫ್ ಬಚಾವೋ, ಸಂವಿಧಾನ್ ಬಚಾವೋ ಸಮ್ಮೇಳನ’ (ವಕ್ಫ್ ಉಳಿಸಿ, ಸಂವಿಧಾನವನ್ನು ಉಳಿಸಿ) ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. … Continued

ಕ್ರಿಕೆಟ್‌ ಪಂದ್ಯ | ಸಿಕ್ಸರ್‌ ಹೊಡೆದ ತಕ್ಷಣ ಪಿಚ್‌ ಮೇಲೆ ಕುಸಿದುಬಿದ್ದು ಬ್ಯಾಟರ್‌ ಸಾವು : ದೃಶ್ಯ ವೀಡಿಯೊದಲ್ಲಿ ಸೆರೆ

ಕ್ರಿಕೆಟ್ ಪಂದ್ಯವೊಂದರಲ್ಲಿ ಸಿಕ್ಸರ್ ಹೊಡೆದ ತಕ್ಷಣ ಬ್ಯಾಟ್ಸ್‌ಮನ್ ಸಾವಿಗೀಡಾದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪಂಜಾಬಿನ ಫಿರೋಜ್‌ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಬ್ಯಾಟರ್‌ ಸಿಕ್ಸರ್‌ ಹೊಡೆದ ನಂತರ ಇದ್ದಕ್ಕಿದ್ದಂತೆ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಫಿರೋಜ್‌ಪುರದ ಡಿಎವಿ (DAV) ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು … Continued

ವೀಡಿಯೊ | 16 ಸೂರ್ಯಾಸ್ತಗಳು, 16 ಸೂರ್ಯೋದಯಗಳು..: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ-ವೀಕ್ಷಿಸಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಸಿಯಮ್ -4 (ಆಕ್ಸ್ -4) ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಜೊತೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ … Continued

ವೀಡಿಯೊ | ಅಹಮದಾಬಾದ್ ವಿಮಾನ ದುರಂತದ ಕೆಲದಿನಗಳ ನಂತರ ಕಚೇರಿಯಲ್ಲಿ ಪಾರ್ಟಿ ; ಏರ್ ಇಂಡಿಯಾ ವೆಂಚರಿನ 4 ಹಿರಿಯ ಸಿಬ್ಬಂದಿ ವಜಾ

ನವದೆಹಲಿ: ಏರ್ ಇಂಡಿಯಾದ ವಿಮಾನ ನಿಲ್ದಾಣದ ಗೇಟ್‌ವೇ ಸೇವೆಗಳನ್ನು ಒದಗಿಸುವ ಎಐಎಸ್‌ಎಟಿಎಸ್‌ (AISATS)ನ ನಾಲ್ವರು ಹಿರಿಯ ಉದ್ಯೋಗಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದ ಕೆಲವೇ ದಿನಗಳ ನಂತರ ನೌಕರರು ಕಚೇರಿ ಸ್ಥಳದಲ್ಲಿ ಪಾರ್ಟಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಹಮದಾಬಾದ್‌ನಲ್ಲಿ 275ಕ್ಕೂ … Continued

ವೀಡಿಯೊ..| ಜಗನ್ನಾಥ ರಥಯಾತ್ರೆಯ ವೇಳೆ ಹುಚ್ಚೆದ್ದು ಓಡಿದ ಆನೆಗಳು ; ಭಯಭೀತರಾಗಿ ಓಡಿದ ಭಕ್ತರು

ಅಹಮದಾಬಾದ್‌ನಲ್ಲಿ ನಡೆದ ಜಗನ್ನಾಥ ರಥಯಾತ್ರೆ ಮೆರವಣಿಗೆಗೆ ಕರೆತರಲಾದ ಆನೆಗಳ ಗುಂಪು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದ್ದರಿಂದ ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಅನಿರೀಕ್ಷಿತ ಘಟನೆಯಿಂದಾಗಿ ಹಲವಾರು ಭಕ್ತರು ಮತ್ತು ಪಕ್ಕದಲ್ಲಿದ್ದವರು ಹೆದರಿಕೊಂಡು ಅಲ್ಲಿಂದ ಓಡಿಹೋದರು. ಆನೆಗಳು ಜನರಿಂದ ತುಂಬಿಹೋಗಿದ್ದ ರಸ್ತೆಗಳಿಗೆ ನುಗ್ಗಿತ್ತು. ಜನರು ಸುರಕ್ಷತೆಗಾಗಿ ಅಲ್ಲಿಂದ ಓಡುತ್ತಿದ್ದರು. ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡಿರುವ ಭಯಾನಕ ಕ್ಷಣದ ವೀಡಿಯೊ ಅವ್ಯವಸ್ಥೆ … Continued

ಶುಭಾಂಶು ಶುಕ್ಲಾರಿಂದ ಇತಿಹಾಸ ಸೃಷ್ಟಿ ; 424 ಕಿಮೀ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಮೊದಲ ಭಾರತೀಯ-ವೀಕ್ಷಿಸಿ

ನವದೆಹಲಿ: ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ 28 ಗಂಟೆಗಳ ನಂತರ, ಗ್ರೂಪ್ ಕ್ಯಾಪ್ಟನ್ ಭಾರತದ ಶುಭಾಂಶು ಶುಕ್ಲಾ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ ಆಕ್ಸಿಯಮ್ -4 (ಆಕ್ಸ್ -4) ಮಿಷನ್ ಕಕ್ಷೆಯಲ್ಲಿರುವ ಪ್ರಯೋಗಾಲಯದ ಜೊತೆ ಯಶಸ್ವಿಯಾಗಿ ಡಾಕ್ ಆಗುತ್ತಿದ್ದಂತೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್) ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. … Continued

ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

ಇಸ್ರೇಲ್ ರಕ್ಷಣಾ ಪಡೆಗಳು (IDF) ಇರಾನಿನ ಪಶ್ಚಿಮ, ಪೂರ್ವ ಮತ್ತು ಮಧ್ಯ ಭಾಗದಲ್ಲಿರುವ ಆರು ವಿಮಾನ ನಿಲ್ದಾಣಗಳ ಮೇಲೆ ಸಂಘಟಿತ ವಾಯುದಾಳಿ ನಡೆಸಿದ್ದು, 15 ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದೆ. ದೂರದಿಂದಲೇ ಮಾನವಸಹಿತ ವಿಮಾನಗಳು, ರನ್‌ವೇಗಳು, ಭೂಗತ ಬಂಕರ್‌ಗಳು ಮತ್ತು F-14s, F-5s, AH-1 ಹೆಲಿಕಾಪ್ಟರ್‌ಗಳು ಮತ್ತು ಇಂಧನ ತುಂಬುವ ವಿಮಾನ ಸೇರಿದಂತೆ … Continued

ವೀಡಿಯೊ..| 1000 ಕಿಮೀ ದೂರದಿಂದ ನಿಖರ ಡ್ರೋನ್‌ ದಾಳಿ ; ಕಾರಿನಲ್ಲಿ ಹೋಗುತ್ತಿದ್ದಾಗ ಇರಾನ್‌ ಸೇನಾ ನಾಯಕನ ಹತ್ಯೆ ಮಾಡಿದ ಇಸ್ರೇಲ್‌…!

ಪಶ್ಚಿಮ ಇರಾನ್‌ನಲ್ಲಿ ನಡೆದ ವಾಯುದಾಳಿಯಲ್ಲಿ, ಐಆರ್‌ಜಿಸಿ ಕುಡ್ಸ್ ಪಡೆಯ ಹಿರಿಯ ಅಧಿಕಾರಿ ಬೆಹ್ನಮ್ ಶಹ್ರಿಯಾರಿ ಕೊಲ್ಲಲ್ಪಟ್ಟರು ಎಂದು ಇಸ್ರೇಲ್‌ ಸೇನೆ ಶನಿವಾರ ತಿಳಿಸಿದೆ, ಇಸ್ರೇಲ್‌ನಿಂದ 1,000 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದ ಪ್ರದೇಶದಲ್ಲಿ ಕಾರಿನಲ್ಲಿ ಹೋಗುತ್ತಿರುವಾಗ ಇಸ್ರೇಲ್‌ ನಡೆಸಿದ ನಿಖರ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಬೆಹ್ನಮ್ ಶಹರಿಯಾರಿ ಪಶ್ಚಿಮ ಇರಾನ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲೇ … Continued