ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ವೀಡಿಯೊ…| ಚುನಾವಣೆಯಲ್ಲಿ ಗೆಲುವು ; ವಿಜಯೋತ್ಸವದ ವೇಳೆ ಒಮ್ಮೆಗೇ ಹೊತ್ತಿ ಉರಿದ ಬೆಂಕಿ, ಹಲವರಿಗೆ ಗಾಯ

ಬೆಳಗಾವಿ: ಬೆಳಗಾವಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಿವಾಜಿ ಪಾಟೀಲ ಅವರ ವಿಜಯೋತ್ಸವದ ವೇಳೆ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೆರವಣಿಗೆಯಲ್ಲಿದ್ದ ಕೆಲ ಮಹಿಳೆಯರಿಗೂ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಗಡಿಭಾಗವಾದ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ … Continued

ವೀಡಿಯೊ..| ಮರದ ಕೊಂಬೆಯಲ್ಲಿ ನೇತಾಡುತ್ತಿದ್ದ ಹಾವನ್ನು ನೀರಿನಿಂದ ಜಿಗಿದು ಕಚ್ಚಿ ಹಿಡಿದು ಮೀನು ; ಮತ್ತೊಂದು ಮೀನಿನ ಎಂಟ್ರಿ : ಮುಂದೇನಾಯ್ತು…ಅಚ್ಚರಿ !

ಪ್ರತಿಯೊಂದು ಜೀವಿಗೂ ಪ್ರಕೃತಿ ವಿಶೇಷತೆಯನ್ನು ನೀಡಿದೆ. ಇದರಿಂದಾಗಿಯೇ ಪ್ರತಿಯೊಂದು ಜೀವಿಯು ಇನ್ನೊಂದಕ್ಕಿಂತ ಭಿನ್ನವಾಗಿ ಕಾಣುತ್ತದೆ. ಒಂದು ಪ್ರಾಣಿಗೆ ಬೇಟೆಗಾರನಾಗಿ ಪರಿಣಮಿಸುವ ಪ್ರಾಣಿ ಮತ್ತೊಂದು ಪ್ರಾಣಿಯ ಬೇಟೆಗೆ ತಾನೇ ಬಲಿಯಾಗುತ್ತದೆ. ಇದು ಪ್ರಕೃತಿಯ ನಿಯಮವಾಗಿದೆ. ಇದರಲ್ಲಿ ಕೇವಲ ಬಲಶಾಲಿ ಮಾತ್ರವಾದರೆ ಸಾಲದು. ಬಲದ ಜೊತೆಗೆ ಬುದ್ಧಿವಂತಿಕೆಯೂ ಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ಅದರ ಮೂಲಕ … Continued

ವೀಡಿಯೊ..| ಮಹಾಯುದ್ಧದ ಭೀತಿ ; ಮೊದಲ ಬಾರಿಗೆ ತನ್ನ ಮೇಲೆ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ ರಷ್ಯಾ : ಉಕ್ರೇನ್‌

ಇದೇ ಮೊದಲ ಬಾರಿಗೆ ರಷ್ಯಾದಿಂದ ಪರಮಾಣು ಅಲ್ಲದ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ (ICBM) ಉಡಾವಣೆಯಾಗುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಹೊರಹೊಮ್ಮಿದೆ. ಇದು ಯುದ್ಧದಲ್ಲಿ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಯ ಮೊದಲ ಬಳಕೆ ಎಂದು ಹೇಳಲಾಗಿದೆ. ಇದು ರಷ್ಯಾ ಮತ್ತು ಉಕೇನ್‌ ನಡುವೆ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಸೂಚಿಸುತ್ತದೆ. ಉಕ್ರೇನ್‌ನ ಕೇಂದ್ರ ನಗರವಾದ ದ್ನಿಪ್ರೊವನ್ನು ಗುರಿಯಾಗಿಟ್ಟುಕೊಂಡು ಪರಮಾಣು ಸಿಡಿತಲೆ ಹೊತ್ತೊಯ್ಯುವ … Continued

ವೀಡಿಯೊ…| ಸೈಕಲ್ ಮೇಲಿದ್ದ 5 ವರ್ಷದ ಬಾಲಕನ ಮೇಲೆ ಓಡಿದ ಕಾರು ; ಪವಾಡ ಸದೃಶರೀತಿಯಲ್ಲಿ ಪಾರಾದ ಬಾಲಕ…!

ಸೈಕಲ್ ಮೇಲೆ ಕುಳಿತು ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದ ಕಾರು ಆತನ ಮೇಲೆ ಹತ್ತಿ ಹೋದರೂ ಆತ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಮಧ್ಯಪ್ರದೇಶದ ಬೇತುಲ್‌ ಎಂಬಲ್ಲಿ ನಡೆದಿದೆ. ಈ ಘಟನೆ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇತುಲ್ ಜಿಲ್ಲೆಯ ಕೊತ್ವಾಲಿ ಪೊಲೀಸ್ … Continued

ವೀಡಿಯೊ..| ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಮತ್ತು 46 ಜನರು ಗಾಯಗೊಂಡಿದ್ದಾರೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆ ಹೊತ್ತುಕೊಂಡಿದೆ. ರೈಲು ತನ್ನ ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ … Continued

ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ವೀಡಿಯೊ…| ಹೆಬ್ಬಾವು ಇಡಿಯಾಗಿ ನುಂಗಿದ್ದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು..ಆದರೆ

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಹೆಬ್ಬಾವು ನುಂಗಿದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ಹೆಬ್ಬಾವಿನ ಹೊಟ್ಟೆಯೊಳಗೆ ಸಿಕ್ಕಿಬಿದ್ದ ಕರುವನ್ನು ಬಿಡಿಸಲು ಸ್ಥಳೀಯರು ಹಾವನ್ನು ಅಲುಗಾಡಿಸುತ್ತಿರುವುದನ್ನು ತೋರಿಸುತ್ತದೆ. ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಅವರು … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued