ವೀಡಿಯೊ..| ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್‌ ಹಿಡಿದ ಗ್ಲೆನ್ ಫಿಲಿಪ್ಸ್ ; ‘ಕ್ರಿಕೆಟ್‌ ಸೂಪರ್‌ಮ್ಯಾನ್’ ಎಂದ ಅಭಿಮಾನಿಗಳು..!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್ ಎಲ್ಲರನ್ನೂ ಬೆರಗಾಗಿಸಿದೆ. ಕ್ರೈಸ್ಟ್ ಚರ್ಸ್​​ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪ್ರಥಮ ಇನಿಂಗ್ಸ್​​ನಲ್ಲಿ 348 ರನ್ ಕಲೆಹಾಕಿದೆ. ನಂತರ ಬ್ಯಾಟಿಂಗ್‌ಗೆ ಇಳಿದ … Continued

ವೀಡಿಯೊ..| ಮಂಡ್ಯ ; ಅಪರೂಪದ ವಿದ್ಯಮಾನ : ಮೂರು ಕರುಗಳಿಗೆ ಜನ್ಮ ನೀಡಿದ ಹಸು…!

ಮಂಡ್ಯ: ಸಾಮಾನ್ಯವಾಗಿ ಹಸುಗಳು ಒಂದು ಸಲಕ್ಕೆ ಒಂದೇ ಕರುವಿಗೆ ಜನ್ಮವನ್ನು ನೀಡುತ್ತವೆ. ಆದರೆ ಅಪರೂಪದ ವಿದ್ಯಮಾನದಲ್ಲಿ ಕೆಲವು ಕಡೆಗಳಲ್ಲಿ ಅವಳಿ ಕರುಗಳಿಗೆ ಜನ್ಮ ನೀಡಿದ ಉದಾಹರಣೆಗಳೂ ಇವೆ. ಆದರೆ ಹಸು ಮೂರು ಕರುಗಳಿಗೆ ಜನ್ಮ ನೀಡಿದ ವಿದ್ಯಮಾನ ಅಪರದಲ್ಲಿ ಅಪರೂಪದ ವಿದ್ಯಮಾನ ಎಂದೇ ಹೇಳಬಹುದು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ನಿವಾಸಿ ಕಂಠಿ … Continued

ಗುಂಡ್ಲುಪೇಟೆ | ಆನೆ ಮರಿ ಬೇಟೆಗೆ ಹೊಂಚು ಹಾಕಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ : ವೀಡಿಯೊ ವೈರಲ್

ಚಾಮರಾಜನಗರ : ಆನೆಯ ಮರಿಯೊಂದರ ಬೇಟೆ ಮಾಡಲು ಹೊಂಚು ಹಾಕಿದ್ದ ಹುಲಿ ಮೇಲೆ ತಾಯಿ ಆನೆ ದಾಳಿಗೆ ಮುಂದಾದಾಗ ಹುಲಿರಾಯ ಅಲ್ಲಿಂದ ಕಾಲ್ಕಿತ್ತ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ. ಇದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಬಂಡೀಪುರ ಅಭಯಾರಣ್ಯ ಸಫಾರಿ ಜೋನ್ ನಲ್ಲಿ ತಾಯಿ ಆನೆ ತನ್ನ ಮರಿ ಜೊತೆಯಲ್ಲಿದ್ದ … Continued

ವೀಡಿಯೊ..| ಕಂಡಕಂಡವರಿಗೆ ತಿವಿದು ಗಾಯಗೊಳಿಸಿದ ಗೂಳಿ ; 15 ಜನರಿಗೆ ಗಾಯ : 3 ತಾಸು ಕಾರ್ಯಾಚರಣೆ ನಂತರ ಸೆರೆ…!

ನವದೆಹಲಿ : ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣದಲ್ಲಿ ಗೂಳಿಗೆ ಜನರು ಭಯಭೀತರಾಗಿದ್ದಾರೆ. ದಾರಿತಪ್ಪಿ ಬಂದ ಗೂಳಿಯೊಂದು ಜನರನ್ನು ಬೆನ್ನಟ್ಟುವುದು, ಕೊಂಬುಗಳಿಂದ ತಿವಿಯುವುದು ಮತ್ತು ಜನರನ್ನು ಎತ್ತಿ ಒಗೆಯುವುದನ್ನು ಮಾಡಿದೆ. ಈ ರೊಚ್ಚಿಗೆದ್ದ ಗೂಳಿ ಕಂಡವರನ್ನೆಲ್ಲ ತಿವಿದಿದ್ದು, ಸುಮಾರು 15 ಜನರನ್ನು ಗಂಭೀರವಾಗಿ ಗಾಯಗೊಳಿಸಿದೆ ಎಂದು ಹೇಳಲಾಗಿದೆ. ಜಲಾಲಾಬಾದ್ ಪಟ್ಟಣದಲ್ಲಿ, ದಟ್ಟಣೆಯ ಮಧ್ಯೆ ಗೂಳಿಯೊಂದು ವ್ಯಕ್ತಿಯನ್ನು ಹಿಂಬಾಲಿಸುತ್ತಿರುವುದು … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued

ವೀಡಿಯೊ…| ಚುನಾವಣೆಯಲ್ಲಿ ಗೆಲುವು ; ವಿಜಯೋತ್ಸವದ ವೇಳೆ ಒಮ್ಮೆಗೇ ಹೊತ್ತಿ ಉರಿದ ಬೆಂಕಿ, ಹಲವರಿಗೆ ಗಾಯ

ಬೆಳಗಾವಿ: ಬೆಳಗಾವಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಿವಾಜಿ ಪಾಟೀಲ ಅವರ ವಿಜಯೋತ್ಸವದ ವೇಳೆ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೆರವಣಿಗೆಯಲ್ಲಿದ್ದ ಕೆಲ ಮಹಿಳೆಯರಿಗೂ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಗಡಿಭಾಗವಾದ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ … Continued

ವೀಡಿಯೊ..| ಮರದ ಕೊಂಬೆಯಲ್ಲಿ ನೇತಾಡುತ್ತಿದ್ದ ಹಾವನ್ನು ನೀರಿನಿಂದ ಜಿಗಿದು ಕಚ್ಚಿ ಹಿಡಿದು ಮೀನು ; ಮತ್ತೊಂದು ಮೀನಿನ ಎಂಟ್ರಿ : ಮುಂದೇನಾಯ್ತು…ಅಚ್ಚರಿ !

ಪ್ರತಿಯೊಂದು ಜೀವಿಗೂ ಪ್ರಕೃತಿ ವಿಶೇಷತೆಯನ್ನು ನೀಡಿದೆ. ಇದರಿಂದಾಗಿಯೇ ಪ್ರತಿಯೊಂದು ಜೀವಿಯು ಇನ್ನೊಂದಕ್ಕಿಂತ ಭಿನ್ನವಾಗಿ ಕಾಣುತ್ತದೆ. ಒಂದು ಪ್ರಾಣಿಗೆ ಬೇಟೆಗಾರನಾಗಿ ಪರಿಣಮಿಸುವ ಪ್ರಾಣಿ ಮತ್ತೊಂದು ಪ್ರಾಣಿಯ ಬೇಟೆಗೆ ತಾನೇ ಬಲಿಯಾಗುತ್ತದೆ. ಇದು ಪ್ರಕೃತಿಯ ನಿಯಮವಾಗಿದೆ. ಇದರಲ್ಲಿ ಕೇವಲ ಬಲಶಾಲಿ ಮಾತ್ರವಾದರೆ ಸಾಲದು. ಬಲದ ಜೊತೆಗೆ ಬುದ್ಧಿವಂತಿಕೆಯೂ ಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ಅದರ ಮೂಲಕ … Continued

ವೀಡಿಯೊ..| ಮಹಾಯುದ್ಧದ ಭೀತಿ ; ಮೊದಲ ಬಾರಿಗೆ ತನ್ನ ಮೇಲೆ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ ರಷ್ಯಾ : ಉಕ್ರೇನ್‌

ಇದೇ ಮೊದಲ ಬಾರಿಗೆ ರಷ್ಯಾದಿಂದ ಪರಮಾಣು ಅಲ್ಲದ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ (ICBM) ಉಡಾವಣೆಯಾಗುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಹೊರಹೊಮ್ಮಿದೆ. ಇದು ಯುದ್ಧದಲ್ಲಿ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಯ ಮೊದಲ ಬಳಕೆ ಎಂದು ಹೇಳಲಾಗಿದೆ. ಇದು ರಷ್ಯಾ ಮತ್ತು ಉಕೇನ್‌ ನಡುವೆ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಸೂಚಿಸುತ್ತದೆ. ಉಕ್ರೇನ್‌ನ ಕೇಂದ್ರ ನಗರವಾದ ದ್ನಿಪ್ರೊವನ್ನು ಗುರಿಯಾಗಿಟ್ಟುಕೊಂಡು ಪರಮಾಣು ಸಿಡಿತಲೆ ಹೊತ್ತೊಯ್ಯುವ … Continued

ವೀಡಿಯೊ…| ಸೈಕಲ್ ಮೇಲಿದ್ದ 5 ವರ್ಷದ ಬಾಲಕನ ಮೇಲೆ ಓಡಿದ ಕಾರು ; ಪವಾಡ ಸದೃಶರೀತಿಯಲ್ಲಿ ಪಾರಾದ ಬಾಲಕ…!

ಸೈಕಲ್ ಮೇಲೆ ಕುಳಿತು ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದ ಕಾರು ಆತನ ಮೇಲೆ ಹತ್ತಿ ಹೋದರೂ ಆತ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಮಧ್ಯಪ್ರದೇಶದ ಬೇತುಲ್‌ ಎಂಬಲ್ಲಿ ನಡೆದಿದೆ. ಈ ಘಟನೆ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇತುಲ್ ಜಿಲ್ಲೆಯ ಕೊತ್ವಾಲಿ ಪೊಲೀಸ್ … Continued

ವೀಡಿಯೊ..| ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಮತ್ತು 46 ಜನರು ಗಾಯಗೊಂಡಿದ್ದಾರೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆ ಹೊತ್ತುಕೊಂಡಿದೆ. ರೈಲು ತನ್ನ ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ … Continued