ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ವೀಡಿಯೊ…| ಹೆಬ್ಬಾವು ಇಡಿಯಾಗಿ ನುಂಗಿದ್ದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು..ಆದರೆ

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಹೆಬ್ಬಾವು ನುಂಗಿದ ನೀಲಗಾಯ್ ಕರುವನ್ನು ರಕ್ಷಿಸಲು ಯತ್ನಿಸಿದ ಸ್ಥಳೀಯರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ಹೆಬ್ಬಾವಿನ ಹೊಟ್ಟೆಯೊಳಗೆ ಸಿಕ್ಕಿಬಿದ್ದ ಕರುವನ್ನು ಬಿಡಿಸಲು ಸ್ಥಳೀಯರು ಹಾವನ್ನು ಅಲುಗಾಡಿಸುತ್ತಿರುವುದನ್ನು ತೋರಿಸುತ್ತದೆ. ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಅವರು … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued

ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued

ನಕಲಿ ಬೆಳ್ಳುಳ್ಳಿ | ಇರಲಿ ಎಚ್ಚರ… ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ ; ವೀಡಿಯೊ ನೋಡಿದ್ರೆ ದಂಗಾಗ್ತೀರಾ…!

ಮುಂಬೈ : ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ ಹಾಗೂ ಮೊಟ್ಟೆ ಮಾರುಕಟ್ಟೆಗೆ ಬಂದಿದ್ದವು. ಈಗ ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಯಿಂದಾಗಿ ನಕಲಿ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ, ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಗಳಿಂದಾಗಿ ಸಿಮೆಂಟ್‌ನಿಂದ ಮಾಡಿದ ನಕಲಿ ಬೆಳ್ಳುಳ್ಳಿಯನ್ನು ಖರೀದಿದಾರರಿಗೆ ಮಾರಾಟ ಮಾಡಲಾಗುತ್ತಿದೆ ಎಂದು … Continued

ವೀಡಿಯೊ..| ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರ್‍ಯಾಲಿಯಲ್ಲಿ ಕುರ್ಚಿಗಳಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್​-ಆರ್​ಜೆಡಿ ಕಾರ್ಯಕರ್ತರು…!

ನವದೆಹಲಿ : ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡರು ಮತ್ತು ಪರಸ್ಪರರ ಮೇಲೆ ಕುರ್ಚಿಗಳು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ … Continued

ಸೂಪರ್‌ ಐಡಿಯಾ..| ಖಾತೆಯಲ್ಲಿ ಹಣವಿಲ್ಲ..ಎಟಿಎಂ ಬಳಸಿದ್ರೂ ಹಣ ತೆಗೆದಿಲ್ಲ, ಆದ್ರೆ ಕಾಸು ಮಾಡಿ ಚಹಾ ಸೇವಿಸಿದ್ರು ಅದ್ಹೇಗೆ..? ವೀಕ್ಷಿಸಿ

ಚಹಾದ ಮೇಲಿನ ನಮ್ಮ ಪ್ರೀತಿಗೆ ಮಿತಿಯಿಲ್ಲ. ಬೀದಿ ಬದಿಯ ಟೀ ಸ್ಟಾಲ್‌ನಲ್ಲಿ ಸಿಗುವ ಟೀಗೆ ಸಾಟಿಯಿಲ್ಲದ ವಿಶೇಷತೆ ಇದೆ. ಆದರೆ ನೀವು ಒಂದು ಕಪ್ ಚಾಯ್‌ಗಾಗಿ ಹಂಬಲಿಸುತ್ತಿದ್ದರೆ ಆದರೆ ಅದನ್ನು ಖರೀದಿಸಲು ಹಣವಿಲ್ಲದಿದ್ದರೆ ಏನು? ಪ್ರತಿಯೊಂದು ಕಾರ್ಯದಲ್ಲೂ ಸ್ಥಳೀಯವಾಗಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಭಾರತದ ಖ್ಯಾತಿಯು ಇತ್ತೀಚಿನ ವೈರಲ್ ವೀಡಿಯೊದಲ್ಲಿ ಮತ್ತೊಮ್ಮೆ ಕಂಡುಬಂದಿದೆ. ಖಾಲಿ ಬ್ಯಾಂಕ್ … Continued

ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued

ವೀಡಿಯೊ : ಅತ್ಯಾಚಾರ ಆರೋಪಿ ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಗೋಡೆ ಜಿಗಿದ ವೀಡಿಯೊ ವೈರಲ್ ; ನಂತರ ಆರೋಪಿಯ ಬಂಧನ

ಬೆಂಗಳೂರು: ಅತ್ಯಾಚಾರ ಆರೋಪಿಯೊಬ್ಬ 40 ಅಡಿ ಎತ್ತರದ ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ಘಟನೆ ದಾವಣೆಗೆರೆ ಉಪಕಾರಾಗೃಹದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಪೊಲೀಸರು ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗೆ ಕಳುಹಿಸಿದ್ದಾರೆ. ದಾವಣಗೆರೆ ಉಪ ಕಾರಾಗೃಹದಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ವಸಂತ ಎಂಬ ಆಟೋ … Continued