ವೀಡಿಯೊ: 7.3 ತೀವ್ರತೆಯ ಭಾರಿ ಭೂಕಂಪವು ವನವಾಟುಗೆ ಅಪ್ಪಳಿಸಿದ ಕ್ಷಣ; ತೀವ್ರತೆಗೆ ಜೋರಾಗಿ ಅಲುಗಾಡಿದ ವಾಹನಗಳು

ಮಂಗಳವಾರ ಆಸ್ಟ್ರೇಲಿಯಾದ ಪೂರ್ವದಲ್ಲಿರುವ ವನವಾಟು ದ್ವೀಪದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ಪೋರ್ಟ್ ವಿಲಾದಲ್ಲಿ ವ್ಯಾಪಕ ವಿನಾಶ ಉಂಟು ಮಾಡಿದೆ. ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಸ್ಥಳೀಯ ಕಾಲಮಾನ ಮಧ್ಯಾಹ್ನ 12:47 ಕ್ಕೆ, ಮುಖ್ಯ ದ್ವೀಪ ಎಫೇಟ್‌ನ ಕರಾವಳಿಯಿಂದ ಸರಿಸುಮಾರು 30 ಕಿಮೀ ದೂರದಲ್ಲಿ 57 ಕಿಮೀ ಆಳದಲ್ಲಿ ತೀವ್ರ ಕಂಪನ ಸಂಭವಿಸಿದೆ. ಭೂ … Continued

ವೀಡಿಯೊ…| ಕಾರಿನ ಬಾಗಿಲಿಗೆ ಹೆಬ್ಬೆರಳು ಸಿಕ್ಕಿಬಿದ್ದರೂ ವ್ಯಕ್ತಿಯನ್ನು ರಸ್ತೆಯಲ್ಲಿ ಅರ್ಧ ಕಿಮೀ ಎಳೆದೊಯ್ದ ಚಾಲಕ…!

ವಯನಾಡು: ಎರಡು ಗುಂಪುಗಳ ನಡುವಿನ ಜಗಳ ಬಿಡಿಸಲು ಹೋದ ಆದಿವಾಸಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ರಸ್ತೆಯುದ್ದಕ್ಕೂ ಅಮಾನುಷವಾಗಿ ಎಳೆದೊಯ್ದ ಘಟನೆ ವಯನಾಡಿನ ಮಾನಂತವಾಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಮಥನ್ ಎಂದು ಗುರುತಿಸಲಾಗಿದ್ದು, ಕಾರಿನ ಬಾಗಿಲಿಗೆ ಕೈ ಸಿಕ್ಕಿಕೊಂಡ ಆತನನ್ನು ಸುಮಾರು ಅರ್ಧ ಕಿಲೋಮೀಟರ್ ಎಳೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಕೃತ್ಯದಲ್ಲಿ … Continued

ವೀಡಿಯೊ..| ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಬಂದ ಅಲ್ಲು ಅರ್ಜುನಗೆ ಕುಟುಂಬಸ್ಥರಿಂದ ಭಾವುಕ ಸ್ವಾಗತ

ಹೈದರಾಬಾದ್‌ : ಜೈಲಿನಲ್ಲಿ ಒಂದು ರಾತ್ರಿ ಕಳೆದ ನಂತರ ಶನಿವಾರ ಬೆಳಿಗ್ಗೆ ಬಿಡುಗಡೆಯಾಗಿ ಹೈದರಾಬಾದಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ ಅವರ ಕುಟುಂಬಸ್ಥರು ಭಾವುಕರಾಗಿ ಅವರನ್ನು ಸ್ವಾಗತಿಸಿದ್ದಾರೆ. ಬಿಡುಗಡೆಯಾದ ನಂತರ ನೇರವಾಗಿ ತಂದೆಯ ಕಚೇರಿಯಾದ ಗೀತಾ ಆರ್ಟ್ಸ್‌ಗೆ ತೆರಳಿದರು. ಹಲವಾರು ವೀಡಿಯೊಗಳು ನಟ ಮನೆಗೆ ಆಗಮಿಸಿದ ನಂತರ ಅವರ ಪತ್ನಿ ಸ್ನೇಹಾ ರೆಡ್ಡಿ ಮತ್ತು ಮಗ ಹಾಗೂ … Continued

ವೀಡಿಯೊ..| ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪಕ್ಕೆ ಬೆಚ್ಚಿ ಬಿದ್ದ ಪಕ್ಷಿಗಳು ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಉತ್ತರ ಕ್ಯಾಲಿಫೋರ್ನಿಯಾದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅದರ ಕ್ಷಣವನ್ನು ಸೆರೆಹಿಡಿದ ತುಣುಕನ್ನು ಅಮೆರಿಕದ ಮೀನು ಮತ್ತು ವನ್ಯಜೀವಿ ಸರ್ವಿಸ್‌ ಬಿಡುಗಡೆ ಮಾಡಿದೆ. ಸ್ಯಾಕ್ರಮೆಂಟೊ ನ್ಯಾಷನಲ್ ವೈಲ್ಡ್‌ಲೈಫ್ ರೆಫ್ಯೂಜ್ ಕಾಂಪ್ಲೆಕ್ಸ್‌ನಲ್ಲಿರುವ ಪಕ್ಷಿಗಳು ಮತ್ತು ಸ್ಯಾಕ್ರಮೆಂಟೊ ಕಣಿವೆಯ ಸುತ್ತಮುತ್ತಲಿನ ಪ್ರದೇಶಗಳು ನಡುಕಕ್ಕೆ ಹೇಗೆ ಪ್ರತಿಕ್ರಿಯಿಸಿದವು ಎಂಬುದನ್ನು ವೀಡಿಯೊ ತೋರಿಸುತ್ತದೆ. ಪ್ರಬಲ ಭೂಕಂಪವು ಗುರುವಾರ (ಡಿಸೆಂಬರ್ 5) ಉತ್ತರ … Continued

ವೀಡಿಯೊ..| ಅಮೃತಸರದ ಸ್ವರ್ಣ ಮಂದಿರದ ಬಳಿ ಮಾಜಿ ಡಿಸಿಎಂ ಸುಖ​ಬೀರ್​ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನ

ಚಂಡೀಗಢ: ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್‌ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್‌ ಸಿಂಗ್‌ ಬಾದಲ್‌(Sukhbir Singh Badal) ಮೇಲೆ ಬುಧವಾರ ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದ ಬಳಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ ಮೇಲೆ ಹಲ್ಲೆ ನಡೆದಿದೆ. ಸುಖಬೀರ್ ಸಿಂಗ್ … Continued

ವೀಡಿಯೊ..| ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಮತ್ತು 46 ಜನರು ಗಾಯಗೊಂಡಿದ್ದಾರೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆ ಹೊತ್ತುಕೊಂಡಿದೆ. ರೈಲು ತನ್ನ ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ … Continued

ವೀಡಿಯೊ..| ಕಳೆದ ವರ್ಷ ಅಕ್ಟೋಬರ್ 7ರ ದಾಳಿ ಮೊದಲು ಹಮಾಸ್ ಮುಖ್ಯಸ್ಥ ಸಿನ್ವಾರ್ ಗಾಜಾದ ಭೂಗತ ಸುರಂಗಕ್ಕೆ ಹೋದ ವೀಡಿಯೊ ಹಂಚಿಕೊಂಡ ಇಸ್ರೇಲ್

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್‌ನಲ್ಲಿ ಸಾಮೂಹಿಕವಾಗಿ ಜನರನ್ನು ಹತ್ಯೆ ನಡೆಸಿದ ಹಮಾಸ್‌ ಗುಂಪಿನ ದಾಳಿಯ ಸಂಚಿನ ರೂವಾರಿ ಎಂದೇ ಇಸ್ರೇಲಿನಿಂದ ಬಿಂಬಿತವಾಗಿರುವ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಈ ದಾಳಿ ನಡೆಸುವ ಕೆಲವೇ ಗಂಟೆಗಳ ಮುನ್ನ ಗಾಜಾದ ಭೂಗತ ಸುರಂಗಕ್ಕೆ ತನ್ನ ಕುಟುಂಬ ಹಾಗೂ ವಸ್ತುಗಳನ್ನು ಸಾಗಿಸುತ್ತಿರುವ ದೃಶ್ಯವನ್ನು ಇಸ್ರೇಲ್ ಶನಿವಾರ ಬಿಡುಗಡೆ ಮಾಡಿದೆ. … Continued

ವೀಡಿಯೊ..| ಆಸ್ಪತ್ರೆಯ ತುರ್ತು ಚಿಕಿತ್ಸಾ ಕೊಠಡಿ ಒಳಕ್ಕೆ ಚಪ್ಪಲಿ ತೆಗೆದು ಬರುವಂತೆ ಹೇಳಿದ್ದಕ್ಕೆ ವೈದ್ಯರಿಗೆ ಥಳಿಸಿದ ರೋಗಿಯ ಕುಟುಂಬ…!

ಆಘಾತಕಾರಿ ಘಟನೆಯೊಂದರಲ್ಲಿ, ಗುಜರಾತಿನಲ್ಲಿ ಆಸ್ಪತ್ರೆಯ ವೈದ್ಯರು ವೈದ್ಯಕೀಯ ತುರ್ತು ಕೋಣೆಗೆ ಪ್ರವೇಶಿಸುವ ಮೊದಲು ಚಪ್ಪಲಿಯನ್ನು ತೆಗೆದಿಟ್ಟು ಬರುವಂತೆ ರೋಗಿಯ ಕುಟುಂಬದವರಿಗೆ ಸೂಚಿಸಿದ ನಂತರ ಅವರು ವೈದ್ಯರಿಗೆ ಮನಬಂದಂತೆ ಥಳಿಸಿದ್ದಾರೆ ಎಂದು ವರದಿಯಾಗಿದೆ. ಗುಜರಾತಿನ ಭಾವನಗರದ ಸಿಹೋರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆಗೆ ತಲೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ … Continued

ವೀಡಿಯೊ..| ಲೆಬನಾನಿನಾದ್ಯಂತ ಪೇಜರ್‌ಗಳು ಸ್ಫೋಟ; 8 ಮಂದಿ ಸಾವು, 2,750 ಮಂದಿಗೆ ಗಾಯ : ಇಸ್ರೇಲ್‌ ಕಾರಣ ಎಂದು ಹಿಜ್ಬೊಲ್ಲಾ ಆರೋಪ

ಬೈರುತ್: ಅಮೆರಿಕ-ಗೊತ್ತುಪಡಿಸಿದ ಭಯೋತ್ಪಾದಕ ಗುಂಪು ಹಿಜ್ಬೊಲ್ಲಾವನ್ನು ಗುರಿಯಾಗಿಸಿಕೊಂಡು ಪೇಜರ್‌ಗಳ ಸಿಂಕ್ರೊನೈಸ್ ಸ್ಫೋಟನದಲ್ಲಿ ಲೆಬನಾನ್‌ನಲ್ಲಿ ಎಂಟು ಜನರು ಸಾವಿಗೀಡಾಗಿದ್ದಾರೆ ಮತ್ತು 2,750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಘಟನೆಯಲ್ಲಿ ಲೆಬನಾನ್‌ನ ತನ್ನ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಲೆಬನಾನ್‌ನಲ್ಲಿ ಸ್ಥಳೀಯ ಸಮಯ … Continued

ವೀಡಿಯೊ | ʼವಾಪಸ್‌ ಹೋಗಿʼ : ಕೆನಡಾದ ಟೊರೊಂಟೊದಲ್ಲಿ ನಡೆದ ಭಾರತ ದಿನದ ಮೆರವಣಿಗೆಗೆ ಖಲಿಸ್ತಾನ್ ಪರ ಪ್ರತಿಭಟನಾಕಾರರ ಅಡ್ಡಿ

ಕೆನಡಾದ ಟೊರೊಂಟೊದಲ್ಲಿ ಭಾನುವಾರ ನಡೆದ ಭಾರತದ ಸ್ವಾಂತ್ರ್ಯ ದಿನದ ಪರೇಡ್‌ಗೆ ಹತ್ತಾರು ಖಲಿಸ್ತಾನ್ ಪರ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಭಾರತೀಯ ಡಯಾಸ್ಪೊರಾ ಆಯೋಜಿಸಿದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಇದು ಕೆಲಕಾಲ ಉದ್ವಿಗ್ನತೆಗೆ ಕಾರಣವಾಯಿತು. ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೈರಲ್ ವೀಡಿಯೊ, ದಲ್ಲಿ ಟೊರೊಂಟೊದ ನಾಥನ್ ಫಿಲಿಪ್ಸ್ ಸ್ಕ್ವೇರ್‌ನಲ್ಲಿ ಆಗಸ್ಟ್ 18 ರಂದು ಭಾರತದ … Continued