ವೀಡಿಯೊ..: ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡುತ್ತಿರುವ ನಾಯಿ : “ಇದು ಮನುಷ್ಯರಿಗೆ ಪಾಠ” ಎಂದ ನೆಟ್ಟಿಗರು | ವೀಕ್ಷಿಸಿ

ಬೈಕಿನಲ್ಲಿ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟ್ ಧರಿಸುವುದು ದಿನನಿತ್ಯದ ಟ್ರಾಫಿಕ್‌ನಲ್ಲಿ ಸಾಮಾನ್ಯ ದೃಶ್ಯವಾಗಿದೆ, ಆದರೆ ಒಬ್ಬ ವ್ಯಕ್ತಿಯೊಬ್ಬರು ಹಿಂಬದಿಯ ಸೀಟಿನಲ್ಲಿ ಸವಾರನಂತೆ ಹೆಲ್ಮೆಟ್‌ ಧರಿಸಿ ಕುಳಿತ ನಾಯಿಯ ಜೊತೆ ಬೈಕ್ ಚಲಾಯಿಸುವುದು ಅಸಾಮಾನ್ಯ ಸಂಗತಿಯಾಗಿದೆ. @PMN2463 ಎಂಬ ಟ್ವಿಟ್ಟರ್ ಖಾತೆಯಿಂದ ಮಂಗಳವಾರ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಪ್ರಯಾಣಿಕರಂತೆ ನಾಯಿಯೊಂದು ಬೈಕ್ ಮೇಲೆ ಹೆಲ್ಮೆಟ್‌ ಧರಿಸಿ … Continued

ವೀಡಿಯೊ…: ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಮಂಗಳೂರು : ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಇಂದು, ಬುಧವಾರ ಮಧ್ಯಾಹ್ನ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ … Continued

ವೀಡಿಯೊ : ಅಂತಾರಾಷ್ಟ್ರೀಯ ಸಮ್ಮೇಳನದ ವೇಳೆ ಬಡಿದಾಡಿಕೊಂಡ ರಷ್ಯಾದ ಪ್ರತಿನಿಧಿ-ಉಕ್ರೇನ್ ಸಂಸದ | ವೀಕ್ಷಿಸಿ

ಕಪ್ಪು ಸಮುದ್ರದ ಆರ್ಥಿಕ ಸಮುದಾಯದ 61 ನೇ ಅಧಿವೇಶನದಲ್ಲಿ ರಷ್ಯಾದ ಪ್ರತಿನಿಧಿಯೊಬ್ಬರು ಉಕ್ರೇನ್ ಧ್ವಜವನ್ನು ಆ ದೇಶದ ಸಂಸದರೊಬ್ಬರಿಂದ ಕಸಿದುಕೊಂಡ ನಂತರ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಇವರಿಬ್ಬರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಇದು ವೈರಲ್ ವೀಡಿಯೊದಲ್ಲಿ ಕಂಡುಬಂದಿದೆ. ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ 14 ತಿಂಗಳ ನಂತರ ಗುರುವಾರ ಟರ್ಕಿಯ ರಾಜಧಾನಿ ಅಂಕಾರಾದಲ್ಲಿ ಕಪ್ಪು ಸಮುದ್ರದ … Continued

ವೀಡಿಯೊ…: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬ್ರೇಕ್ ಫೇಲ್‌ ಆದ ನಂತರ 12 ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್‌

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ಬಹು ವಾಹನಗಳ ಡಿಕ್ಕಿಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್ಕಿನ ಬ್ರೇಕ್ ಫೇಲ್‌ ಆದ ನಂತರ ಅದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಅಪಘಾತ ಪ್ರಾರಂಭವಾಯಿತು. ಟ್ರಕ್ ಅಂತಿಮವಾಗಿ ಕನಿಷ್ಠ 12 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರದ ಖೋಪೋಲಿ ಬಳಿ ನಡೆದ ಈ ಅಪಘಾತದಲ್ಲಿ … Continued

ವೀಡಿಯೊ : ಇರಾನಿನಲ್ಲಿ ಹಿಜಾಬ್‌ ಧರಿಸದೇ ಅಂಗಡಿಗೆ ಬಂದಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಮೊಸರು ಸುರಿದ ವ್ಯಕ್ತಿ

ಇರಾನ್‌ನಲ್ಲಿ ಸಾರ್ವಜನಿಕವಾಗಿ ತಮ್ಮ ಕೂದಲನ್ನು ವಸ್ತ್ರದಿಂದ ಮುಚ್ಚದೇ ಇರುವುದಕ್ಕಾಗಿ ತಲೆಯ ಮೇಲೆ ಮೊಸರು ಸುರಿದು ಹಲ್ಲೆ ಮಾಡಿದ ನಂತರ ವ್ಸತ್ರದಿಂದ ಕೂದಲು ಮುಚ್ಚದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಘಟನೆ ಗುರುವಾರ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಅಂಗಡಿಯೊಂದರಲ್ಲಿ ಇಬ್ಬರು ಮಹಿಳಾ ಗ್ರಾಹಕರ ಜೊತೆ ವ್ಯಕ್ತಿಯೊಬ್ಬ ಸಂಭಾಷಣೆಯಲ್ಲಿ ತೊಡಗಿಕೊಂಡಿರುವುದು ಕಂಡುಬರುತ್ತದೆ. ನಂತರ ಆ ವ್ಯಕ್ತಿ … Continued

ವೀಡಿಯೊ: ಪ್ರಜಾಧ್ವನಿ ಯಾತ್ರೆ ವೇಳೆ ಬಸ್‌ ಮೇಲಿಂದ ಹಣ ಎಸೆದ ಡಿ.ಕೆ. ಶಿವಕುಮಾರ…!

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ರ್ಯಾಲಿಯಲ್ಲಿ ಜನರ ಮೇಲೆ ಹಣ ಎಸೆದಿದ್ದಾರೆ. ವಿಡಿಯೋದಲ್ಲಿ ಶಿವಕುಮಾರ ಅವರು ಮಂಡ್ಯ ತಾಲೂಕಿನ ಬೇವಿನಹಳ್ಳಿ ಬಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಬಸ್‌ ಮೇಲಿಂದ ಜಾನಪದ ಕಲಾವಿದರಿಗೆ ಹಣವನ್ನು ಎರಚುವುದು ಕಂಡುಬಂದಿದೆ. ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ … Continued

500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿಎಂದು ಸಿದ್ಧರಾಮಯ್ಯ ಹೇಳಿರುವ ವೀಡಿಯೊ ಟ್ವೀಟ್ ಮಾಡಿದ ಬಿಜೆಪಿ

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಮತದಾರರನ್ನು ಸೆಳೆಯಲು ಬೇರೆಬೇರೆ ಹೆಸರನ್ನಿಟ್ಟು ವಿವಿಧ ರಾಜಕೀಯ ಪಕ್ಷಗಳು ಪ್ರಚಾರ ನಡೆಸುತ್ತಿವೆ, ಪಕ್ಷಾಂತರಗಳು ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆನ್ನಲಾದ ವೀಡಿಯೊವೊಂದು ವೈರಲ್ … Continued

ಪ್ರಯಾಣಿಕ ಕೊಟ್ಟ ₹ 500 ನೋಟನ್ನು ಕ್ಷಣಾರ್ಧದಲ್ಲಿ ಬದಲಿಸಿ ಕೊಟ್ಟಿದ್ದು 20 ರೂ ನೋಟು ಎಂದ ರೈಲ್ವೆ ಸಿಬ್ಬಂದಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಲ್ಲಿ ನಗದು ವಹಿವಾಟಿನ ವೇಳೆ ರೈಲ್ವೆ ಉದ್ಯೋಗಿಯೊಬ್ಬ ಪ್ರಯಾಣಿಕರಿಗೆ ವಂಚಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶುಕ್ರವಾರ ರೈಲ್ ವಿಸ್ಪರ್ಸ್ ಎಂಬ ಬಳಕೆದಾರರು ಈ ಕ್ಲಿಪ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಶೀರ್ಷಿಕೆಯಂತೆ ಮಂಗಳವಾರ ಈ ಘಟನೆ ನಡೆದಿದೆ. ವೀಡಿಯೊದಲ್ಲಿ ಟಿಕೆಟಿಂಗ್ ಕೌಂಟರ್ ಹಿಂದೆ ಕುಳಿತಿದ್ದ ವ್ಯಕ್ತಿಯೊಬ್ಬ ಹಣ ವಂಚನೆ ಮಾಡುತ್ತಿದ್ದಾನೆ. … Continued

ತಮಿಳುನಾಡು: ಆರ್‌ಎಸ್‌ಎಸ್‌ ಕಾರ್ಯಕರ್ತರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ಶನಿವಾರ  ಚೆನ್ನೈನ ತಾಂಬರಂ ಬಳಿ ಆರ್‌ಎಸ್‌ಎಸ್ ಪ್ರಮುಖರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚೆನ್ನೈ ಸಮೀಪದ ತಾಂಬರಂನ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಪ್ರಮುಖ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಾಂಬರಂ … Continued

ಗಣೇಶನ ಮಂಟಪದ ಎದುರು ಒಮ್ಮೆಗೇ ಕುಸಿದುಬಿದ್ದು ಮೃತಪಟ್ಟ ಡಾನ್ಸ್‌ ಮಾಡುತ್ತಿದ್ದ ಆಂಜನೇಯನ ವೇಷಧಾರಿ | ದೃಶ್ಯ ಸೆರೆ

ಮೈನ್‌ಪುರಿ: ಉತ್ತರಪ್ರದೇಶದ ಮೈನ್‌ಪುರಿ ಕೊಟ್ವಾಲಿ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರಾದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಪ್ರಕಟಿಸಿದ್ದಾರೆ. ಈ ಹಠಾತ್ ಸಾವಿನಿಂದ ಯುವಕನ ಕುಟುಂಬದ … Continued