ತಮಿಳುನಾಡಲ್ಲಿ ರಾಜಕೀಯ ಅನಿಶ್ಚಿತತೆ ಅಂತ್ಯ : ತಮಿಳುನಾಡು ಸಿಎಂ ಆಗಿ ವಿಜಯ ನಾಳೆ ಪ್ರಮಾಣವಚನ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾಗಿದ್ದ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ ಅವರು ಶನಿವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯಪಾಲರ ಅನುಮೋದನೆಯ ನಂತರ, ಭಾನುವಾರ (ಮೇ ೧೦) ಬೆಳಿಗ್ಗೆ 10 ಗಂಟೆಗೆ ವಿಜಯ ತಮಿಳುನಾಡಿನ ಮುಖ್ಯಮಂತ್ರಿಯಾಗಿ … Continued

ತಮಿಳುನಾಡು : ವಿಜಯ ನೇತೃತ್ವದ ಟಿವಿಕೆಗೆ ವಿಸಿಕೆ ಬೆಂಬಲ ; ಸರ್ಕಾರ ರಚನೆಗೆ ಹಾದಿ ಸುಗಮ

ಚೆನ್ನೈ : ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರ ‘ಸಂಖ್ಯಾಬಲದ ಆತಂಕ’ ಕೊನೆಗೂ ಮುಗಿದಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 118 ಆಗಿದ್ದು, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಮೈತ್ರಿಕೂಟವು ಈ ಮೊದಲು 116 ಸದಸ್ಯರ ಬಲ ಹೊಂದಿತ್ತು. ಈಗ ವಿಸಿಕೆ (VCK) … Continued

ವಿಡಿಯೋ | ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ: 30 ವರ್ಷಗಳ ಹಿಂದಿನ ಪ್ರಮೋದ ಮಹಾಜನ್ ಮಾರ್ಮಿಕ ಭಾಷಣ ಈಗ ಮತ್ತೆ ವೈರಲ್‌

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯವನ್ನು ಅತಂತ್ರ ಸ್ಥಿತಿಗೆ ತಳ್ಳಿರುವ ಬೆನ್ನಲ್ಲೇ, ಸುಮಾರು ಮೂರು ದಶಕಗಳ ಹಿಂದಿನ ಸಂಸತ್ತಿನ ರೋಚಕ ಪ್ರಸಂಗವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ, ಅಂದು ಬಿಜೆಪಿ ನಾಯಕ ಪ್ರಮೋದ ಮಹಾಜನ್ ಅವರು ಮೈತ್ರಿ ರಾಜಕೀಯದ ವಿಡಂಬನೆ ಮಾಡುತ್ತಾ ನೀಡಿದ್ದ ಭಾಷಣವು ಇಂದಿನ … Continued

ತಮಿಳುನಾಡಲ್ಲಿ ಮುಗಿಯದ ಗೊಂದಲ : ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದ್ರೆ ಟಿವಿಕೆಯ 107 ಶಾಸಕರಿಂದ ರಾಜೀನಾಮೆ..?!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ಹಿನ್ನೆಯಲ್ಲಿ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.  ಒಂದು ವೇಳೆ ಡಿಎಂಕೆ ಅಥವಾ ಎಐಎಡಿಎಂಕೆ ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ ತನ್ನೆಲ್ಲಾ 107 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ … Continued

ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ತಮಿಳು ಸೂಪರ್ ಸ್ಟಾರ್, ಟಿವಿಕೆ ಅಧ್ಯಕ್ಷ ವಿಜಯ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ

ಚೆನ್ನೈ: ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಧ್ಯಕ್ಷ ವಿಜಯ ಅವರ ದಾಂಪತ್ಯ ಜೀವನ ಅಂತ್ಯದ ಹಂತಕ್ಕೆ ಬಂದು ನಿಂತಿದೆ. ವಿಜಯ ಅವರ ಪತ್ನಿ ಸಂಗೀತ ಅವರು ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ ಮತ್ತು ಸಂಗೀತ ಅವರು ಜುಲೈ 10, 1998 ರಂದು ಯುನೈಟೆಡ್ … Continued

ತಮಿಳು ಸೂಪರ್‌ಸ್ಟಾರ್‌ ದಳಪತಿ ವಿಜಯ ರಾಜಕೀಯಕ್ಕೆ ಪದಾರ್ಪಣೆ : ಹೊಸ ʼರಾಜಕೀಯ ಪಕ್ಷʼ ಘೋಷಣೆ

ಚೆನ್ನೈ: ತಮಿಳು ನಟ ದಳಪತಿ ವಿಜಯ ಅವರು ಶುಕ್ರವಾರ ತಮ್ಮ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದು, ‘ತಮಿಳಗ ವೆಟ್ರಿ ಕಳಗಂ’ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ “ಮೂಲಭೂತ ರಾಜಕೀಯ ಬದಲಾವಣೆ” ಯ ಬದ್ಧತೆ ತಮ್ಮ ರಾಜಕೀಯ ಪಕ್ಷದ ಉದ್ದೇಶ ಎಂದು ಹೇಳಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ … Continued