ಸಿಎಂ ಕಾರ್ಯಕ್ರಮಕ್ಕಾಗಿ ಐತಿಹಾಸಿಕ ಹಂಪಿ ವಿರೂಪಾಕ್ಷ ದೇಗುಲದ ಕಂಬಕ್ಕೆ ಮೊಳೆ ಹೊಡೆದರು…!

ಹೊಸಪೇಟೆ: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಧ್ವಜ ಕಟ್ಟುವ ಸಲುವಾಗಿ ಹಂಪಿ ವಿರೂಪಾಕ್ಷ ದೇವಸ್ಥಾನದ ಕಲ್ಲಿನ ಕಂಬಕ್ಕೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕಂಬಕ್ಕೆ ಮೊಳೆ ಹೊಡೆಯಲು ಡ್ರಿಲ್ಲಿಂಗ್ ಮಷಿನ್ ಬಳಸಿರುವುದಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಈಗ ಕರ್ನಾಟಕ ದತ್ತಿ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ನೋಟಿಸ್ ನಲ್ಲಿ ಈ ಬಗ್ಗೆ ಕೂಡಲೇ … Continued

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ

ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ ಹಾಗೂ ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ … Continued

ಎರಡು ಆಟೋ-ಲಾರಿ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ವಿಜಯನಗರ : ಎರಡು ಆಟೋ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸಹ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ … Continued

ಹೊಸಪೇಟೆ: ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು, ಹಲವರು ಅಸ್ವಸ್ಥ

ಹೊಸಪೇಟೆ (ವಿಜಯನಗರ): ನಗರದಲ್ಲಿ ಕಲುಷಿತ ನೀರಿನ ಸೇವನೆಯಿಂದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಗರದ ರಾಣಿಪೇಟೆಯ 12ನೇ ಕ್ರಾಸ್‌ ನಿವಾಸಿ ಲಕ್ಷ್ಮಿದೇವಿ (50) ಮೃತ ಮಹಿಳೆಯಾಗಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಬಡಾವಣೆಯಲ್ಲಿ ಆರೋಗ್ಯ ಇಲಾಖೆಯವರು ಬೀಡು ಬಿಟ್ಟಿದ್ದು, ಜನರಿಗೆ ವಾಂತಿ, ಭೇದಿ ಪ್ರಕರಣಗಳು ನಿಲ್ಲುವ ಲಕ್ಷಣಗಳು … Continued

ಮೊಬೈಲ್ ಕೊಡಿಸಲಿಲ್ಲವೆಂದು ಸಾವಿನ ಹಾದಿ ಹಿಡಿದ ವಿದ್ಯಾರ್ಥಿ

ವಿಜಯನಗರ: ಮೊಬೈಲ್ ಕೊಡಿಸಿಲ್ಲ ಎಂದು ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ತೊಲಹಳ್ಳಿ ಎಂಬ ಊರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಡತನದ ಕಾರಣಕ್ಕೆ ಪೋಷಕರಿಗೆ ಮೊಬೈಲ್ ಕೊಡಿಸಲಾಗಿರಲಿಲ್ಲ. ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರದ ಕೊಟ್ಟೂರಿನ ಸನ್ನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ … Continued

ನೂತನ ವಿಜಯನಗರ ಜಿಲ್ಲೆಗೂ ೩೭೧ ಜೆ ಸೌಲಭ್ಯ:ಸರ್ಕಾರ ಆದೇಶ

ನೂತನ ವಿಜಯನಗರ ಜಿಲ್ಲೆಗೆ ಸಂವಿಧಾನದ 371 ಜೆ ವಿಧಿ ಅಡಿ ಎಲ್ಲ ಸವಲತ್ತು ಸಿಗುವಂತೆ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371 ಜೆ ವಿಧಿ ಅಡಿ ಸಿಗುವ ಸವಲತ್ತುಗಳು ನೂತನ ವಿಜಯನಗರ ಜಿಲ್ಲೆಗೂ ಸಿಗಲಿದೆ. ವಿಧಿಯಲ್ಲಿ ಹಲವು ತಿದ್ದುಪಡಿಗಳನ್ನೂ ರಾಜ್ಯ ಸರಕಾರ ಮಾಡಿದೆ. ಪ್ಯಾರಾ 2 (ಇ)ನಲ್ಲಿ ‘ಮತ್ತು … Continued