ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued

ಸತ್ಯವಂತರಿಗಿದು ಕಾಲವಲ್ಲ…ದುಷ್ಟರಿಗೆ ಸುಭಿಕ್ಷ ಕಾಲ… : ಪಕ್ಷದಿಂದ ತಮ್ಮ ಉಚ್ಚಾಟಿಸಿದ್ದಕ್ಕೆ ಬಿಜೆಪಿಗೆ ಮಾರ್ಮಿಕವಾಗಿ ತಿವಿದ ಯತ್ನಾಳ

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್‌ ನೀಡಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು … Continued

ಬೆಳಗಾವಿ | ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಂಬಿಎ ಪದವೀಧರೆ

ಬೆಳಗಾವಿ : ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ ಬೆಳಗಾವಿಗೆ ಬಂದು ನೆಹರು ನಗರದ ಪಿಜಿಯಲ್ಲಿ ವಾಸವಾಗಿದ್ದಳು. ಮೂರು ತಿಂಗಳಿಂದ ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದಳು. ಆತ್ಮಹತ್ಯೆಗೂ ಮುನ್ನ … Continued

“ಭೀಮಾತೀರ”ದ ಕುಖ್ಯಾತ ಬಾಗಪ್ಪ ಹರಿಜನ ಬರ್ಬರ ಹತ್ಯೆ

 ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸೋದರ ಸಂಬಂಧಿ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8:50 ರ ಸುಮಾರಿಗೆ ವಿಜಯಪುರದ ರೇಡಿಯೋ ಕೇಂದ್ರದ ಬಳಿ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ … Continued

ಮಕ್ಕಳನ್ನು ಕಾಲುವೆಗೆ ಎಸೆದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ ; ಮಕ್ಕಳು ನೀರು ಪಾಲು, ತಾಯಿ ಬಚಾವ್‌

ವಿಜಯಪುರ : ಕೌಟುಂಬಿಕ ಕಲಹದ ಕಾರಣದಿಂದ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಆಲಮಟ್ಟಿಯ ಬೇನಾಳ ಬ್ರಿಜ್ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ಮಕ್ಕಳು ಸಾವಿಗೀಡಾಗಿದ್ದು, ತಾಯಿ ಭಾಗ್ಯ ಅವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ ಎಂದು … Continued

ಕೊಲ್ಹಾರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಆರು ಮಂದಿ ತೆಪ್ಪದಲ್ಲಿ ನದಿ ಪಕ್ಕದ ನಡುಗಡ್ಡೆಗೆ ಹೋಗುತ್ತಿದ್ದಾಗ ಏಕಾಏಕಿ ತೆಪ್ಪ ಮಗುಚಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, … Continued

ವಿಜಯಪುರ ; ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಸಂಭವಿಸಿದ ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರದ ಅರ್ಜುನ ಕುಶಾಲ ಸಿಂಗ್ ರಜಪೂತ (32), ಮೇಘರಾಜ ಅರ್ಜುನ ಸಿಂಗ್ ರಜಪೂತ(12), ರವಿನಾಥ ಸುನಿಲಾಲ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ ( … Continued

ಕೃಷ್ಣಾ ನದಿಗೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ವಿಜಯಪುರ: ಯುಗಾದಿ ಅಮಾವಾಸ್ಯೆ ನಿಮಿತ್ತ ಸೋಮವಾರ ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನದಿ ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ಪಾಲಾದ ಬಾಲಕರನ್ನು ಕಾರಜೋಳ ಗ್ರಾಮದ ಸುದೀಪ ದೊಡ್ಡಮನಿ (12) ಹಾಗೂ ಶ್ರೀಧರ ದೊಡ್ಡಮನಿ (10) ಎಂದು ಗುರುತಿಸಲಾಗಿದೆ. ಯುಗಾದಿ ಅಮಾವಾಸ್ಯೆ … Continued

ಇಂಡಿ : ಯಶಸ್ವಿ ಕಾರ್ಯಾಚರಣೆ ; ಜೀವಂತವಾಗಿ ಹೊರಬಂದ ಬೋರ್‌ ವೆಲ್‌ ನಲ್ಲಿ ಬಿದ್ದಿದ್ದ 2 ವರ್ಷದ ಬಾಲಕ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಜೀವಂತವಾಗಿ ಹೊರ ತೆಗೆಯಲಾಗಿದೆ. ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಎರಡು ವರ್ಷದ ಸಾತ್ವಿಕ ಮುಜಗೊಂಡ ಎಂಬ ಮಗುವನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು … Continued