ಚಡಚಣ | ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಬರ್ಬರ ಹತ್ಯೆ

ವಿಜಯಪುರ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಘಟನೆ ಜಿಲ್ಲೆಯ ಚಡಚಣದ ಗೋವಿಂದಪುರದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದೆ. ಎರಡು ಕುಟುಂಬಗಳ … Continued

ವಿಜಯಪುರ | ಹಲವೆಡೆ ಕಂಪಿಸಿದ ಭೂಮಿ ; ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನ

ವಿಜಯಪುರ: ವಿಜಯಪುರ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭೂಕಂಪನ(Earthquake)ದ ಅನುಭವವಾಗಿದೆ ಎಂದು ವರದಿಯಾಗಿದೆ. ತಿಕೋಟ (Tikota) ತಾಲೂಕು ಹಾಗೂ ವಿಜಯಪುರ (Vijayapura) ತಾಲೂಕಿನ ಹಲವೆಡೆ ಶುಕ್ರವಾರ ರಾತ್ರಿ 10ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದರಿಂದ ಜನರು ಭಯಭೀತರಾಗಿ ಹೊರಗೆ ಓಡಿಬಂದಿದ್ದಾರೆ ಎಂದು ಹೇಳಲಾಗಿದೆ. ವಿಜಯಪುರ ಗ್ರಾಮೀಣ ಭಾಗದ 12 … Continued

ವಿಜಯಪುರ | ಎಸ್‌ಬಿಐ ಚಡಚಣ ಬ್ಯಾಂಕ್‌ ದರೋಡೆ ಪ್ರಕರಣ : ಪಾಳುಬಿದ್ದ ಮನೆ ಮೇಲ್ಛಾವಣಿಯಲ್ಲಿ 41 ಲಕ್ಷ ರೂ, 6 ಕೆಜಿ ಚಿನ್ನ ಪತ್ತೆ..!

ವಿಜಯಪುರ: ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ (SBI Robbery) ಪ್ರಕರಣದಲ್ಲಿ ದೋಚಿದ್ದ ಚಿನ್ನಾಭರಣ ಪತ್ತೆ ಹಚ್ಚುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ದರೋಡೆಗೆ ಬಳಿಸಿದ ವಾಹನದಲ್ಲೂ ಸ್ವಲ್ಪ ಹಣ, ಚಿನ್ನಾಭರಣ ಪತ್ತೆಯಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. … Continued

ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್​ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು … Continued

ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

ವಿಜಯಪುರ :  ಸಾದಿಕ್ ಅಲಿಯಾಸ್ ಟೈಲರ್ ರಾಜಾ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 27 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಶಂಕಿತನನ್ನು ಅಂತಿಮವಾಗಿ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ಜಂಟಿ ತಂಡವು ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಂಧಿಸಿದೆ. 58 ಜನರ ಸಾವು ಹಾಗೂ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ … Continued

ಮನಗೂಳಿ ಕೆನರಾ ಬ್ಯಾಂಕ್​ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ಅದೇ ಬ್ಯಾಂಕಿನಲ್ಲಿ ಮ್ಯಾನೇಜರ್​ ಆಗಿದ್ದವನೇ ಮಾಸ್ಟರ್‌ ಮೈಂಡ್‌; ಮೂವರ ಬಂಧನ

ವಿಜಯಪುರ: ಕಳೆದ ತಿಂಗಳು ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನಲ್ಲಿ ನಡೆದಿದ್ದ 53.26 ಕೋಟಿ ರೂ. ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನ ಲಾಕರ್​ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿಬಂಗಾರದ ಆಭರಣಗಳು ಹಾಗೂ … Continued

ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued

ಸತ್ಯವಂತರಿಗಿದು ಕಾಲವಲ್ಲ…ದುಷ್ಟರಿಗೆ ಸುಭಿಕ್ಷ ಕಾಲ… : ಪಕ್ಷದಿಂದ ತಮ್ಮ ಉಚ್ಚಾಟಿಸಿದ್ದಕ್ಕೆ ಬಿಜೆಪಿಗೆ ಮಾರ್ಮಿಕವಾಗಿ ತಿವಿದ ಯತ್ನಾಳ

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್‌ ನೀಡಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು … Continued

ಬೆಳಗಾವಿ | ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಂಬಿಎ ಪದವೀಧರೆ

ಬೆಳಗಾವಿ : ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ ಬೆಳಗಾವಿಗೆ ಬಂದು ನೆಹರು ನಗರದ ಪಿಜಿಯಲ್ಲಿ ವಾಸವಾಗಿದ್ದಳು. ಮೂರು ತಿಂಗಳಿಂದ ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದಳು. ಆತ್ಮಹತ್ಯೆಗೂ ಮುನ್ನ … Continued