ಮನ ಕಲಕುವ ವೀಡಿಯೊ | ಅಕಾಲಿಕ ಮಳೆಯಿಂದ ಕೊಚ್ಚಿ ಹೋಗುತ್ತಿದ್ದ ಧಾನ್ಯ ಉಳಿಸಲು ರೈತನ ಹತಾಶ ಪ್ರಯತ್ನ ; ನಂತರ ಕೇಂದ್ರ ಸಚಿವರಿಂದ ಕರೆ

ನವದೆಹಲಿ: ಮಹಾರಾಷ್ಟ್ರದ ರೈತನೊಬ್ಬ ತನ್ನ ಬೆಳೆಯನ್ನು ಭಾರೀ ಮಳೆಯಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಹತಾಶ ಪ್ರಯತ್ನ ನಡೆಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದಾಗಿ ರೈತರು ಅನುಭವಿಸುತ್ತಿರುವ ನಷ್ಟವನ್ನು ಈ ವೀಡಿಯೊ ಪ್ರತಿಬಿಂಬಿಸುತ್ತದೆ. ವೀಡಿಯೊದಲ್ಲಿರುವ ರೈತ ಗೌರವ ಪನ್ವಾರ್ ಮಹಾರಾಷ್ಟ್ರದ ವಾಶಿಮ್‌ನ ಮಾರುಕಟ್ಟೆಗೆ ತನ್ನ ಕಡಲೆಕಾಯಿ ಬೆಳೆಯನ್ನು ತಂದಿದ್ದರು. … Continued

ವೀಡಿಯೊ..| ಕಾಶ್ಮೀರ ; ಪುಲ್ವಾಮಾ ಎನ್ಕೌಂಟರಿನಲ್ಲಿ ಮೂವರು ಭಯೋತ್ಪಾದಕರ ಹತ್ಯೆ ; ಒಬ್ಬನ ಕೊನೆಯ ಕ್ಷಣ ಡ್ರೋನ್ ನಲ್ಲಿ ಸೆರೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತರಾದ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ … Continued

ಕೋಲ್ಕತ್ತಾ ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸ್ತೇನೆ ‘: ಬಾಂಗ್ಲಾದೇಶ ಮೂಲಭೂತವಾದಿಯಿಂದ ಹಿಂದೂಗಳ ವಿರುದ್ಧ ಬೆದರಿಕೆ ವೀಡಿಯೊ ವೈರಲ್‌

ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್‌’ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. … Continued

ವೀಡಿಯೊ | ಮೋದಿ ಹೆಸರು ಹೇಳಲು ಹೆದರುವ ರಣಹೇಡಿ..ಸೇನೆಗೆ ಇವ್ರೇನು ಸಂದೇಶ ಕೊಡ್ತಾರೆ ; ಪಾಕ್‌ ಪ್ರಧಾನಿಯನ್ನು ಜರೆದ ಸಂಸದ-ವೀಕ್ಷಿಸಿ

ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್‌ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ. “ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ … Continued

ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ-ವೀಕ್ಷಿಸಿ

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್‌ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued

ಕೂದಲು ಹಿಡಿದು ಜಗ್ಗಾಡಿ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಗ್ರಂಥಪಾಲಕಿ ; ವೀಡಿಯೊ ವೈರಲ್

ಪ್ರಾಂಶುಪಾಲರು ಮತ್ತು ಗ್ರಂಥಪಾಲಕರ ನಡುವೆ ವಾಗ್ವಾದದ ನಂತರ ಇಬ್ಬರ ಮಧ್ಯೆ ಹೊಡೆದಾಟಕ್ಕೆ ಕಾರಣವಾದ ಘಟನೆ ಮಧ್ಯಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ. ಅವರ ಜಗಳದ ವೀಡಿಯೊ ವೈರಲ್‌ ಆದ ನಂತರ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್‌ನಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿರುವ ಏಕಲವ್ಯ ಆದರ್ಶ ಶಾಲೆಯಲ್ಲಿ ಈ … Continued

ವೀಡಿಯೊ | ಭಾರತ ಪಾಕ್‌ ಮೇಲೆ ದಾಳಿ ಮಾಡಿದ್ರೆ ನೀವು ಭಾರತದ ಸೇನೆ ಬೆಂಬಲಿಸಿ ; ಪಾಕಿಸ್ತಾನ ಪಶ್ತೂನ್‌ ಮುಸ್ಲಿಮರಿಗೆ ಕರೆ ನೀಡಿದ ಧರ್ಮಗುರು..!

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಇಸ್ಲಾಮಿಕ್ ಧರ್ಮಗುರುವಿನ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಶ್ತೂನ್ ಸಮುದಾಯವು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಸಾವಿಗೀಡಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ … Continued

ಪಹಲ್ಗಾಮ್ ದಾಳಿ | ಭಾರತದ ಜತೆ ಯುದ್ಧಕ್ಕೆ ಪಾಕ್‌ ಸೈನಿಕರ ಹಿಂಜರಿಕೆ ವರದಿಯ ಮಧ್ಯೆ ಪಿಒಕೆಯಲ್ಲಿ ಸ್ಥಳೀಯರಿಗೆ ಗನ್‌ ತರಬೇತಿ ವೀಡಿಯೊ ವೈರಲ್‌

ನವದೆಹಲಿ: 26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಸಂಬಂಧಗಳು ಹದಗೆಡುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದು, ಭಾರತದದಾಳಿಯ ಭೀತಿ ಎದುರಿಸುತ್ತಿರುವ ಪಾಕಿಸ್ತಾನವು ತನ್ನ ರಕ್ಷಣೆ ಬಲಪಡಿಸಲು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸ್ಥಳೀಯರಿಗೆ ಪಾಕಿಸ್ತಾನಿ ಸೇನೆ … Continued

ವೀಡಿಯೊ…| ನಂಬಲಸಾಧ್ಯ : ಸ್ಕೂಟರ್ ತೆಗೆದುಕೊಂಡು ಜಾಲಿ ರೈಡ್ ಮಾಡಿದ ಬೃಹತ್‌ ಬೀದಿ ಗೂಳಿ…!

ಉತ್ತರಾಖಂಡದ ಋಷಿಕೇಶದಲ್ಲಿ ಬೀದಿ ಗೂಳಿಯೊಂದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ರೈಡ್‌ ಮಾಡಿಕೊಂಡು (ಎಳೆದುಕೊಂಡು) ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ನೋಡಿದವರಿಗೆ ನಗುವನ್ನು ತರಿಸಿತು. ಬಳಕೆದಾರರು ಆ ಪ್ರಾಣಿಯು ದ್ವಿಚಕ್ರ ವಾಹನವನ್ನು “ಟೆಸ್ಟ್‌ ರೈಡ್‌ʼ ಗೆ ಕೊಂಡೊಯ್ಯಲು ಬಯಸಿದೆ ಎಂದು ತಮಾಷೆ ಮಾಡಿದ್ದಾರೆ. ಗೂಳಿಯು ಸ್ಕೂಟರ್ … Continued

ವೀಡಿಯೊ | ಮಾರ್ಗ ಮಧ್ಯೆ ಪ್ರಯಾಣಿಕರಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ ; ತನಿಖೆಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದರ ಚಾಲಕನೊಬ್ಬ ರಸ್ತೆಬದಿಯಲ್ಲಿ ಪ್ರಯಾಣಿಕರಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದು, ಆತ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ ವಿಡಿಯೋ ವೈರಲ್‌ ಆದ ನಂತರ ತನಿಖೆಗೆ ಆದೇಶಿಸಲಾಗಿದೆ. ವೀಡಿಯೊದಲ್ಲಿ, ಬಸ್‌ ಚಾಲಕ ಆಸನದ ಮೇಲೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು, ಬಸ್ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ಸಂಚಾರ ದಟ್ಟಣೆಯಿಂದ ಕೂಡಿರುವುದನ್ನು ಹಾಗೂ ಬಸ್ಸಿನಲ್ಲಿದ್ದ … Continued