ವೀಡಿಯೊ..| ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿದ ಕೋಚಿಂಗ್ ಸೆಂಟರ್ ಸಂಸ್ಥಾಪಕ ; ವ್ಯಾಪಕ ಆಕ್ರೋಶ

ಆಂಧ್ರಪ್ರದೇಶದಲ್ಲಿ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಸಂಸ್ಥಾಪಕರೊಬ್ಬರು ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಕೆಲ ತಿಂಗಳ ಹಿಂದಿನ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕೋಚಿಂಗ್ ಇನ್‌ಸ್ಟಿಟ್ಯೂಟ್ ‘ಇಂಡಿಯನ್ ಆರ್ಮಿ ಕಾಲಿಂಗ್’ ಸಂಸ್ಥಾಪಕ ಬಸವ ವೆಂಕಟ ರಮಣ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಥಳಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ವಿದ್ಯಾರ್ಥಿಯು ಅಳುವುದು ಮತ್ತು ತನ್ನನ್ನು ತಾನು ರಕ್ಷಿಸಿಕೊಳ್ಳಲು ಒದ್ದಾಡುತ್ತಿರುವುದನ್ನು … Continued

ವೀಡಿಯೊ..| ಬರಿಗೈಯಲ್ಲಿ ಚಿರತೆಯ ಕುತ್ತಿಗೆ ಅಮುಕಿ ಹಿಡಿದ ಗುಂಪು ; ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ಷೇಪ

ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ಗ್ರಾಮಸ್ಥರ ಗುಂಪು ತಮ್ಮ ಕೈಗಳಿಂದಲೇ ಚಿರತೆ ಹಿಡಿದುಕೊಂಡಿರುವುದು ಕಂಡುಬಂದಿದೆ. ಉತ್ತರ ಪ್ರದೇಶದ ಮಹಾರಾಜಗಂಜ್‌ನ ಲಾಲ್‌ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ತಮ್ಮ ಪ್ರದೇಶದಲ್ಲಿ ಅವರೇ ಚಿರತೆ ಹಿಡಿದ ನಂತರ ಚಿರತೆಯ ಕುತ್ತಿಗೆಯನ್ನು ಕೆಲವರು ಬರಿ ಕೈಯಿಂದ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಆದರೆ ಚಿರತೆಯನ್ನು ನಿರ್ವಹಿಸಿದ ರೀತಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. … Continued

ವೀಡಿಯೊ..| ನಿಲ್ದಾಣದಲ್ಲಿ ಕುಳಿತಿದ್ದ ಪ್ರಯಾಣಿಕನ ಮೇಲೆ ಹರಿದ ಬಸ್‌ ; ಪವಾಡಸದೃಶ ರೀತಿಯಲ್ಲಿ ಪಾರಾದ ಪ್ರಯಾಣಿಕ…!

ಕೇರಳದ ಟರ್ಮಿನಲ್ ಬಸ್‌ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದಾಗ ಬಸ್ ಡಿಕ್ಕಿ ಹೊಡೆದರೂ ಯುವಕನೊಬ್ಬ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಡುಕ್ಕಿ ಜಿಲ್ಲೆಯ ಕುಮಲಿ ಮೂಲದ ವಿಷ್ಣು ಎಂದು ಗುರುತಿಸಲಾದ ವ್ಯಕ್ತಿ ಡಿಸೆಂಬರ್ 1 ರಂದು ಕಟ್ಟಪ್ಪನ ಹೊಸ ಬಸ್ ನಿಲ್ದಾಣ ಟರ್ಮಿನಲ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ವೀಡಿಯೋದಲ್ಲಿ, … Continued

ವೀಡಿಯೊ..| ಚಂಡಮಾರುತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ತಮಿಳುನಾಡು ಸಚಿವರ ಮೇಲೆ ಕೆಸರು ಎರಚಿದ ಜನರು…!

ಚೆನ್ನೈ: ಫೆಂಗಲ್ ಚಂಡಮಾರುತದ ನಂತರ “ಅಸಮರ್ಪಕ” ಪರಿಹಾರ ಕ್ರಮಗಳ ವಿರುದ್ಧ ಪ್ರತಿಭಟಿಸಿದ ಜನರು ವಿಲ್ಲುಪುರಂ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ತಮಿಳುನಾಡು ಕ್ಯಾಬಿನೆಟ್ ಸಚಿವ ಕೆ. ಪೊನ್ಮುಡಿ ಅವರ ಮೇಲೆ ಕೆಸರು ಎರಚಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ತಿರುಚಿರಾಪಳ್ಳಿ-ಚೆನ್ನೈ ರಸ್ತೆಯ ಇರುವೇಲ್ಪಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕೋಪಗೊಂಡ … Continued

ವೀಡಿಯೊ..| ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್‌ ಹಿಡಿದ ಗ್ಲೆನ್ ಫಿಲಿಪ್ಸ್ ; ‘ಕ್ರಿಕೆಟ್‌ ಸೂಪರ್‌ಮ್ಯಾನ್’ ಎಂದ ಅಭಿಮಾನಿಗಳು..!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್ ಎಲ್ಲರನ್ನೂ ಬೆರಗಾಗಿಸಿದೆ. ಕ್ರೈಸ್ಟ್ ಚರ್ಸ್​​ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪ್ರಥಮ ಇನಿಂಗ್ಸ್​​ನಲ್ಲಿ 348 ರನ್ ಕಲೆಹಾಕಿದೆ. ನಂತರ ಬ್ಯಾಟಿಂಗ್‌ಗೆ ಇಳಿದ … Continued

ವೀಡಿಯೊ..| ಮಂಡ್ಯ ; ಅಪರೂಪದ ವಿದ್ಯಮಾನ : ಮೂರು ಕರುಗಳಿಗೆ ಜನ್ಮ ನೀಡಿದ ಹಸು…!

ಮಂಡ್ಯ: ಸಾಮಾನ್ಯವಾಗಿ ಹಸುಗಳು ಒಂದು ಸಲಕ್ಕೆ ಒಂದೇ ಕರುವಿಗೆ ಜನ್ಮವನ್ನು ನೀಡುತ್ತವೆ. ಆದರೆ ಅಪರೂಪದ ವಿದ್ಯಮಾನದಲ್ಲಿ ಕೆಲವು ಕಡೆಗಳಲ್ಲಿ ಅವಳಿ ಕರುಗಳಿಗೆ ಜನ್ಮ ನೀಡಿದ ಉದಾಹರಣೆಗಳೂ ಇವೆ. ಆದರೆ ಹಸು ಮೂರು ಕರುಗಳಿಗೆ ಜನ್ಮ ನೀಡಿದ ವಿದ್ಯಮಾನ ಅಪರದಲ್ಲಿ ಅಪರೂಪದ ವಿದ್ಯಮಾನ ಎಂದೇ ಹೇಳಬಹುದು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ನಿವಾಸಿ ಕಂಠಿ … Continued

ವೀಡಿಯೊ..| ಪಾಕಿಸ್ತಾನ | ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು 25 ಅಡಿ ಎತ್ತರದ ಕಂಟೈನರ್‌ ನಿಂದ ಕೆಳಕ್ಕೆ ದೂಡಿದ ಸೇನೆ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆತಂಕಕಾರಿ ಘಟನೆಯೊಂದರಲ್ಲಿ ಭದ್ರತಾ ಪಡೆಗಳು ಪ್ರಾರ್ಥನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು 25 ಅಡಿ ಎತ್ತರದ ಸರಕು ಸಾಗಣೆ ಕಂಟೈನರ್‌ ನಿಂದ ವ್ಯಕ್ತಿಯೊಬ್ಬನನ್ನು ಕೆಳಕ್ಕೆ ತಳ್ಳಿವೆ. ತನ್ನ ಅಧಿಕಾರಾವಧಿಯಲ್ಲಿ 140 ಮಿಲಿಯನ್ ರೂಪಾಯಿಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ 2023 ರ ಆಗಸ್ಟ್‌ನಿಂದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು … Continued

ಗುಂಡ್ಲುಪೇಟೆ | ಆನೆ ಮರಿ ಬೇಟೆಗೆ ಹೊಂಚು ಹಾಕಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ : ವೀಡಿಯೊ ವೈರಲ್

ಚಾಮರಾಜನಗರ : ಆನೆಯ ಮರಿಯೊಂದರ ಬೇಟೆ ಮಾಡಲು ಹೊಂಚು ಹಾಕಿದ್ದ ಹುಲಿ ಮೇಲೆ ತಾಯಿ ಆನೆ ದಾಳಿಗೆ ಮುಂದಾದಾಗ ಹುಲಿರಾಯ ಅಲ್ಲಿಂದ ಕಾಲ್ಕಿತ್ತ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ. ಇದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಬಂಡೀಪುರ ಅಭಯಾರಣ್ಯ ಸಫಾರಿ ಜೋನ್ ನಲ್ಲಿ ತಾಯಿ ಆನೆ ತನ್ನ ಮರಿ ಜೊತೆಯಲ್ಲಿದ್ದ … Continued

ವೀಡಿಯೊ..| ಕಂಡಕಂಡವರಿಗೆ ತಿವಿದು ಗಾಯಗೊಳಿಸಿದ ಗೂಳಿ ; 15 ಜನರಿಗೆ ಗಾಯ : 3 ತಾಸು ಕಾರ್ಯಾಚರಣೆ ನಂತರ ಸೆರೆ…!

ನವದೆಹಲಿ : ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣದಲ್ಲಿ ಗೂಳಿಗೆ ಜನರು ಭಯಭೀತರಾಗಿದ್ದಾರೆ. ದಾರಿತಪ್ಪಿ ಬಂದ ಗೂಳಿಯೊಂದು ಜನರನ್ನು ಬೆನ್ನಟ್ಟುವುದು, ಕೊಂಬುಗಳಿಂದ ತಿವಿಯುವುದು ಮತ್ತು ಜನರನ್ನು ಎತ್ತಿ ಒಗೆಯುವುದನ್ನು ಮಾಡಿದೆ. ಈ ರೊಚ್ಚಿಗೆದ್ದ ಗೂಳಿ ಕಂಡವರನ್ನೆಲ್ಲ ತಿವಿದಿದ್ದು, ಸುಮಾರು 15 ಜನರನ್ನು ಗಂಭೀರವಾಗಿ ಗಾಯಗೊಳಿಸಿದೆ ಎಂದು ಹೇಳಲಾಗಿದೆ. ಜಲಾಲಾಬಾದ್ ಪಟ್ಟಣದಲ್ಲಿ, ದಟ್ಟಣೆಯ ಮಧ್ಯೆ ಗೂಳಿಯೊಂದು ವ್ಯಕ್ತಿಯನ್ನು ಹಿಂಬಾಲಿಸುತ್ತಿರುವುದು … Continued

ವೀಡಿಯೊ..| ಕುದುರೆ ಮೇಲೆ ಮೆರವಣಿಗೆಯಲ್ಲಿ ಹೊರಟಿದ್ದ ವರನ ಕೊರಳಲ್ಲಿದ್ದ ನೋಟಿನ ಹಾರ ಕದ್ದೊಯ್ದ ಮಿನಿಟ್ರಕ್‌ ಚಾಲಕ ; ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಮದುಮಗ..!

ಸಿನೆಮಾದಲ್ಲಿ ಮಾತ್ರ ಕಾಣಬಹುದಾದ ದೃಶ್ಯದಂತೆ  ಉತ್ತರ ಪ್ರದೇಶದ ಮೀರತ್‌ನಿಂದ ವರದಿಯಾದ ಘಟನೆಯೊಂದರಲ್ಲಿ ಕುದುರೆ ಮೇಲೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವರನೊಬ್ಬನಿಗೆ ಹಾಕಿದ್ದ ನೋಟುಗಳ ಮಾಲೆಯನ್ನು ದೋಚಿರುವ ಘಟನೆ ವರದಿಯಾಗಿದ್ದು, ನಂತರ ಮಿನಿಟ್ರಕ್‌ನಲ್ಲಿ ಸಾಗುತ್ತಿದ್ದ ಕಳ್ಳನನ್ನು ವರನೇ ಬೆನ್ನಟ್ಟಿ ಹಿಡಿದಿದ್ದಾನೆ…! ಇದರಿಂದ ಮದುವೆ ಮೆರವಣಿಗೆಯಲ್ಲಿ ಕೆಲ ಕಾಲ ಗೊಂದಲ ಉಂಟಾಗಿತ್ತು. ಉತ್ತರ ಪ್ರದೇಶದ ಮೀರತ್‌ನಲ್ಲಿ ವರನಿಗೆ ಹಾಕಿದ್ದ ನೋಟುಗಳ … Continued