ತಾಯಂದಿರ ದಿನದಂದು ಚುನಾವಣಾ ಸಮಾವೇಶದಲ್ಲಿ ಇಬ್ಬರಿಂದ ಅನಿರೀಕ್ಷಿತ ಉಡುಗೊರೆ ಪಡೆದ ಪ್ರಧಾನಿ ಮೋದಿ..| ವೀಕ್ಷಿಸಿ

ಭಾನುವಾರ ಬಂಗಾಳದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೃದಯ ತುಂಬಿ ಬರುವ ಕ್ಷಣವನ್ನು ಅನುಭವಿಸಿದರು. ಹೂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಸಭೆಯ ಮಧ್ಯದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ತಾಯಿ ದಿವಂಗತ ಹೀರಾಬೆನ್ ಮೋದಿ ಅವರ ಭಾವಚಿತ್ರಗಳನ್ನು ಹಿಡಿದಿರುವುದನ್ನು ಗಮನಿಸಿದರು. ಪ್ರಧಾನಿಯವರು ಅವರ ಪ್ರಯತ್ನವನ್ನು ಗುರುತಿಸಿದರು ಮತ್ತು ತಾಯಂದಿರ ದಿನವನ್ನು ಗುರುತಿಸುವ … Continued

ವೀಡಿಯೊಗಳು…| ದಿಗ್ಭ್ರಮೆಗೊಳಿಸುವ ಅಪರೂಪದ ವರ್ಣರಂಜಿತ ಬೆಳಕಿನ ಪ್ರದರ್ಶನಕ್ಕೆ ಕಾರಣವಾಯ್ತು ʼಪ್ರಬಲʼ ಸೌರ ಚಂಡಮಾರುತ : ವೀಕ್ಷಿಸಿ

‘ತೀವ್ರ’ ಸೌರ ಚಂಡಮಾರುತವು ಭೂಮಿಯನ್ನು ಅಪ್ಪಳಿಸಿದೆ. ಇದು ವಿದ್ಯುತ್‌ ಮತ್ತು ದೂರ ಸಂಪರ್ಕಗಳಿಗೆ ಅಡ್ಡಿಪಡಿಸುವ ಬಗ್ಗೆ ಆತಂಕ ಎದುರಾಗಿದೆ. ಅಸಾಧಾರಣವಾಗಿ ಪ್ರಬಲವಾದ ಸೌರ ಚಂಡಮಾರುತವು ಟ್ಯಾಸ್ಮೆನಿಯಾದಿಂದ ಬ್ರಿಟನ್ ಮತ್ತು ಕೆನಡಾದಿಂದ ಅಮೆರಿಕದ ವರೆಗೆ ಆಕಾಶದಲ್ಲಿ ಅದ್ಭುತವಾದ ಬೆಳಕಿನ ಪ್ರದರ್ಶನಗಳನ್ನು ಮಾಡಿದೆ. ಎರಡು ದಶಕಗಳಿಗಿಂತಲೂ ಹೆಚ್ಚು ಕಾಲದ ಅತ್ಯಂತ ಶಕ್ತಿಶಾಲಿ ಸೌರ ಚಂಡಮಾರುತವು ಭೂಮಿಗೆ ಅಪ್ಪಳಿಸಿದ ನಂತರ … Continued

ವೀಡಿಯೊ..| ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲರ ಹೃದಯಗೆದ್ದ ವಿಶೇಷಚೇತನ ಸಮಾಜ ಸೇವಕ ಬೆಂಗಳೂರಿನ ಡಾ.ರಾಜಣ್ಣ ; ವೀಡಿಯೊ ಭಾರೀ ವೈರಲ್‌

ನವದೆಹಲಿ: ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ವಿಶೇಷಚೇತನ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಭಾರೀ ಕರತಾಡನದ ಮಧ್ಯೆ ಅವರು ಪ್ರಶ್ತಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು … Continued

ವೀಡಿಯೊ..| ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಯುವತಿಯರ ರಂಪಾಟ, ಪೊಲೀಸರೊಂದಿಗೆ ಜಗಳ : ಮೂವರ ಬಂಧನ

ಮುಂಬೈ: ಕುಡಿದ ಅಮಲಿನಲ್ಲಿ ರಸ್ತೆಯಲ್ಲಿ ಗಲಾಟೆ ಮಾಡಿದ ಮೂವರು ಮಹಿಳೆಯರ ವಿರುದ್ಧ ಮಹಾರಾಷ್ಟ್ರದ ನಗರವೊಂದರಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಮಹಾರಾಷ್ಟ್ರದ ವಿರಾರ್ ನಗರದಲ್ಲಿ ವರದಿಯಾಗಿದೆ.ೀ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಮಹಿಳೆಯರು ಅಲ್ಲಿನ ಬಾರ್‌ನಿಂದ ಹೊರಬಂದ ನಂತರ ಗಲಾಟೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅರ್ನಾಳ ಸಾಗರ … Continued

ವೀಡಿಯೊ…| ಹುಲಿ-ಕರಡಿ ಮಧ್ಯೆ “ಅಪರೂಪದ” ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

ಪಿಲಿಭಿತ್(ಉತ್ತರ ಪ್ರದೇಶ) : ಕರಡಿಯೊಂದು ಹುಲಿಯೊಂದಿಗೆ ಮುಖಾಮುಖಿಯಾದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಡಾ. ರವಿ ಗುಪ್ತಾ ಅವರು ಹಂಚಿಕೊಂಡಿರುವ ವೀಡಿಯೊವು ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮತ್ತು ಕರಡಿ ಪರಸ್ಪರ ಎದುರಾದ”ಅಪರೂಪದ” ದೃಶ್ಯಗಳನ್ನು ಸೆರೆಹಿಡಿದಿದೆ. ವೀಡಿಯೊದಲ್ಲಿ, ಸಫಾರಿ ಜೀಪ್‌ಗಳಲ್ಲಿ ಪ್ರವಾಸಿಗರು … Continued

ವೀಡಿಯೊ…| ಇಂಟರ್ನೆಟ್ ನಲ್ಲಿ ಭಾರೀ ಗಮನ ಸೆಳೆದ ರೋಬೋಟ್ ನಾಯಿ ಡ್ಯಾನ್ಸ್‌ ಮಾಡುವ ವೀಡಿಯೊ

ಅಮೆರಿಕ ಮೂಲದ ರೊಬೊಟಿಕ್ಸ್ ಕಂಪನಿಯೊಂದು ಬಿಡುಗಡೆ ಮಾಡಿರುವ ರೋಬೋಟ್ ಶ್ವಾನದ ವೀಡಿಯೋ ಅಂತರ್ಜಾಲದಲ್ಲಿ ಭಾರೀ ಗಮನ ಸೆಳೆದಿದೆ. ವೀಡಿಯೊ ಕ್ಲಿಪ್ ಬೋಸ್ಟನ್ ಡೈನಾಮಿಕ್ಸ್ ರಚಿಸಿದ ಸ್ಪಾರ್ಕಲ್ಸ್ ಎಂಬ ರೋಬೋಟ್ ನಾಯಿಯನ್ನು ತೋರಿಸುತ್ತದೆ. ಇದು ಸ್ಪಾಟ್ ಹೆಸರಿನ ಮತ್ತೊಂದು ಯಂತ್ರದೊಂದಿಗೆ ನೃತ್ಯ ಮಾಡುತ್ತಿದೆ. ಈ ವೀಡಿಯೊವನ್ನು ಅಂತಾರಾಷ್ಟ್ರೀಯ ನೃತ್ಯ ದಿನದಂದು ಬಿಡುಗಡೆ ಮಾಡಲಾಯಿತು. ಬೋಸ್ಟನ್ ಡೈನಾಮಿಕ್ಸ್ ಕಂಪನಿಯು … Continued

ವೀಡಿಯೊ…| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

ಲಕ್ನೋ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಫೇಶಿಯಲ್ ಮಾಡಿಸಿಕೊಂಡ ಶಿಕ್ಷಕಿಯೊಬ್ಬರಿಗೆ ಮುಖ್ಯಾಧ್ಯಾಪಕಿಯೊಬ್ಬರು ಕಚ್ಚಿದ ಘಟನೆಯ ಹಸಿಯಾಗಿರುವಾಗಲೇ ಶಾಲೆಗೆ ತಡವಾಗಿ ಬಂದ ಆರೋಪದ ಮೇಲೆ ಪ್ರಾಂಶುಪಾಲರೊಬ್ಬರು ಶಿಕ್ಷಕಿಯೊಬ್ಬರಿಗೆ ಥಳಿಸಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗ್ರಾದ ಸೀಗಾನಾ ಗ್ರಾಮದ ಪೂರ್ವ-ಪ್ರೌಢಶಾಲೆಯ ಪ್ರಾಂಶುಪಾಲೆಯು ಶಿಕ್ಷಕಿ ಮೇಲೆ ಹಲ್ಲೆ ನದಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಹೊಡೆದಾಟದ ಸಮಯದಲ್ಲಿ ತನ್ನ ಬಟ್ಟೆಗಳನ್ನು … Continued

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ…!?

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಆಗುತ್ತಿದೆ. ಪ್ರಜ್ವಲ್​​ ರೇವಣ್ಣ ಅವರ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಎರಡು … Continued

ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ವೀಡಿಯೊ…| ಒಂದೇ ದಿನ ಸ್ವತಂತ್ರವಾದೆವು ; ನಾವೀಗ ಭಿಕ್ಷೆ ಬೇಡುತ್ತಿದ್ದೇವೆ…ಆದರೆ ಭಾರತ…: ಪಾಕಿಸ್ತಾನ ನಾಯಕನ ಹೇಳಿಕೆ ವೈರಲ್‌…

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ಥಾನಗಳೆರಡೂ ಒಂದೇ ದಿನ ಸ್ವತಂತ್ರವಾದವು. ಆದರೆ ಇಂದು ಭಾರತ ಸೂಪರ್‌ ಪವರ್‌ ಆಗಲು ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ಹೊರಬರಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ಥಾನದ ಧರ್ಮ ಗುರು, ಜೆಯುಐ-ಎಫ್ ಸಂಸದ ಮೌಲಾನಾ ಫ‌ಜ್ಲುರ್‌ ರೆಹಮಾನ್‌ ಹೇಳಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. … Continued