ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ಹಾನಿಯಾದ ತೂಗು ಸೇತುವೆ ಮೇಲೆ ಭೋರ್ಗರೆವ ನದಿ ದಾಟಲು ಹುಚ್ಚು ಸಾಹಸ ಮಾಡಿದ ವ್ಯಕ್ತಿ : ಮೈ ಜುಂ ಎನ್ನುವ ದೃಶ್ಯದ ವೀಡಿಯೊ ವೈರಲ್‌

ಪ್ರವಾಹದಿಂದ ತತ್ತರಿಸಿದ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಭಾರೀ ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಾನೆ. ಈ ತನ ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಉಕ್ಕೇರಿದ ನದಿಯನ್ನು ದಾಟಿರುವ ವೀಡಿಯೊ ದೃಶ್ಯಾವಳಿ ಹೊರಹೊಮ್ಮಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X … Continued

ವೀಡಿಯೊ | ಬೆಂಗಳೂರು : ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಬಿಹಾರದ ಮಹಿಳೆ ಬಂಧನ ; ಪ್ರಕರಣ ದಾಖಲಾದ ನಂತ್ರ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚನೆ..!

ಬೆಂಗಳೂರು: ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಭಾನುವಾರ ಬಂಧಿಸಲಾಗಿದೆ. ಚಾಲಕ ಲೋಕೇಶ ಎಂಬವರಿಗೆ ಚಪ್ಪಲಿಯಿಂದ ಹೊಡೆಯುವವೀಡಿಯೊ ವೈರಲ್ ಆದ ನಂತರ ಪಂಖುರಿ ಮಿಶ್ರಾ (28) ಎಂಬ ಮಹಿಳೆಯನ್ನು ಬಂಧಿಸಲಾಯಿತು. ಈಗ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಳ್ಳಂದೂರು ನಿವಾಸಿ ಪಂಖುರಿ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಶನಿವಾರ … Continued

ಅಪರೂಪದ ಫುಟ್ಬಾಲ್‌ ಪಂದ್ಯ | ಪರಿಣತರಂತೆ ಹುಡುಗನೊಂದಿಗೆ ಫುಟ್ಬಾಲ್ ಆಡುವ ಕಾಗೆ ; ಬೆರಗಾದ ಇಂಟರ್ನೆಟ್‌-ವೀಡಿಯೊ ವೀಕ್ಷಿಸಿ

ಕಾಗೆಯೊಂದು, ತನ್ನ ಕೊಕ್ಕನ್ನು ಬಳಸಿ ಚೆಂಡನ್ನು ಹಿಂದಕ್ಕೆ ಮತ್ತು ಮುಂದಕ್ಕೆ ಕಳುಹಿಸುತ್ತಾ ಹುಡುಗನೊಟ್ಟಿಗೆ ಫುಟ್ಬಾಲ್ ಆಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಂಚಲನ ಮೂಡಿಸಿದೆ.ದಕ್ಷಿಣ ಗೋವಾದಲ್ಲಿ ಕಾಗೆಯು ಹುಡುಗನ ಜೊತೆ ಸಣ್ಣ ಚೆಂಡಿನಲ್ಲಿ ಫುಟ್ಬಾಲ್ ಆಡುವ ಹೃದಯಸ್ಪರ್ಶಿ ವೀಡಿಯೊ ಪ್ರಸ್ತುತ ಇಂಟರ್ನೆಟ್‌ ಅನ್ನು ಬೆರಗಾಗಿಸಿದೆ. ಈ ಪಂದ್ಯವನ್ನು ಅತ್ಯಂತ ಮುದ್ದಾದ ಪಂದ್ಯ ಹಾಗೂ ಅಪರೂಪದಲ್ಲಿ ಅಪರೂಪದ ಪಂದ್ಯ ಎಂದು … Continued

ವೀಡಿಯೊಗಳು | ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿಗೆ ಶಾಕ್‌ ; ಸಫಾರಿ ಜೀಪನ್ನು ಎತ್ತಿ ಒಗೆಯಲು ಪ್ರಯತ್ನಿಸಿದ ಖಡ್ಗಮೃಗ-ವೀಕ್ಷಿಸಿ

ದಿಸ್ಪುರ್‌: ಇತ್ತೀಚೆಗೆ ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದ ಮೇಲೆ ಖಡ್ಗಮೃಗ (Rhinoceros) ದಾಳಿಗೆ ಮುಂದಾಗಿದ್ದು, ಅದು ಸಫಾರಿ ಜೀಪನ್ನೇ ಎತ್ತಿದೆ. ಈ ಘಟನೆಯಿಂದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ಆದ ವೀಡಿಯೊದಲ್ಲಿ ಖಡ್ಗಮೃಗವು ಜೀಪ್ ನಿಲ್ಲಿಸಿದ್ದ ರಸ್ತೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಅಲ್ಲದೆ, … Continued

ವೀಡಿಯೊ | ಬುದ್ಧಿವಂತಿಕೆಯಿಂದ ವಿದ್ಯುತ್ ತಂತಿ ಬೇಲಿ ದಾಟಿದ ಆನೆ : ‘ಇದು ಮುಂದಿನ ಹಂತದ ಬುದ್ಧಿಮತ್ತೆ’ ಎಂದ ಇಂಟರ್ನೆಟ್‌-ವೀಕ್ಷಿಸಿ

ಪ್ರಾಣಿಗಳು ತಮ್ಮ ಸಹಜ ಬುದ್ಧಿಮತ್ತೆಯಿಂದ ನಮ್ಮನ್ನು ವಿಸ್ಮಯಗೊಳಿಸುತ್ತಲೇ ಇವೆ, ಮತ್ತು ಅಂತಹ ಒಂದು ಬುದ್ಧಿವಂತಿಕೆಯ ಪ್ರಸ್ತುತಿಯಲ್ಲಿ ಆನೆಯೊಂದು ಸುರಕ್ಷಿತವಾಗಿ ವಿದ್ಯುತ್ ಬೇಲಿಯನ್ನು ಚತುರವಾಗಿ ದಾಟುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ಈ ಕ್ಲಿಪ್ ಅನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು X ನಲ್ಲಿ ಹಂಚಿಕೊಂಡಿದ್ದಾರೆ. ಈ ಆನೆ ಭೌತಶಾಸ್ತ್ರದಲ್ಲಿ ಪ್ರವೀಣ. … Continued

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಗೆ ಪತ್ನಿ ಕಪಾಳಮೋಕ್ಷ ಮಾಡಿದರೆ ? ವೀಡಿಯೊ ವೈರಲ್‌

ವಿಯೆಟ್ನಾಂನಲ್ಲಿ ವಿಮಾನದಿಂದ ಇಳಿಯುವ ಮೊದಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಪತ್ನಿ ಬ್ರಿಗಿಟ್ ಅವರು ಮ್ಯಾಕ್ರನ್‌ ಕೆನ್ನೆಗೆ ಬಾರಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮ್ಯಾಕ್ರನ್ ತಮ್ಮ ಆಗ್ನೇಯ ಏಷ್ಯಾ ಪ್ರವಾಸವನ್ನು ಪ್ರಾರಂಭಿಸಲು ಭಾನುವಾರ ಸಂಜೆ ಹನೋಯ್‌ಗೆ ಬಂದಿಳಿದರು. ಆದಾಗ್ಯೂ, ಅವರು ಬಂದಿಳಿದಾಗ ದಂಪತಿ ನಡುವಿನ ‘ಜಗಳ’ದ ತರಹದ ವೀಡಿಯೊ ಹೊರಹೊಮ್ಮಿತು. ದಂಪತಿ … Continued

ಬೆಚ್ಚಿಬೀಳಿಸುವ ವೀಡಿಯೊ…| ಮಲಗಿದ್ದ ವ್ಯಕ್ತಿಯ ಮೈಮೇಲೆ ಹರಿದಹೋದ ಬೃಹತ್‌ ಕಾಳಿಂಗ ಸರ್ಪ; ಆದ್ರೂ ಆತ ಶಾಂತವಾಗಿ ಮಲಗಿದ್ದ…!

ಡೆಹ್ರಡೂನ್‍: ಹಾವೆಂದರೆ ಸಾಕು ಎಲ್ಲರೂ ಬೆಚ್ಚಿಬೀಳುತ್ತಾರೆ. ಅಂಥದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ತನ್ನ ಮೇಲೆ ಬೃಹತ್‌ ಕಾಳಿಂಗ ಸರ್ಪ ಹರಿದು ಹೋದರೂ ತಲೆಕೆಡಿಸಿಕೊಳ್ಳದೆ ಶಾಂತವಾಗಿ ಮಲಗಿರುವ ವೀಡಿಯೊವೊಂದು ವೈರಲ್‌ ಆಗಿದೆ. ಹಾಸಿಗೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಎಚ್ಚರದಲ್ಲಿದ್ದಾಗಲೇ ಆತನ ಮೈಮೇಲೆ ಕಾಳಿಂಗ ಸರ್ಪ (King Cobra) ತೆವಳಿಕೊಂಡು ಹೋಗಿದೆ. ಮೈ ಮೇಲೆ ಹಾವು ಹರಿಯುತ್ತಿರುವುದು ಆತನಿಗೆ ಗೊತ್ತಿದ್ದರೂ … Continued

ತಿರುಪತಿ ದೇವಸ್ಥಾನದ ಆವರಣದಲ್ಲಿ ನಮಾಜ್ ; ಭುಗಿಲೆದ್ದ ವಿವಾದ

ಹೈದರಾಬಾದ್: ಗುರುವಾರ ತಿರುಪತಿಯ ತಿರುಮಲದ ದೇವಸ್ಥಾನದ ಆವರಣದ ಬಳಿ ತಿರುಮಲ ಕಲ್ಯಾಣ ಮಂಟಪದ ಸಮೀಪ ವ್ಯಕ್ತಿಯೊಬ್ಬ ಹಜರತ್ ಕ್ಯಾಪ್ ಧರಿಸಿ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆದ ನಂತರ ವಿವಾದ ಭುಗಿಲೆದ್ದಿದೆ. ಈ ಘಟನೆ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊದಲ್ಲಿ ಆ ವ್ಯಕ್ತಿ ಹಜರತ್ ಕ್ಯಾಪ್ ಧರಿಸಿ ನಮಾಜ್ ಮಾಡುತ್ತಿರುವುದನ್ನು ತೋರಿಸಲಾಗಿದೆ. ಸ್ಥಳದಲ್ಲಿ … Continued

ಮನ ಕಲಕುವ ವೀಡಿಯೊ | ಅಕಾಲಿಕ ಮಳೆಯಿಂದ ಕೊಚ್ಚಿ ಹೋಗುತ್ತಿದ್ದ ಧಾನ್ಯ ಉಳಿಸಲು ರೈತನ ಹತಾಶ ಪ್ರಯತ್ನ ; ನಂತರ ಕೇಂದ್ರ ಸಚಿವರಿಂದ ಕರೆ

ನವದೆಹಲಿ: ಮಹಾರಾಷ್ಟ್ರದ ರೈತನೊಬ್ಬ ತನ್ನ ಬೆಳೆಯನ್ನು ಭಾರೀ ಮಳೆಯಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಹತಾಶ ಪ್ರಯತ್ನ ನಡೆಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದಾಗಿ ರೈತರು ಅನುಭವಿಸುತ್ತಿರುವ ನಷ್ಟವನ್ನು ಈ ವೀಡಿಯೊ ಪ್ರತಿಬಿಂಬಿಸುತ್ತದೆ. ವೀಡಿಯೊದಲ್ಲಿರುವ ರೈತ ಗೌರವ ಪನ್ವಾರ್ ಮಹಾರಾಷ್ಟ್ರದ ವಾಶಿಮ್‌ನ ಮಾರುಕಟ್ಟೆಗೆ ತನ್ನ ಕಡಲೆಕಾಯಿ ಬೆಳೆಯನ್ನು ತಂದಿದ್ದರು. … Continued