ಇರಾನ್ ಧ್ವಜದ ಹಡಗಿನ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದ ಅಮೆರಿಕ ಪಡೆ : ದೃಶ್ಯ ವಿಡಿಯೋದಲ್ಲಿ ಸೆರೆ

ವಾಷಿಂಗ್ಟನ್/ದುಬೈ: ಉತ್ತರ ಅರಬ್ಬಿ ಸಮುದ್ರದಲ್ಲಿ ಇರಾನ್ ಧ್ವಜದ ಸರಕು ಹಡಗನ್ನು ಅಮೆರಿಕದ ಪಡೆಗಳು ತಮ್ಮ ನಿಯಂತ್ರಣಕ್ಕೆ ಪಡೆದಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ದೃಢಪಡಿಸಿದೆ. ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು ಮೀರಿ ಇರಾನ್‌ನ ಪೋರ್ಟ್‌ ಅಬ್ಬಾಸ್ ಬಂದರಿನತ್ತ ಸಾಗುತ್ತಿದ್ದ ‘M/V ಟೌಸ್ಕಾ’ (M/V Touska) ಎಂಬ ಬೃಹತ್ ಹಡಗನ್ನು ಅಮೆರಿಕದ ಕ್ಷಿಪಣಿ ವಿಧ್ವಂಸಕ ನೌಕೆ … Continued

ಸೊಳ್ಳೆ ಪರದೆಯೊಳಗೆ ಕುಳಿತು ರಾತ್ರಿ ಕಾವಲು : ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾದ ಭದ್ರತಾ ಸಿಬ್ಬಂದಿ ವೈರಲ್‌ ವಿಡಿಯೋ

ಹೈದರಾಬಾದ್‌ನಿಂದ ಬಂದಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಸತಿ ಸಮುಚ್ಚಯಗಳಲ್ಲಿ (Residential Societies) ಕೆಲಸ ಮಾಡುವ ಭದ್ರತಾ ಸಿಬ್ಬಂದಿ ಎದುರಿಸುತ್ತಿರುವ ಕಠಿಣ ಪರಿಸ್ಥಿತಿಯನ್ನು ಈ ವಿಡಿಯೋ ಎತ್ತಿ ತೋರಿಸುತ್ತಿದೆ. ಸೂರಜಕುಮಾರ ಬೌದ್ಧ ಎಂಬವರು ‘X’ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, ರಾತ್ರಿ ಪಾಳಿಯಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳ ಕಾಟದಿಂದ ತಪ್ಪಿಸಿಕೊಳ್ಳಲು ಸೊಳ್ಳೆ … Continued

ವಿಡಿಯೊ | ಸಭೆಯ ನಡುವೆಯೇ ಎಂಟ್ರಿ ಕೊಟ್ಟು ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕುಳಿತ ಮಂಗ

ಉತ್ತರ ಪ್ರದೇಶದ  ಬಾಗಪತ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಪರೂಪದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಧಿಕಾರಿಯೊಬ್ಬರ ಪ್ರಾಣಿ ಪ್ರೇಮ ಮತ್ತು ಶಾಂತ ಸ್ವಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಗಪತ್ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ‘ರೈತರ ದಿನಾಚರಣೆ’ ಅಂಗವಾಗಿ ಜಿಲ್ಲಾಧಿಕಾರಿಗಳು ಹಾಗೂ ರೈತರ ನಡುವೆ ಮಹತ್ವದ ಸಭೆ ನಡೆಯುತ್ತಿತ್ತು. ಜಿಲ್ಲಾಧಿಕಾರಿ ಅಸ್ಮಿತಾ ಲಾಲ್ ಮತ್ತು … Continued

ವಿಡಿಯೋ |ಮೈಸೂರು : ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತಿದ್ದ ಚಿರತೆ, ಧೈರ್ಯ ತೋರಿ ಮಂಚದ ಮೇಲಿದ್ದ ಅತ್ತೆ ಹೊರತಂದ ಸೊಸೆ

ಮೈಸೂರು : ಚಿರತೆಯೊಂದು ಮನೆಯೊಳಗೆ ನುಗ್ಗಿ ಬೆಡ್‌ರೂಂ ಸೇರಿಕೊಂಡು ಮಂಚದ ಕೆಳಗೆ ಅಡಗಿದ ವಿದ್ಯಮಾನ ಮೈಸೂರು ನಗರದ ಸಿದ್ದಾರ್ಥ ನಗರದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸುಮಾರು 4 ವರ್ಷದ ಈ ಚಿರತೆಯನ್ನು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ (Leopard Task Force) ಯಶಸ್ವಿಯಾಗಿ ಸೆರೆಹಿಡಿಯುವ ಮೂಲಕ ದೊಡ್ಡ ಅನಾಹುತವೊಂದು ತಪ್ಪಿದೆ. ಮೈಸೂರು ನಗರದ ಸಿದ್ಧಾರ್ಥ … Continued

ವಿಡಿಯೋ | ಐಪಿಎಲ್ ಇತಿಹಾಸದಲ್ಲೇ ಶ್ರೇಷ್ಠ ಕ್ಯಾಚ್ ? ದಿಗ್ಗಜರನ್ನೇ ಬೆಚ್ಚಿಬೀಳಿಸಿದ ಅಯ್ಯರ್-ಬಾರ್ಟ್ಲೆಟ್ ಜುಗಲ್ಬಂದಿ ಕ್ಯಾಚ್‌

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಅದ್ಭುತ ಫೀಲ್ಡಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಮಾತ್ರವಲ್ಲದೆ, ಡಗೌಟ್‌ನಲ್ಲಿದ್ದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ ಯಾದವ್ ಕೂಡ ಅಯ್ಯರ್ ಸಾಹಸಕ್ಕೆ ದಂಗಾಗಿದ್ದಾರೆ. ಮುಂಬೈ ಇನ್ನಿಂಗ್ಸ್‌ನ 18ನೇ ಓವರ್‌ನಲ್ಲಿ … Continued

ವಿಡಿಯೋ | ಹಂದಿಗಳನ್ನು ಓಡಿಸಲು ಬಂತು ರೋಬೋಟ್ ; ಕಾಡುಹಂದಿಗಳನ್ನು ಬೆನ್ನಟ್ಟಿ ಓಡಿಸಿದ ಮಾನವರೂಪಿ ರೋಬೋಟ್…!

ಹ್ಯೂಮನಾಯ್ಡ್ ರೋಬೋಟ್‌ಗಳು ಇನ್ನೂ ನಮ್ಮ ಮನೆಯ ಕೆಲಸಗಳನ್ನು ಮಾಡಲು ಸಂಪೂರ್ಣವಾಗಿ ಸಿದ್ಧವಾಗಿಲ್ಲದಿರಬಹುದು, ಆದರೆ ಮನರಂಜನಾ ಕ್ಷೇತ್ರದಲ್ಲಿ ಮಾತ್ರ ಅವು ಅಬ್ಬರಿಸುತ್ತಿವೆ. ಮಾರ್ಷಲ್ ಆರ್ಟ್ಸ್ ಸಾಹಸಗಳಿರಲಿ ಅಥವಾ ಟೆನಿಸ್ ಅಂಕಣದಲ್ಲಿನ ಆಟವಿರಲಿ, ಈ ಮಾನವ ರೂಪದ ರೋಬೋಟ್‌ಗಳು ದಿನದಿಂದ ದಿನಕ್ಕೆ ಪ್ರಗತಿ ಸಾಧಿಸುತ್ತಿವೆ. ಈಗ ಪೋಲೆಂಡ್‌ನ ವಾರ್ಸಾದಲ್ಲಿ ಕಂಡುಬಂದ ವಿಚಿತ್ರ ಸನ್ನಿವೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು … Continued

ವಿಡಿಯೋ | ಬೆಂಗಳೂರು : ಬೆಕ್ಕು ಗರ್ಭಿಣಿಯಾದ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ರಂಪಾಟ ;’ವಿಚಿತ್ರ’ ಜಗಳಕ್ಕೆ ಪೊಲೀಸರೇ ಸುಸ್ತು..!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯವರ ನಡುವೆ ಜಗಳವಾಗುವುದು ಸಾಮಾನ್ಯ. ಆದರೆ, ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಕಳೆದ ವಾರ ನಡೆದ ಘಟನೆ ಮಾತ್ರ ತೀರಾ ವಿಭಿನ್ನವಾಗಿದೆ. ಬೆಕ್ಕಿನ ಮರಿಗಳ ವಿಚಾರವಾಗಿ ಆರಂಭವಾದ ಜಗಳವೊಂದು ಬೀದಿ ರಂಪಾಟಕ್ಕೆ ಕಾರಣವಾಗಿ, ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾದ ಪ್ರಸಂಗ ನಡೆದಿದೆ ಎಂದು ವರದಿಯಾಗಿದೆ. ಈ ವಿವಾದದ ಮೂಲವೇ ವಿಚಿತ್ರವಾಗಿತ್ತು. ಮಹಿಳೆಯೊಬ್ಬರು ತನ್ನ … Continued

ಸಾವಿನ ದವಡೆಯಿಂದ ಸಿಂಹದ ರಕ್ಷಣೆ ಬಾವಿಗೆ ಬಿದ್ದಿದ್ದ ಮೃಗ ರಾಜನ ರಕ್ಷಣಾ ಕಾರ್ಯಾಚರಣೆ ವಿಡಿಯೋ ವೈರಲ್

ಗುಜರಾತಿನ ಉನಾ ತಾಲ್ಲೂಕಿನಲ್ಲಿ ಬೇಟೆಯ ಹುಡುಕಾಟದಲ್ಲಿದ್ದ ಸಿಂಹವೊಂದು ಆಕಸ್ಮಿಕವಾಗಿ ತೆರೆದ ಕೃಷಿ ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಅದು ಅಪಾಯದಿಂದ ಪಾರಾಗಿದೆ. ನವಾಬಂದರ್ ಅರಣ್ಯ ಪ್ರದೇಶದ ಸಮೀಪವಿರುವ ಕೃಷಿ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ನೀರು ತುಂಬಿದ್ದ ತೆರೆದ ಬಾವಿಗೆ ಸಿಂಹವು ಆಕಸ್ಮಿಕವಾಗಿ ಬಿದ್ದಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ … Continued

ವಿಡಿಯೋ | ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ಗಳಗಳನೆ ಅತ್ತ ನಟಿ ರಮ್ಯಾ..

ಬೆಂಗಳೂರು: ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಗರದ ಕಗ್ಗದಾಸಪುರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ (Brutality on street dogs) ನಡೆದಿತ್ತು. ಈ ಕ್ರಮವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಣಿಪ್ರಿಯರಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಶ್ವಾನಗಳ ಮೇಲೆ … Continued

ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued