ಮಂತ್ರಿಗಿರಿ ಸಿಗದಿದ್ದಕ್ಕೆ ವಿಶ್ವನಾಥ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ: ಈಶ್ವರಪ್ಪ

ಶಿವಮೊಗ್ಗ: ಸಚಿವ ಸ್ಥಾನ ದೊರೆಯದ ಕಾರಣಕ್ಕೆ ಎಚ್.ವಿಶ್ವನಾಥ ಬಿಜೆಪಿ ಸೇರಿದ್ದರ ಕುರಿತು ಅಸಮಾಧಾನವಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ತಪ್ಪು ಮಾಡಿದ್ದರೆ ಅದನ್ನು ತಿಳಿಸಲಿ, ಅದನ್ನು ಬಿಟ್ಟು ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಸರಿಯಿದ್ದರೆ ಆ ಪಕ್ಷಗಳನ್ನು ಯಾಕೆ ಬಿಟ್ಟು … Continued

ಹಣಕಾಸು ಇಲಾಖೆ ಅಧಿಕಾರಿಗಳೇ ಸಿಎಂ ಯಡಿಯೂರಪ್ಪಗೆ ಟೋಪಿ ಹಾಕಿದ್ದಾರೆ: ಎಚ್‌.ವಿಶ್ವನಾಥ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ಏನೂ ಹೊಸತನವಿಲ್ಲ, ಹಣಕಾಸು ಇಲಾಖೆ ಅಧಿಕಾರಿಗಳೇ ಮುಖ್ಯಮಂತ್ರಿಗೆ ಟೋಪಿ ಹಾಕಿದ್ದಾರೆ ಎಂದು ಬಿಜೆಪಿ ಮುಖಂಡ ಎಚ್‌.ವಿಶ್ವನಾಥ ಹೇಳಿದರು. ಕಳೆದ ೧೦ ವರ್ಷಗಳ ಬಜೆಟ್‌ ನೋಡಿದ್ದೇನೆ. ಇದರಲ್ಲಿ ಏನೂ ಹೊಸ ಯೋಜನೆಗಳಿಲ್ಲ. ಅಂಕಿ-ಅಂಶಗಳನ್ನು ತಿರುಗು-ಮುರುಗು ಮಾಡಿದ್ದಾರೆ. ಹಣಕಾಸು ಖಾತೆ ನಿಭಾಯಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಲವು ಬಾರಿ ಬಜೆಟ್‌ … Continued

ಯತ್ನಾಳ ಪರ ವಿಶ್ವನಾಥ ಬ್ಯಾಟಿಂಗ್‌

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಮಾಡಿರುವ ಆರೋಪದಲ್ಲಿ ನ್ಯಾಯವಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷ, ಸರ್ಕಾರದ ವಿರುದ್ಧ ಹೇಳಿಕೆ ನೀಡಿಲ್ಲ ಅಲ್ಲದೆ ಜನ ವಿರೋಧಿ ಭಾಷಣಗಳನ್ನೂ ಮಾಡಿಲ್ಲ, ಸರ್ಕಾರದ … Continued

ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯ: ಎಚ್‌.ವಿಶ್ವನಾಥ ಆರೋಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಕುರುಬರ ಅಭಿವೃದ್ಧಿಗೆ ಏನೂ ಮಾಡಲಿಲ್ಲ. ಅವರ ಸಿಎಂ ಅವಧಿಯಲ್ಲಿಯೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ. ಕೇವಲ ದರ್ಪ, ಅಹಂಕಾರದಿಂದ ಸರಕಾರ ನಡೆಸಲು ಸಾಧ್ಯವಿಲ್ಲ. ಸಿದ್ದು ತಮ್ಮ ಅಹಂಕಾರದಿಂದಲೇ ಅಧಿಕಾರ ಕಳೆದುಕೊಂಡರು. ಸಿದ್ದರಾಮಯ್ಯನನ್ನು ಉದ್ಧಾರ ಮಾಡಲು ಹೋಗಿ ನಾನು … Continued

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್‌: ವಿಶ್ವನಾಥ ಲೇವಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಟ್ರಂಪ್ ಎಂದು ಬಿಜೆಪಿ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮ ಸೋಲನ್ನು ಒಪ್ಪಿಕೊಳ್ಳುವುದೂ ಇಲ್ಲ, ಅವರಿಗೆ ಗೆಲ್ಲುವುದಕ್ಕೂ ಆಗುವುದಿಲ್ಲ. ಇದು ಒಂದು ರೀತಿಯಲ್ಲಿ ಟ್ರಂಪಾಯಣದ ಕತೆ ಎಂದು ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತರೆ ರಾಹು-ಕೇತುಗಳು ಸೋಲಿಸಿದರು ಎಂಬುದಾಗಿ ಹೇಳುತ್ತಾರೆ. ತಮ್ಮನ್ನು ಬಿಟ್ಟ್ಟರೆ … Continued

ಹೊರಟ್ಟಿ ನಾನು ಮಂತ್ರಿಯಾಗಿದ್ರೆ ಸಮ್ಮಿಶ್ರ ಸರ್ಕಾರ ಬೀಳ್ತಿರಲಿಲ್ಲ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ನಾನು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ವಿಧಾನ ಪರಿಷತ್‍ನಲ್ಲಿ ಮಂಗಳವಾರಹೇಳಿದರು. ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡುತ್ತಿದ್ದ ಅವರು, ನಾವಿಬ್ಬರು ಮಂತ್ರಿಯಾಗಿದ್ದರೆ ಸಮ್ಮಿಶ್ರ ಸರ್ಕಾರ ಪತನವಾಗುತ್ತಿರಲಿಲ್ಲ ಎಂದಾಗ ಸದನದಲ್ಲಿ ನಗೆಯ ಅಲೆ ತೇಲಿ ಬಂದತು. ಕಾಂಗ್ರೆಸ್ ಸದಸ್ಯರ ಸಹಕಾರದಿಂದ … Continued