ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued

ಇರಾನ್ ಮೇಲೆ ಪರಮಾಣು ಅಸ್ತ್ರ ಬಳಕೆ ಸಿದ್ಧತೆ ಬಗ್ಗೆ ಎಚ್ಚರಿಸಿ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿ ರಾಜೀನಾಮೆ

ವಿಶ್ವಸಂಸ್ಥೆಯ ರಾಜತಾಂತ್ರಿಕರೊಬ್ಬರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ (ECOSOC) ವಿಶೇಷ ಸಲಹಾ ಸ್ಥಾನಮಾನ ಹೊಂದಿರುವ ಅಂತಾರಾಷ್ಟ್ರೀಯ ಸಂಸ್ಥೆ ‘ಪೇಟ್ರಿಯಾಟಿಕ್ ವಿಷನ್’ (PVA) ನ ಮುಖ್ಯ ಪ್ರತಿನಿಧಿ ಮೊಹಮದ್ ಸಫಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇರಾನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಂಭವನೀಯ ಸನ್ನಿವೇಶಕ್ಕೆ ವಿಶ್ವಸಂಸ್ಥೆಯು ಸಿದ್ಧತೆ ನಡೆಸುತ್ತಿದೆ … Continued

ಇರಾನ್‌ನ ನೂತನ ಸರ್ವೋಚ್ಚ ನಾಯಕನ ಮೊದಲ ಹೇಳಿಕೆ : ಹಾರ್ಮುಜ್ ಜಲಸಂಧಿ ಉಲ್ಲೇಖ, ಅಮೆರಿಕಕ್ಕೆ ಖಡಕ್ ಎಚ್ಚರಿಕೆ

ತೆಹ್ರಾನ್‌ : ಇರಾನ್‌ನ ನೂತನ ಸುಪ್ರೀಂ ಲೀಡರ್ (ಪರಮೋಚ್ಚ ನಾಯಕ) ಆಗಿ ನೇಮಕಗೊಂಡ ನಂತರ ತಮ್ಮ ಮೊದಲ ಹೇಳಿಕೆ ನೀಡಿರುವ ಮೊಜ್ತಾಬಾ ಖಮೇನಿ, ಅಮೆರಿಕದ ವಿರುದ್ಧ ಹತೋಟಿಯ ಅಸ್ತ್ರವಾಗಿ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಚ್ಚಿರಲೇಬೇಕು ಮತ್ತು ಮಧ್ಯಪ್ರಾಚ್ಯದ ನೆರೆಹೊರೆಯ ರಾಷ್ಟ್ರಗಳ ಮೇಲಿನ ದಾಳಿಗಳು ಮುಂದುವರಿಯಲಿವೆ ಎಂದು ಹೇಳಿದ್ದಾರೆ. ಗುರುವಾರದಂದು ಸರ್ಕಾರಿ ಟಿವಿಯಲ್ಲಿ ಸುದ್ದಿ … Continued

‘ಭಾರತೀಯರ ಕೆಲಸದ ಪರವಾನಗಿ ರದ್ದುಗೊಳಿಸಿ’: ಬಾಂಗ್ಲಾದೇಶ ಸರ್ಕಾರಕ್ಕೆ ಉಸ್ಮಾನ್ ಹಾದಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ

ನವದೆಹಲಿ: ಅರಾಜಕತೆಯಿಂದ ಬಳಲುತ್ತಿರುವ ಬಾಂಗ್ಲಾದೇಶದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರ ವರ್ಕ್ ಪರ್ಮಿಟ್ (ಕೆಲಸದ ಪರವಾನಗಿ) ರದ್ದುಗೊಳಿಸುವಂತೆ ಅಲ್ಲಿನ ತೀವ್ರಗಾಮಿ ಸಂಘಟನೆ ‘ಇಂಕ್ವಿಲಾಬ್ ಮಂಚ’ ಮಧ್ಯಂತರ ಸರ್ಕಾರವನ್ನು ಒತ್ತಾಯಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಿದ ಭಾರತದ ವಿರುದ್ಧವೇ ಈ ಸಂಘಟನೆ ಈಗ ವಿಷ ಕಾರುತ್ತಿದೆ. ಈ ಸಂಘಟನೆಯನ್ನು ಸ್ಥಾಪಿಸಿದ್ದ ಶರೀಫ್ … Continued

ವೀಡಿಯೊ | ನೀವು ನಮ್ಮ ನೀರು ನಿಲ್ಲಿಸಿದ್ರೆ ನಾವು ನಿಮ್ಮ…; ಉಗ್ರ ಹಫೀಜ್ ಸಯೀದ್ ಧಾಟಿಯಲ್ಲೇ ಭಾರತಕ್ಕೆ ಪಾಕಿಸ್ತಾನ ಮಿಲಿಟರಿ ವಕ್ತಾರನ ಬೆದರಿಕೆ !

ಪಾಕಿಸ್ತಾನಿ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಇತ್ತೀಚೆಗೆ ಭಾರತದ ವಿರುದ್ಧ ದ್ವೇಷ ತುಂಬಿದ ಭಾವನೆಗಳನ್ನು ಹೊರಹಾಕಿದ್ದಾರೆ, ಇದು ಹಿಂದೆ ಜಾಗತಿಕ ಭಯೋತ್ಪಾದಕ ಹಫೀಜ್ ಸಯೀದ್ ವ್ಯಕ್ತಪಡಿಸಿದಂತೆಯೇ ಇದೆ ಎಂಬುದು ಹಲವರ ಅಭಿಪ್ರಾಯವಾಗಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ವರದಿಯಾಗಿರುವ ಹಫೀಜ್ ಸಯೀದ್, ಭಾರತ ಮತ್ತು … Continued

ಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ಐಎಂಎ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎಚ್ಚರಿಕೆ ನೀಡಿದ ಹೈಕೋರ್ಟ್

ನವದೆಹಲಿ: ಯಾವುದೇ ಧರ್ಮದ ಪ್ರಚಾರಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ (ಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ವೈದ್ಯಕೀಯ ಸಂಘದ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎ  ತಿರಸ್ಕರಿಸಿ ಎಚ್ಚರಿಕೆ ನೀಡಿದೆ. ವೇದಿಕೆ ಬಳಸಿಕೊಳ್ಳಬಾರದೆಂಬ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಐಎಂಎ ಅಧ್ಯಕ್ಷ ಜೆ.ಎ.ಜಯಲಾಲ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ಅರ್ಜಿ ವಜಾಗೊಳಿಸಿ ಆದೇಶ ನೀಡುವ … Continued

ಲಾಕ್‌ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯ್ಲಿದೆ; ಒಂದು ವಾರ ಕಾದು ನೋಡ್ತೇವೆ: ಸಿಎಂ

ಬೆಂಗಳೂರು: ರಾಜ್ಯವನ್ನು ಲಾಕ್‌ ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯಲ್ಲಿದೆ. ರಾಜ್ಯವನ್ನು ಮತ್ತೊಮ್ಮೆ ಲಾಕ್‌ ಡೌನ್‌ ಮಾಡಬಾರದು ಎಂಬ ಮನಸ್ಸು ನಿಮ್ಮಲ್ಲಿದ್ದರೆ, ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಮಟ್ಟ ಹಾಕಲು ಇರುವುದು ಇದೊಂದೇ ಮಾರ್ಗ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ರೋಗದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ … Continued

 ನಾಲ್ಕು ವಾರದಲ್ಲಿ  ಸ್ಫೋಟಕ ವಸ್ತು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು 

ರಾಯಚೂರು, ( ಹಟ್ಟಿ ಚಿನ್ನದ ಗಣಿ): ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ, ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು.ಇಲ್ಲದಿದ್ದರೆ ಅಂತಹವರ ಲೈಸೆನ್ಸ್ ( ಪರವನಾಗಿ)ಯನ್ನು ರದ್ದುಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು … Continued