ಜಿಲ್ಲೆಯ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ಹಿಂಸಾಚಾರ : ಆಂಧ್ರಪ್ರದೇಶ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಹೈದರಾಬಾದ್: ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಆಂಧ್ರಪ್ರದೇಶ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಮಲಾಪುರಂನಲ್ಲಿ ಮಂಗಳವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಮತ್ತು ಖಾಸಗಿ ಬಸ್‌ಗೆ ಬೆಂಕಿ ಹಚ್ಚಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. … Continued