ಮತ್ತೆ ಮಳೆ ಚುರುಕು ; ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಮಳೆ ಗುರುವಾರ(ಜುಲೈ 16)ದಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ (ಜುಲೈ 17 ಹಾಗೂ 18) ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಜುಲೈ 21ರ ವರೆಗೂ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 18, ಶನಿವಾರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರಾದ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಹವಾಮಾನ ಇಲಾಖೆಯು ಕರ್ನಾಟಕದ   ಹಲವಾರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಬುಧವಾರ (ಜುಲೈ ೮) ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಅತಿ ಭಾರಿ ಗಾಳಿಮಳೆಯಾಗುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ(IMD)ಯು ಕರ್ನಾಟಕದ ಹಲವು ಭಾಗಗಳಿಗೆ ಹೊಸದಾಗಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ, ಗುಡುಗು-ಮಿಂಚು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಜೋರು ; 4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಜುಲೈ 5 ರಿಂದ 8ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು,  ಕೆಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಒಂದೆರಡು ಸ್ಥಳಗಳಲ್ಲಿ … Continued

ಜುಲೈ 2ಕ್ಕೆ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆಯು ಜುಲೈ 2 ಕ್ಕೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಅಲ್ಲದೆ, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ವರದಿಯ ಪ್ರಕಾರ, ರಾಜ್ಯದ ಕರಾವಳಿ … Continued

ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪಿಯು ಕಾಲೇಜುಗಳಿಗೆ ಗುರುವಾರ(ಜುಲೈ 2) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂಬ … Continued

ಇನ್ಮುಂದೆ ಜೋರಾಗಿ ಅಬ್ಬರಿಸಲಿದೆಯಂತೆ ಮುಂಗಾರು ; ಅವಳಿ ಹವಾಮಾನ ವ್ಯವಸ್ಥೆಯಿಂದ ದೇಶಾದ್ಯಂತ ಭಾರಿ ಮಳೆಯ ಮುನ್ಸೂಚನೆ

ನವದೆಹಲಿ: ಹಲವು ವಾರಗಳಿಂದ ದೇಶದ ಬಹುತೇಕ ಕಡೆ  ನೈರುತ್ಯ ಮುಂಗಾರು ಮಳೆಯ ಕೊರತೆ ದಿನೇದಿನೇ ಹೆಚ್ಚಾಗುತ್ತಿದ್ದ  ವೇಳೆ ಈಗ ಅದು ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಹವಾಮಾನ ತಜ್ಞರ ಪ್ರಕಾರ, ಈ ವಾರ ಬಂಗಾಳ ಕೊಲ್ಲಿ ಮತ್ತು ಮಧ್ಯ ಭಾರತದ ಭಾಗಗಳಲ್ಲಿ ಎರಡು ಮಹತ್ವದ ಹವಾಮಾನ ವ್ಯವಸ್ಥೆಗಳು (ಕಡಿಮೆ ಒತ್ತಡದ ಪ್ರದೇಶಗಳು) ರೂಪುಗೊಳ್ಳುವ ಸಾಧ್ಯತೆ ಇದೆ. … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರದ ಮುನ್ಸೂಚನೆ ; ಜುಲೈ 5ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ನೈರುತ್ಯ ಮುಂಗಾರು ಕರ್ನಾಟಕದ ಕರಾವಳಿ ಭಾಗದಲ್ಲಿ ಅಬ್ಬರಿಸುತ್ತಿದ್ದು, ರಾಜ್ಯದ ಇತರ ಭಾಗಗಳಲ್ಲಿಯೂ ಚುರುಕಾಗುತ್ತಿದೆ. ಜೂನ್ 30ರಿಂದ ಜುಲೈ 5ರ ವರೆಗೆ ಉತ್ತರ ಕನ್ನಡ- ಉಡುಪಿ-ದಕ್ಷಿಣ ಕನ್ನಡದಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 5 ರವರೆಗೂ ಆರೆಂಜ್ ಅಲರ್ಟ್ ಕೊಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆ ಇದ್ದು, … Continued

ಕರ್ನಾಟಕದಲ್ಲಿ ಈ ವಾರ ಮಳೆ ಮತ್ತಷ್ಟು ಚುರುಕು ; ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು,  ಯೆಲ್ಲೋ ಅಲರ್ಟ್ ಕೊಡಲಾಗಿದೆ.  ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ … Continued