ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ನವದೆಹಲಿ: ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರಾದ ಅರ್ಜುನ್ ಸಿಂಗ್ ಮತ್ತು ದಿಬ್ಯೇಂದು ಅಧಿಕಾರಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸಂದೇಶಖಾಲಿ ಘಟನೆಯಿಂದ ತಾವು ಅಸಮಾಧಾನಗೊಂಡಿರುವುದಾಗಿ ಹೇಳಿದ್ದಾರೆ. ಅರ್ಜುನ್‌ ಸಿಂಗ್ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಬರಾಕಪುರ ಮತ್ತು ದಿಬ್ಯೇಂದು ಅಧಿಕಾರಿ ತಮ್ಲುಕ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಲೋಕಸಭೆ ಚುನಾವಣೆ : ಈ ಕ್ಷೇತ್ರದಲ್ಲಿ ವಿಚ್ಛೇದಿತ ದಂಪತಿ ಮಧ್ಯೆಯೇ ನಡೆಯಲಿದೆ ಸ್ಪರ್ಧೆ…!

ಕೋಲ್ಕತ್ತಾ: ವಿಚ್ಛೇದಿತ ದಂಪತಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕಣಕ್ಕೆ ಇಳಿಯಲಿದ್ದಾರೆ…! ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭಾನುವಾರ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಇದು ಚರ್ಚೆಯ ವಿಷಯವಾಗಿದೆ. ಸುಜಾತಾ ಮೊಂಡಲ್ ಅವರು ತಮ್ಮ ಮಾಜಿ ಪತಿ ಸೌಮಿತ್ರಾ ಖಾನ್ ವಿರುದ್ಧ ಬಂಡಾಲ್‌ನ ಬಂಕುರಾ ಜಿಲ್ಲೆಯ ಬಿಷ್ಣುಪುರ ಕ್ಷೇತ್ರದಿಂದ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ರಾಮನವಮಿಗೆ ʼಸಾರ್ವತ್ರಿಕ ರಜೆʼ ಘೋಷಣೆ; ಇದ್ಯಾವ ನಾಟಕ ಎಂದ ಬಿಜೆಪಿ

ಕೋಲ್ಕತ್ತಾ: ಈ ವರ್ಷದ ಏಪ್ರಿಲ್ 18ರ ರಾಮ ನವಮಿಯನ್ನು ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ದುರ್ಗಾ ಪೂಜೆ, ಕಾಳಿ ಪೂಜೆ ಮತ್ತು ಸರಸ್ವತಿ ಪೂಜೆ ಇವು ಪಶ್ಚಿಮ ಬಂಗಾಳದ ಪ್ರಮುಖ ಹಬ್ಬಗಳು. ರಾಮ ನವಮಿಗೆ ಇದೇ ಮೊದಲ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಮಮತಾ ಬ್ಯಾನರ್ಜಿಯವರ ತೃಣಮೂಲ … Continued

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ರಾಜೀನಾಮೆ ನೀಡಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಕುನಾರ ಹೆಂಬ್ರಾಮ್..!

ಕೋಲ್ಕತ್ತಾ:  ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಕುನಾರ್ ಹೆಂಬ್ರಾಮ್ ಅವರು ವೈಯಕ್ತಿಕ ಕಾರಣ ನೀಡಿ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷವನ್ನು ತೊರೆದಿದ್ದಾರೆ. ಹೆಂಬ್ರಾಮ್ ಜಾರ್‌ಗ್ರಾಮದ ಬಿಜೆಪಿ ಸಂಸದರಾಗಿದ್ದು, ರಾಜ್ಯದ ಬುಡಕಟ್ಟು ಪ್ರಾಬಲ್ಯದ ಮಾಜಿ ಮಾವೋವಾದಿಗಳ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆ ನಡೆಸಲಿರುವ ಕೆಲವು ದಿನಗಳ ಮೊದಲು ಈ ಬೆಳವಣಿಗೆ ನಡೆದಿದೆ. ಶನಿವಾರ ಮಾಧ್ಯಮದವರೊಂದಿಗೆ … Continued

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ ಸಂದೇಶ್‌ಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಸಿಬಿಐಗೆ ಹಸ್ತಾಂತರ

ಸಂದೇಶ್‌ಖಾಲಿ ಪ್ರಕರಣದ ಉಚ್ಛಾಟಿತ ಟಿಎಂಸಿ ನಾಯಕ ಮತ್ತು ಆರೋಪಿ ಶೇಖ್ ಷಹಜಹಾನ್ ನನ್ನು ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಬುಧವಾರ ಮುಂಜಾನೆ, ಹೈಕೋರ್ಟ್ ಪಶ್ಚಿಮ ಬಂಗಾಳ ಸಿಐಡಿಗೆ ನಿಂದನೆ ನೋಟಿಸ್ ಜಾರಿಗೊಳಿಸಿತು ಮತ್ತು ಷಹಜಹಾನ್‌ನನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ವಿಫಲವಾದ ನಂತರ ಎರಡು … Continued

ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

55 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧನ : ಪಕ್ಷದಿಂದ 6 ವರ್ಷ ಅಮಾನತು ಮಾಡಿದ ಟಿಎಂಸಿ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಬಂಧನದ ಬಳಿಕ ತೃಣ ಮೂಲ ಕಾಂಗ್ರೆಸ್ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಆತ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರ … Continued