ಸೋನಾ ಪಪ್ಪು ಸುಲಿಗೆ ಪ್ರಕರಣ: ಕೋಲ್ಕತ್ತಾ ಡಿಸಿಪಿ ಶಾಂತನು ಸಿನ್ಹಾ ಬಿಸ್ವಾಸ್ ಬಂಧಿಸಿದ ಇ.ಡಿ.

ನವದೆಹಲಿ: ಸುಲಿಗೆ, ಹಣ ವರ್ಗಾವಣೆ ಮತ್ತು ಭೂಕಬಳಿಕೆ ಆರೋಪಗಳನ್ನು ಎದುರಿಸುತ್ತಿರುವ ಹೈಪ್ರೊಫೈಲ್ ಸೋನಾ ಪಪ್ಪು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಗುರುವಾರ ಕೋಲ್ಕತ್ತಾ ಉಪ ಪೊಲೀಸ್ ಆಯುಕ್ತ (DCP) ಶಾಂತನು ಸಿನ್ಹಾ ಬಿಸ್ವಾಸ್ ಅವರನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಈ ಹಿಂದೆ ಹಲವು ಬಾರಿ ಸಮನ್ಸ್ ಜಾರಿ … Continued

ವಕೀಲರ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ ಹಾಜರು : ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್

ನವದೆಹಲಿ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಗೌನ್ ಮತ್ತು ಬಿಳಿ ಬ್ಯಾಂಡ್ ಧರಿಸಿ ಹಾಜರಾದ ಬೆನ್ನಲ್ಲೇ, ಭಾರತೀಯ ವಕೀಲರ ಪರಿಷತ್ತು (Bar Council of India) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಬ್ಯಾನರ್ಜಿ ಅವರ ದಾಖಲಾತಿ ಮತ್ತು ವಕೀಲ ವೃತ್ತಿಯ ಸ್ಥಿತಿಗತಿಯ ಬಗ್ಗೆ ವಿವರವಾದ ಮಾಹಿತಿಯನ್ನು … Continued

ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಹತ್ಯೆ ಪ್ರಕರಣ: ಯುಪಿಐ ಹಣ ಪಾವತಿಯಿಂದ ಸಿಕ್ಕಿಬಿದ್ದ ಮೂವರು ಆರೋಪಿಗಳು…!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಹಂತಕರು ಟೋಲ್ ಗೇಟ್‌ನಲ್ಲಿ ಮಾಡಿದ ಒಂದು ಸಣ್ಣ ಯುಪಿಐ (UPI) ಪಾವತಿಯನ್ನು ಬೆನ್ನತ್ತಿದ ವಿಶೇಷ ತನಿಖಾ ತಂಡ (SIT)ವು, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿ ಮೂವರು … Continued

ಪಶ್ಚಿಮ ಬಂಗಾಳದ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ: ಸಚಿವರಾಗಿ ಐವರಿಂದ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು, ಶನಿವಾರ ಬಿಜೆಪಿಯ ಯುಗ ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಐವರು ಶಾಕಸರು ಸಚಿವರಾಗಿ … Continued

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ಕೋಲ್ಕತ್ತಾ: ದಶಕಗಳ ಕಾಲ ಮಮತಾ ಬ್ಯಾನರ್ಜಿಯವರ ಅತ್ಯಂತ ಆಪ್ತ ಹೋರಾಟಗಾರನಾಗಿ, ಎಡಪಂಥೀಯರ ವಿರುದ್ಧ ಬೀದಿಗಿಳಿದು ಹೋರಾಡಿದ್ದ ಸುವೇಂದು ಅಧಿಕಾರಿ, ಈಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದಯದ ಮಹಾ ನಾಯಕನಾಗಿ ಹೊರಹೊಮ್ಮಿದ್ದಾರೆ. ಮೇ ೯ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಳ್ಳಲಿದ್ದು, ಇದು ರಾಜ್ಯದ ಅವರ ರಾಜಕೀಯ ಪಯಣದಲ್ಲಿ ಅತಿದೊಡ್ಡ ಮೈಲಿಗಲ್ಲಾಗಿದೆ. ಶುಕ್ರವಾರ … Continued

ಮಮತಾ ಬ್ಯಾನರ್ಜಿ ಸೋಲಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಆಯ್ಕೆ

ಕೋಲ್ಕತ್ತಾ : ಮಮತಾ ಬ್ಯಾನರ್ಜಿಗೆ ಅವರ ಕ್ಷೇತ್ರದಲ್ಲೇ ಸೋಲುಣಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಚುನಾಯಿತ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಔಪಚಾರಿಕವಾಗಿ ಘೋಷಿಸಿದರು. ಇತ್ತೀಚೆಗೆ … Continued

ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಶಾಕ್‌ ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು … Continued

ಮಮತಾ ಬ್ಯಾನರ್ಜಿಗೆ ಸೋಲುಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರನ್ನು ಅವರ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲಿಸಿರುವ ಬಿಜೆಪಿಯ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು … Continued

ಚುನಾವಣೆಯಲ್ಲಿ ಟಿಎಂಸಿ ಸೋತು ಸುಣ್ಣವಾದ್ರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಲನುಭವಿಸಿದರೂ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ. ಈ ಚುನಾವಣಾ ಫಲಿತಾಂಶವು ಜನರ ನೈಜ ತೀರ್ಪಲ್ಲ, ಬದಲಾಗಿ ಇದೊಂದು “ಪಿತೂರಿ” ಎಂದು ಅವರು ಆರೋಪಿಸಿದ್ದಾರೆ. 2026ರ ಪಶ್ಚಿಮ ಬಂಗಾಳ ಚುನಾವಣಾ ಸೋಲಿನ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ … Continued

ತೃಣಮೂಲ ಭದ್ರಕೋಟೆಯಲ್ಲೇ ಮಮತಾ ಸೋಲಿಸಿದ ಸುವೇಂದು ; ಭವಾನಿಪುರದಲ್ಲಿ ʼದೀದಿʼಯನ್ನು ಬಿಜೆಪಿ ‘ಚಕ್ರವ್ಯೂಹ’ದಲ್ಲಿ ಕೆಡವಿದ್ದು ಹೇಗೆ ?

ಕೋಲ್ಕತ್ತಾ: ಸರಿಯಾಗಿ ಐದು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಕಹಿ ಉಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಈಗ 2026ರಲ್ಲಿ ಅದನ್ನು ಮರುಕಳಿಸಿದ್ದಾರೆ. ಈ ಬಾರಿ ನಂದಿಗ್ರಾಮದಲ್ಲಲ್ಲ, ಬದಲಿಗೆ ಮಮತಾ ಅವರ ಭದ್ರಕೋಟೆಯಾದ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಸುವೇಂದು ಗೆಲುವಿನ ನಗೆ ಬೀರಿದ್ದಾರೆ. 2021ರಲ್ಲಿ ನಂದಿಗ್ರಾಮದ ಸೋಲಿನ ನಂತರ … Continued