ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ ವಿಚಾರ ; ಟಿಎಂಸಿಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆ

ನವದೆಹಲಿ: ಪಶ್ಚಿಮ ಬಂಗಾಳದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ನಿಯೋಜಿಸುವ ಚುನಾವಣಾ ಆಯೋಗದ (EC) ನಿರ್ಧಾರವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಿರಸ್ಕರಿಸಿದೆ. ಚುನಾವಣಾ ಆಯೋಗದ ನಿರ್ಧಾರದಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಈ ವಿಷಯದಲ್ಲಿ ಹೆಚ್ಚಿನ ಆದೇಶಗಳನ್ನು … Continued

ಪಶ್ಚಿಮ ಬಂಗಾಳ ಚುನಾವಣೆ ; ಮತ ಎಣಿಕೆ ಸಿಬ್ಬಂದಿ ನೇಮಕ ವಿಚಾರ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತ ಎಣಿಕೆ ಸಿಬ್ಬಂದಿ ನೇಮಕಾತಿ ವಿಷಯದಲ್ಲಿ ಈಗ ಕಾನೂನು ಸಮರ ಶುರುವಾಗಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಕೇವಲ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ (PSU) ನೌಕರರನ್ನು ಮಾತ್ರ ಮೇಲ್ವಿಚಾರಕರು ಮತ್ತು ಸಹಾಯಕರನ್ನಾಗಿ ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (TMC) … Continued

ಪಶ್ಚಿಮ ಬಂಗಾಳ ಚುನಾವಣೆ ; ಹೊರಬಿದ್ದ ಮತ್ತೊಂದು ಎಕ್ಸಿಟ್‌ ಪೋಲ್‌; ಈ ಬಾರಿ ಬಿಜೆಪಿ ಸುನಾಮಿ ಎಂದ ಟುಡೇಸ್ ಚಾಣಕ್ಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಬ್ಬರ ಮುಗಿದು ಈಗ ಫಲಿತಾಂಶದ ಕುತೂಹಲ ಮನೆಮಾಡಿದೆ. ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು (Exit Polls) ರಾಜ್ಯದಲ್ಲಿ ದೊಡ್ಡ ರಾಜಕೀಯ ಕಂಪನದ ಮುನ್ಸೂಚನೆ ನೀಡಿವೆ. ವಿಶೇಷವಾಗಿ ಗುರುವಾರ ಹೊರಬಿದ್ದ ‘ಟುಡೇಸ್ ಚಾಣಕ್ಯ’ ಸಮೀಕ್ಷೆಯು ರಾಜ್ಯದಲ್ಲಿ ಬಿಜೆಪಿ … Continued

ಪಶ್ಚಿಮ ಬಂಗಾಳ ಚುನಾವಣೆ : ಈ ಬಾರಿ ಬಿಜೆಪಿ ಎಂದ 4 ಎಕ್ಸಿಟ್ ಪೋಲ್ ; ಮಮತಾಗೆ ಮತ್ತೆ ಅಧಿಕಾರ ಎಂದ 2 ಎಕ್ಸಿಟ್ ಪೋಲ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಮತಗಟ್ಟೆ ಸಮೀಕ್ಷೆಗಳು (Exit Polls) ಹೊರಬಂದಿದ್ದು ನಾಲ್ಕು ಪ್ರಮುಖ ಸಮೀಕ್ಷೆಗಳು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಬಿಜೆಪಿ ಭೇದಿಸಲಿದೆ ಎಂದು ಭವಿಷ್ಯ ನುಡಿದಿದ್ದರೆ, ಎರಡು ಸಮೀಕ್ಷೆಗಳು ತೃಣಮೂಲ ಕಾಂಗ್ರೆಸ್ (TMC) ಸತತ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿವೆ. ಒಟ್ಟಾರೆಯಾಗಿ, ಬಂಗಾಳದಲ್ಲಿ ಈ ಬಾರಿ … Continued

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್ ಅಂಟಿಸಿದ ಆರೋಪ; ಮತದಾನ ಸ್ಥಗಿತ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎರಡನೇ ಹಂತದ ಮತದಾನದ ವೇಳೆ ಹೈವೋಲ್ಟೇಜ್ ಕ್ಷೇತ್ರವಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ತಾ ವಿಧಾನಸಭಾ ಕ್ಷೇತ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎವಿಎಂ ಯಂತ್ರದ ಬಿಜೆಪಿಗೆ ಮತ ಒತ್ತುವ ಬಟನ್ ಮೇಲೆ ಟೇಪ್ ಹಚ್ಚಿ ಮತದಾನಕ್ಕೆ ಅಡ್ಡಿಪಡಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದ ಬೆನ್ನಲ್ಲೇ ಕೆಲವು ಬೂತ್‌ಗಳಲ್ಲಿ ಮತದಾನವನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continued

ಪಶ್ಚಿಮ ಬಂಗಾಳ: 2ನೇ ಹಂತದ ಮತದಾನಕ್ಕೂ ಮುನ್ನ ʼಟಿಎಂಸಿ ಕಾರ್ಯಕರ್ತʼನ ಮನೆಯಲ್ಲಿ 100 ಕಚ್ಚಾ ಬಾಂಬ್‌ಗಳು ವಶಕ್ಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಇಲ್ಲಿನ ಭಾಂಗರ್ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತನೆನ್ನಲಾದ ರಫಿಕುಲ್ ಇಸ್ಲಾಂ ಎಂಬುವವರ ಮನೆಯಿಂದ ಪೊಲೀಸರು ಸುಮಾರು 100 ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟ ಮಾಹಿತಿ ಮೆರೆಗೆ … Continued

ಪಶ್ಚಿಮ ಬಂಗಾಳದಲ್ಲಿ ಶೇ.92.03, ತಮಿಳುನಾಡಿನಲ್ಲಿ ಶೇ. 84.29 ಮತದಾನ

ಕೋಲ್ಕತ್ತಾ/ಚೆನ್ನೈ : ಪಶ್ಚಿಮ ಬಂಗಾಳದ ಮೊದಲನೇ ಹಂತದ ಮತದಾನ ಮತ್ತು ತಮಿಳುನಾಡು ವಿಧಾನಸಭೆಯ ಮತದಾನ ಪೂರ್ಣಗೊಂಡಿದೆ. ಎರಡೂ ರಾಜ್ಯಗಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾರರು ಹಕ್ಕುಚಲಾಯಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ. 92.03ರಷ್ಟು ಮತದಾನವಾಗಿದ್ದು, ಸ್ವಾತಂತ್ರ್ಯದ ನಂತರ ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮತದಾನವಾಗಿರುವುದುಈ ಬಾರಿ ಎನ್ನುವುದು ವಿಶೇಷ. ತಮಿಳುನಾಡಿನಲ್ಲಿ ಶೇ. 84ಕ್ಕಿಂತ … Continued

ಐ-ಪಿಎಸಿ ಪ್ರಕರಣ | ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಬೇಡಿ”: ಮಮತಾಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಸಲಹೆಗಾರರ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ದಾಳಿಯ ವೇಳೆ ಹಸ್ತಕ್ಷೇಪ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವಾದವು ಕೇವಲ ‘ಕೇಂದ್ರ ಮತ್ತು ರಾಜ್ಯದ ನಡುವಿನ ಒಕ್ಕೂಟ ವ್ಯವಸ್ಥೆಯ ವಿವಾದ’ (Federal … Continued

ರಾಹುಲ್ ಗಾಂಧಿ ಕೋಲ್ಕತ್ತಾ ಭೇಟಿ ರದ್ದು: ಮಮತಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಏಪ್ರಿಲ್ 23 ರ ಕೋಲ್ಕತ್ತಾ ಭೇಟಿ ರದ್ದಾಗಿದೆ. ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮತ್ತು ಎಡರಂಗದ ಮೈತ್ರಿಕೂಟದ ಪರವಾಗಿ … Continued