ಟಿಎಂಸಿ ಸೇರಿದ ನೇತಾಜಿ ಸುಭಾಷಚಂದ್ರ ಬೋಸ್ ಮೊಮ್ಮಗ ಚಂದ್ರಕುಮಾರ ಬೋಸ್

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷಚಂದ್ರ ಬೋಸ್ ಅವರ ಮೊಮ್ಮಗ (Grandnephew) ಚಂದ್ರಕುಮಾರ ಬೋಸ್ ಅವರು ತೃಣಮೂಲ ಕಾಂಗ್ರೆಸ್ (TMC) ಸೇರ್ಪಡೆಯಾಗಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಸದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯನ್ನು ತೊರೆದಿದ್ದ ಬೋಸ್, ಈಗ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಕೈ ಹಿಡಿದಿದ್ದಾರೆ. ಸುಭಾಷಚಂದ್ರ … Continued

ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿಗೆ ಸೇರ್ಪಡೆಯಾದ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್

ನವದೆಹಲಿ: 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಖ್ಯಾತ ಟೆನ್ನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಕಿರಣ ರಿಜಿಜು ಮತ್ತು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಲಿಯಾಂಡರ್‌ … Continued

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ … Continued

“ಅವರಿಗೆ ನನ್ನ ಮೇಲೆ ಕೋಪವಿದೆಯೇ ? ಮಮತಾ ಮೇಲೆ ರಾಷ್ಟ್ರಪತಿ ಮುರ್ಮು ಅಸಮಾಧಾನ

ಕೋಲ್ಕತ್ತಾ : ವಿಧಾನಸಭೆ ಚುನಾವಣೆಗೆ ವಾರಗಳ ಮೊದಲು ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಂಪುಟದ ಯಾವುದೇ ಸಚಿವರು ತಮ್ಮನ್ನು ಸ್ವಾಗತಿಸಲು ಹಾಜರಿಲ್ಲದ ಕಾರಣ ಮಮತಾ ಬ್ಯಾನರ್ಜಿ ತಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆಯೇ ಎಂದು ಶನಿವಾರ ಪ್ರಶ್ನಿಸಿದ್ದಾರೆ. ತಾವು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ … Continued

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕ ಸದಸ್ಯ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಂಬಿಕಸ್ತ ಒಡನಾಡಿ ಹಾಗೂ ಪಕ್ಷದ ಪ್ರಧಾನ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಮುಕುಲ್‌ ರಾಯ್, … Continued

ಮತದಾರರ ಪಟ್ಟಿ ಪರಿಷ್ಕರಣೆಗೆ ಅಡ್ಡಿಪಡಿಸಲು ಬಿಡಲ್ಲ : ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಚುನಾವಣಾ ಆಯೋಗಕ್ಕೆ (ECI) ನಿಯೋಜಿಸಲಾದ 8,000ಕ್ಕೂ ಹೆಚ್ಚು ಅಧಿಕಾರಿಗಳು ಮಂಗಳವಾರ ಸಂಜೆಯೊಳಗೆ ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳ ಮುಂದೆ ವರದಿ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದೆ. ಅಲ್ಲದೆ, ಪಶ್ಚಿಮ … Continued

ಪಶ್ಚಿಮ ಬಂಗಾಳ ಚುನಾವಣೆ 2026 : ಎಲ್ಲ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್‌ ನಿರ್ಧಾರ

ಕೋಲ್ಕತ್ತಾ: ಮುಂಬರುವ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರ ಹೊರಬಿದ್ದಿದೆ. ಗುರುವಾರ (ಫೆಬ್ರವರಿ 5) ನವದೆಹಲಿಯಲ್ಲಿ … Continued

ಎಸ್‌ ಐಆರ್‌: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಚುನಾವಣಾ ಆಯೋಗವು (EC) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವುದನ್ನು ಪ್ರಶ್ನಿಸಿ ಅವರು ಕಾನೂನು ಹೋರಾಟ ನಡೆಸಿದ್ದಾರೆ. ಚುನಾವಣಾ ಆಯೋಗವು “ಬಂಗಾಳದ ಸಾಮಾನ್ಯ ನಾಗರಿಕರಿಗೆ ಅಭೂತಪೂರ್ವ ಸಂಕಷ್ಟ ಮತ್ತು ಯಾತನೆಯನ್ನು … Continued

ಐ-ಪ್ಯಾಕ್‌ ಪ್ರಕರಣ : ಮಮತಾ ಬ್ಯಾನರ್ಜಿ ವಿರುದ್ಧ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ. ಮೊರೆ

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ (I-PAC) ಕಚೇರಿಗಳ ಮೇಲೆ ನಡೆದ ದಾಳಿಯ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರಿ ಅಧಿಕಾರಿಗಳು ತನಿಖೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಲಿದ್ದಲು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ-ಪ್ಯಾಕ್ ಕಚೇರಿಗಳಲ್ಲಿ ಇಡಿ ಶೋಧ … Continued

ಐ-ಪ್ಯಾಕ್ (I-PAC) ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಇ.ಡಿ.

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆಯಾದ ಐ-ಪ್ಯಾಕ್ (I-PAC) ಕಚೇರಿ ಹಾಗೂ ಅದರ ನಿರ್ದೇಶಕರ ಮನೆಗಳ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾನುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (CBI) ವಹಿಸಬೇಕೆಂದು ಇ.ಡಿ. ಆಗ್ರಹಿಸಿದೆ. ಕೋಲ್ಕತ್ತಾದಲ್ಲಿರುವ ಐ-ಪ್ಯಾಕ್ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ … Continued