ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್‌, ವೋಟರ್‌ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ

ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued

ಯುವತಿಯ ಹೆಣಕ್ಕೆ ತಾಳಿ ಕಟ್ಟಿ ಮದುವೆಯಾದ ಯುವಕ…!

ಗಿರೀದಿಹ್ (ಜಾರ್ಖಂಡ್) : ಗಿರೀದಿಹ್ (ಜಾರ್ಖಂಡ್): ಜಾರ್ಖಂಡ್‌ನ ಗಿರೀದಿಹ್ ಜಿಲ್ಲೆಯಲ್ಲಿ ಯುವತಿಯೊಬ್ಬಳ ನಿಗೂಢ ಸಾವಿನ ಪ್ರಕರಣವೊಂದು ಅತ್ಯಂತ ವಿಚಿತ್ರ ಹಾಗೂ ಆಘಾತಕಾರಿ ತಿರುವು ಪಡೆದುಕೊಂಡಿದೆ. ಯುವತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಯುವಕನೇ, ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಬಂದು, ಆಕೆಯ ಮೃತದೇಹಕ್ಕೆ ಶಾಸ್ತ್ರೋಕ್ತವಾಗಿ ಸಿಂಧೂರವಿಟ್ಟು, ಮದುವೆ ವಿಧಿವಿಧಾನಗಳನ್ನು ಪೂರೈಸಿ ತಾಳಿಕಟ್ಟಿ ಮದುವೆಯಾಗಿದ್ದಾನೆ. ನಂತರ ಚಿತೆಗೆ … Continued

ಜೊಯಿಡಾ ; ವೃದ್ಧೆ ಮೇಲೆ ಚಿರತೆ ದಾಳಿ

ಕಾರವಾರ : ಮುಂಜಾನೆ ಶೌಚಕ್ಕೆಂದು ಹೊರಬಂದ ವೃದ್ಧೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಪಣಸೋಲಿ ವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. 70 ವರ್ಷದ ವೃದ್ಧೆ ಸುಶೀಲಾ ದೇಸಾಯಿ ಪ್ರತಿರೋಧ ತೋರಿ ಪಾರಾಗಿ ಬಂದಿದ್ದಾರೆ ಎಂದು ಹೇಳಲಾಗಿದೆ. ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದ ನಿವಾಸಿ ಸುಶೀಲಾ … Continued

ಬೆಂಗಳೂರು : ಪ್ರೇಮ ಪ್ರಸ್ತಾವನೆ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ-ದೌರ್ಜನ್ಯ

ಬೆಂಗಳೂರು: ತನ್ನನ್ನು ಪ್ರೀತಿಸು ಎಂದು ಒತ್ತಡ ಹೇರಿದರೂ ಅದನ್ನು ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್ 22ರಂದು ಮಧ್ಯಾಹ್ನ ಸುಮಾರು 3:20ರ ಸುಮಾರಿಗೆ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿ ನಗರದ ಬಳಿಯ ಖಾಸಗಿ ಪಿಜಿ (PG) … Continued

ಸ್ನೇಹಿತರ ಜೊತೆ ಪಾರ್ಟಿ: ಪೊಲೀಸರು ಬಂದಿದ್ದಕ್ಕೆ ಹೆದರಿ ತಪ್ಪಿಸಿಕೊಳ್ಳುವಾಗ ಬಾಲ್ಕನಿಯಿಂದ ಬಿದ್ದು ಯುವತಿಗೆ ಗಾಯ

ಬೆಂಗಳೂರು: ನಗರದ ಬ್ರೂಕ್‌ಫೀಲ್ಡ್‌ನಲ್ಲಿರುವ ಹೋಟೆಲ್‌ವೊಂದರ ಬಾಲ್ಕನಿಯಿಂದ ಕೆಳಗೆ ಇಳಿಯಲು ಡ್ರೈನ್‌ಪೈಪ್ (ಕೊಳಾಯಿ) ಬಳಸಲು ಯತ್ನಿಸಿದ 21 ವರ್ಷದ ಯುವತಿಯೊಬ್ಬಳು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ. ಪಾರ್ಟಿಯ ಗದ್ದಲದ ಕುರಿತು ದೂರು ಬಂದ ನಂತರ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿದ್ದರಿಂದ ಆತಂಕಗೊಂಡ ಯುವತಿ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದ್ದಳು ಎನ್ನಲಾಗಿದೆ. … Continued

ಗೋಕರ್ಣ : ಕುಡ್ಲೇ ಬೀಚ್‌ನಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆಯ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ (Kudle Beach) ಸೋಮವಾರ ಸಮುದ್ರದಲ್ಲಿ ಮುಳುಗಿತ್ತಿದ್ದ ವಿದೇಶಿ ಮಹಿಳೆಯನ್ನು (Woman) ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ರಕ್ಷಣೆ ಮಾಡಲಾದ ಮಹಿಳೆಯನ್ನು ಕಜಕಿಸ್ತಾನ ಮೂಲದ (Kazakhstan) ಐದಾಲಿ (25) ಎಂದು ಗುರುತಿಸಲಾಗಿದೆ. ಕಜಕಿಸ್ತಾನ ಮೂಲದ ದಂಪತಿ ಕುಡ್ಲೆ ಬೀಚ್‌ನಲ್ಲಿ ಈಜಲು ಹೋದಾಗ ಮಹಿಳೆ ಸಮುದ್ರದ ಅಲೆಗೆ … Continued

ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

8 ಜನರ ಜೊತೆ ಮದುವೆ…ಲಕ್ಷ ಲಕ್ಷ ಹಣ ಸುಲಿಗೆ…9ನೇ ಮದುವೆ ಪ್ರಯತ್ನದಲ್ಲಿದ್ದಾಗ ಪೊಲೀಸರ ಬಲೆಗೆ ಬಿದ್ದ ಮಹಿಳೆ…!

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಎಂಟು ಜನರನ್ನು ಮದುವೆಯಾಗಿ ಒಂಬತ್ತನೇ ವ್ಯಕ್ತಿಯನ್ನು ಮದುವೆಯಾಗುವ ಸಿದ್ಧತೆಯಲ್ಲಿದ್ದಾಗ ಮದುವೆಯಾದವರಿಂದ ಲಕ್ಷ ಲಕ್ಷ ಹಣ ಸುಲಿಗೆ ಮಾಡಿದ ಆರೋಪದ ಮೇಲೆ 35 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಸಮೀರಾ ಫಾತಿಮಾ ಎಂದು ಗುರುತಿಸಲ್ಪಟ್ಟವಳನ್ನು ಜುಲೈ 29 ರಂದು ಬಂಧಿಸಲಾಯಿತು. ಪೊಲೀಸರ ಪ್ರಕಾರ, ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, … Continued

ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ…!

ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ … Continued

ಒಂದೇ ಸಮನೆ ಅಳುತ್ತಿದೆ ಎಂದು ಕೋಪಗೊಂಡು ಮೂರು ತಿಂಗಳ ಮಗುವನ್ನು ಕೊಂದು ನೀರಿನ ಟ್ಯಾಂಕಿಗೆ ಎಸೆದ ತಾಯಿ…!

ಅಹಮದಾಬಾದ್: ಮೂರು ತಿಂಗಳ ಮಗು ಒಂದೇ ಸಮನೆ ನಿರಂತರವಾಗಿ ಅಳುತ್ತಿದ್ದ ಕಾರಣಕ್ಕೆ ಬೇಸತ್ತ 22 ವರ್ಷದ ಮಹಿಳೆಯೊಬ್ಬರು ಆತನನ್ನು ಭೂಗತ ನೀರಿನ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿದ ಆರೋಪದ ಮೇಲೆ ಇಲ್ಲಿ ಬಂಧಿತಳಾಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕರಿಷ್ಮಾ ಬಾಘೇಲ್ ಎಂಬ 22 ವರ್ಷದ ಮಹಿಳೆ ಕಳೆದ ಶನಿವಾರ ತನ್ನ ಮೂರು ತಿಂಗಳ ಮಗ … Continued