ಆರೋಪಿ ಬಂಧಿಸದೆ ಯುವತಿ ಹಾಜರಾಗಲು ಭಯಮುಕ್ತ ವಾತಾವರಣ ಸಾಧ್ಯವಿಲ್ಲ; ಯುವತಿ ಪರ ವಕೀಲ ಜಗದೀಶ್

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಧೀಶರ ಮುಂದೆಯೇ ಹೇಳಿಕೆಗಳನ್ನು ದಾಖಲಿಸಲಿದ್ದಾಳೆ. ಆದರೆ ಆಕೆ ಬಂದು ಹೇಳಿಕೆಗಳನ್ನು ದಾಖಲಿಸಲು ಒಳ್ಳೆಯ ವಾತಾವರಣ ಕಲ್ಪಿಸಬೇಕು ಎಂದು ಸಿಡಿ ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಯುವತಿ ಹೇಳಿಕೆ ರೆಕಾರ್ಡ್ ಮಾಡಲು ಅನುಮತಿ ಕೇಳುತ್ತಿದ್ದೇವೆ. ಯುವತಿಗೆ ಸೂಕ್ತ … Continued

ತಂದೆ-ಸಹೋದರ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸುತ್ತಿರುವ ಸಿಡಿ ಪ್ರಕರಣ ಶನಿವಾರ ಸಾಕಷ್ಟು ತಿರುವು ಕಂಡಿದ್ದು, ಈಗ ಸಿಡಿ ಯುವತಿಯು ೫ನೇ ವಿಡಿಯೋ ಬಿಡುಗಡೆ ಮಾಡಿರುವುದು ಮತ್ತೊಂದು ಟ್ವಿಸ್ಟ್‌ಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ರಮೇಶ್ ಜಾರಕಿಹೊಳಿ ಹಾಗೂ ಸಿಡಿಯಲ್ಲಿ ಇದ್ದಾಳೆ ಎನ್ನಲಾಗುತ್ತಿರುವ ಯುವತಿಯ ಪೋಷಕರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸಿಡಿ ಯುವತಿಯ ಮತ್ತೊಂದು … Continued

ಧಾರಾವಾಹಿ ರೂಪದಲ್ಲಿ ಬಿಡುಗಡೆ ಆಗುತ್ತಿರುವ ಆಡಿಯೋ- ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋಗಳು ಸರಣಿ ಧಾರಾವಾಹಿ ತರಹ ಬರುತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ  ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ … Continued

ನನ್ನ ಭೇಟಿಗೆ ಯುವತಿ ಬಂದಿರಬಹುದು. ನಾನು ಭೇಟಿ ಮಾಡಿಲ್ಲ: ಡಿಕೆಶಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಭೇಟಿಗೆ ಪ್ರಯತ್ನಿಸಿದ್ದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಯುವತಿ ನಮ್ಮ ಕಚೇರಿಗೆ ಬಂದಿರಬಹುದು. ಆದರೆ ಆ ಯುವತಿ ನನ್ನನ್ನು ಭೇಟಿಯಾಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ … Continued

ಸಿಡಿ ಹಗರಣಕ್ಕೆ ಮತ್ತೆ ಟ್ವಿಸ್ಟ್: ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ..

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಮ್ಮ ಆಟ ಶುರು, ಇಂದು (ಶನಿವಾರ) ಸಂಜೆ ೪ರಿಂದ ೬ ಗಂಟೆಯೊಳಗೆ ಹೊಸ ಬಾಂಬ್‌ ಹಾಕುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಈಗ ಸಿಡಿ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಬೆಳಿಗ್ಗೆ ಬಿಡುಗಡೆಯಾಗಿದೆ. ದಿನಕ್ಕೊಂದು ತಿರುವುದು ಪಡೆದುಕೊಳ್ಳುತ್ತಿರುವ ಈ ಸಿಡಿ ಪ್ರಕರಣ ಈಗ ನಾಲ್ಕನೇ … Continued

ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ: ಕಾಂಗ್ರೆಸ್‌ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಟ್ವೀಟ್‌ ಮಾಡಿದ್ದು, ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ. … Continued

ಅಂತಹ ಸರ್ಕಾರವನ್ನೇ ಉರುಳಿಸಿದ್ದೇನೆ.. ಇದ್ಯಾವ ಲೆಕ್ಕ..

ಬೆಂಗಳೂರು: ಅಂತಹ ಸರ್ಕಾರವನ್ನೇ(ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ) ಉರುಳಿಸಿದ್ದೇನೆ. ಇದ್ಯಾವ ಲೆಕ್ಕ..?. ಇನ್ನೂ ಇಂತಹ 10 ಸಿಡಿಗಳು ಬಂದರೂ ಅದನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಸಿಡಿ ಯುವತಿ ತಾನು ಸಂತ್ರಸ್ತೆ ಎನ್ನುವುದೇ ಆಗಿದ್ದರೆ ಆಕೆ … Continued

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಿಡಿ ಯುವತಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆಯಾಗಿದ್ದು, ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಶುಕ್ರವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಶುಕ್ರವಾರ (ಮಾ.೨೬) ಮಧ್ಯಾಹ್ನ ಯುವತಿ ಪರವಾಗಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರು … Continued

ತನ್ನ ಬಳಿಯಿದ್ದ 6 ಕೋಟಿ ರೂ.ಬಹುಮಾನ ಗೆದ್ದ ಲಾಟರಿ ಟಿಕೆಟ್‌ ಫಲಾನುಭವಿಗೆ ಹಸ್ತಾಂತರಿಸಿದ ಮಹಿಳೆ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ

ತನ್ನ ಬಳಿ ಇದ್ದ ೬ ಕೋಟಿ ರೂಪಾಯಿ ಗೆದ್ದ ಲಾಟರಿ ಟಿಕೆಟ್‌ ಅನ್ನು ಪ್ರಾಮಾಣಿಕವಾಗಿ ಫಲಾನುಭವಿಗೆ ನೀಡುವ ಮೂಲಕ ಕೇರಳದ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸ್ಮಿಜಾ ಕೆ. ಮೋಹನ್​ ಎಂಬವರು ಜಾಕ್​ಪಾಟ್​ ಟಿಕೆಟ್​ ಅನ್ನು ಚಂದ್ರನ್​ ಎಂಬವರಿಗೆ ಮಾರಾಟ ಮಾಡಿದ್ದರು. ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ ಸ್ಮಿಜಾ ಕೊವಿಡ್‌ ಆರ್ಥಿಕ ಸಂಕಷ್ಟದಲ್ಲಿಯೂ … Continued

ಸಿಡಿ ಮಹಿಳೆ ಸಿದ್ದರಾಮಯ್ಯ- ಡಿಕೆಶಿ ಬಳಿ ರಕ್ಷಣೆ ಕೋರಿರುವ ಮಾಹಿತಿ ಇಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಮಹಿಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. . … Continued